Volakadu: ಡ್ರೈನೇಜ್‌ ಸಮಸ್ಯೆಗೆ ಸಿಗದ ಪರಿಹಾರ

ಸರಕಾರಿ ಶಾಲೆ ಸಮೀಪ ಚರಂಡಿ ಅವ್ಯವಸ್ಥೆಯ ಆಗರ; ಪರಿಸರದಲ್ಲಿ ದುರ್ವಾಸನೆ, ರೋಗ ಭೀತಿ

Team Udayavani, Oct 24, 2024, 6:56 PM IST

12

ವಳಕಾಡು ಪ್ರದೇಶದಲ್ಲಿ ಡ್ರೈನೇಜ್‌ ಚೇಂಬರ್‌ ದುರಸ್ತಿಗೆ ತೋಡಿಟ್ಟಿರುವುದು.

ಉಡುಪಿ: ನಗರದಲ್ಲಿ ಈಗಾಗಲೇ ಒಳಚರಂಡಿ ಸಮಸ್ಯೆ ಹೆಚ್ಚಳವಾಗುತ್ತಿದ್ದು, ಅಲ್ಲಲ್ಲಿ ಡ್ರೈನೇಜ್‌ ಬ್ಲಾಕ್‌ ಆಗುವುದು ಕೊಳಚೆ ನೀರು ನಿಂತು ಪರಿಸರವೆಲ್ಲ ಗಬ್ಬುನಾರುವುದು ಸಾಮಾನ್ಯ ಎನಿಸಿಬಿಟ್ಟಿದೆ. ಇದೀಗ ಕಳೆದ ಹಲವು ದಿನಗಳಿಂದ ವಳಕಾಡು ವಾರ್ಡ್‌ ನಿವಾಸಿಗಳು ಇದೇ ಸಮಸ್ಯೆ ಎದುರಿಸುತ್ತಿದ್ದಾರೆ.

ವಳಕಾಡು ಪ್ರೌಢಶಾಲೆ ಸಮೀಪವೇ ಡ್ರೈನೇಜ್‌ ಚೇಂಬರ್‌ ದುರಸ್ತಿಪಡಿಸುವ ನಿಟ್ಟಿನಲ್ಲಿ ಗುಂಡಿಯನ್ನು ತೋಡಲಾಗಿದ್ದು, ಹಲವು ದಿನಗಳಿಂದ ಕಾಮಗಾರಿ ಮುಂದಕ್ಕೆ ಸಾಗದೇ ತಟಸ್ಥವಾಗಿದೆ. ಈಗಾಗಲೇ 15 ದಿನ ಕಳೆದು ಹೋಗಿದ್ದು, ವ್ಯವಸ್ಥಿತ ಕಾಮಗಾರಿ ನಡೆಯದೇ ಜನರು ತೊಂದರೆ ಅನುಭವಿಸುವಂತಾಗಿದೆ.

ತೋಡಿಟ್ಟ ಗುಂಡಿಯಲ್ಲಿ ತ್ಯಾಜ್ಯ ನೀರು ತುಂಬಿಕೊಂಡಿದ್ದು, ಪರಿಸರದಲ್ಲಿ ಗಬ್ಬುವಾಸನೆ ಹರಡಿಕೊಂಡಿದೆ. ಸಮೀಪದಲ್ಲಿಯೇ ಸರಕಾರಿ ಮಾದರಿ ಪ್ರೌಢಶಾಲೆ ಇದ್ದು, ಶಾಲೆಯ ವಿದ್ಯಾರ್ಥಿಗಳು ಆಚೀಚೆ ಓಡಾಡುತ್ತಾರೆ. ಸಮೀಪದ ನೂರಾರು ವಸತಿ ಸಂಕೀರ್ಣಗಳು ಇದ್ದು, ಜನರು ರೋಗಭೀತಿಯಲ್ಲಿ ದಿನ ಕಳೆಯುವಂತಾಗಿದೆ.

ಬಾಯ್ದೆರೆದ ಹೊಂಡದಲ್ಲಿ ಕೊಳಚೆ ನೀರು ಶೇಖರಣೆಯು ಸೊಳ್ಳೆ ಉತ್ಪತ್ತಿ ತಾಣವಾಗಿ ಪರಿಸರದಲ್ಲಿ ಸೊಳ್ಳೆ ಕಾಟ ಹೆಚ್ಚಳವಾಗಲು ಕಾರಣವಾಗಿದೆ. ಈ ಅವ್ಯವಸ್ಥೆಯಿಂದ ಮಲೇರಿಯಾ, ಡೆಂಗ್ಯೂ ಮೊದಲಾದ ಸಾಂಕ್ರಾಮಿಕ ರೋಗಗಳು ಹೆಚ್ಚುವ ಭೀತಿಯನ್ನು ಸ್ಥಳೀಯರು ಹೊಂದಿದ್ದಾರೆ.

ಡ್ರೈನೇಜ್‌ ಚೇಂಬರ್‌ ಅವ್ಯವಸ್ಥೆ ಹಿನ್ನೆಲೆ ಯಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗು ತ್ತಿದ್ದು, ಕೊಂಚ ನಿಯಂತ್ರಣ ತಪ್ಪಿದರೂ ಅಪಘಾತ ಸಂಭವಿಸುವ ಸಾಧ್ಯತೆ ಇರುತ್ತದೆ. ರಾತ್ರಿ ವೇಳೆ ಓಡಾಡುವವರು ಈ ಬಗ್ಗೆ ಎಚ್ಚರವಹಿಸಬೇಕಾಗಿದೆ ಎಂದು ಸ್ಥಳೀಯರಾದ ನಿತ್ಯಾನಂದ ವಳಕಾಡು, ತಾರಾನಾಥ ಮೇಸ್ತ ಆತಂಕ ವ್ಯಕ್ತಪಡಿಸಿದ್ದಾರೆ.

ಹಳೆ ಯುಜಿಡಿ ಪೈಪ್‌ಲೈನ್‌ ಕುಸಿದಿದ್ದು, ಇದರ ದುರಸ್ತಿ ಕಾರ್ಯ ಸಾಗುತ್ತಿದೆ. ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ. ಜನರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಂಡು ಕಾಮಗಾರಿ ಪೂರ್ಣ ಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
-ರಜನಿ ಹೆಬ್ಟಾರ್‌, ಉಪಾಧ್ಯಕ್ಷೆ, ವಳಕಾಡು ವಾರ್ಡ್‌ ಸದಸ್ಯೆ, ನಗರಸಭೆ ಉಡುಪಿ

ಒಳಚರಂಡಿ ವ್ಯವಸ್ಥೆ ಅಪೂರ್ಣ
ನಗರವು ಕಳೆದ 10 ವರ್ಷದಲ್ಲಿ ಶರವೇಗದಲ್ಲಿ ಬೆಳೆಯುತ್ತಿದ್ದರೂ ಅದಕ್ಕೆ ಪೂರಕವಾಗುವ ರೀತಿಯಲ್ಲಿ ಒಳಚರಂಡಿ ವ್ಯವಸ್ಥೆ(ಯುಜಿಡಿ) ರೂಪುಗೊಂಡಿಲ್ಲ. ಎಲ್ಲೆಲ್ಲಿ ಸಮಸ್ಯೆಗಳಿವೆಯೊ ಅಲ್ಲಲ್ಲಿ ನೋಡಿಕೊಂಡು ಇಂತಿಷ್ಟು ಅನುದಾನ ಮೀಸಲಿಟ್ಟು ಆಗಾಗ ಯುಜಿಡಿ ಕಾಮಗಾರಿಗಳನ್ನು ರೂಪಿಸಲಾಗುತ್ತದೆ. ಇಡೀ ನಗರಕ್ಕೆ ಮುಂದಿನ 50 ವರ್ಷಗಳ ದೂರದೃಷ್ಟಿಯೊಂದಿಗೆ ಶಾಶ್ವತ ಯುಜಿಡಿ ಯೋಜನೆಗೆ ಕಾಲ ಇನ್ನೂ ಕೂಡಿ ಬಂದಿಲ್ಲ. ಹಿಂದಿನ ಸರಕಾರದಲ್ಲಿ ಯುಜಿಡಿ ಅನುದಾನಕ್ಕೆ ಗರಿಷ್ಠ ಪ್ರಯತ್ನ ನಡೆದರೂ, ಅನುದಾನ ಬಿಡುಗಡೆಗೊಳ್ಳದೆ ಇಂದಿಗೂ ಈ ಯೋಜನೆ ನನೆಗುದಿಗೆ ಬಿದ್ದಿದೆ.

ಕುಸಿಯುತ್ತಿದೆ ಹಳೆ ಯುಜಿಡಿ
ಹಳೆ ಕಾಲದ ಯುಜಿಡಿ ಪೈಪ್‌ಲೈನ್‌ ಹಾನಿಗೊಳಗಾಗುವುದು, ಕುಸಿಯುವ ಮೂಲಕ ಅಲ್ಲಲ್ಲಿ ಬ್ಲಾಕ್‌ ಆಗಿ ಜನರು ತೊಂದರೆಪಡುವಂತ ಸ್ಥಿತಿ ನಿರ್ಮಾಣಗೊಂಡಿದೆ. ಒಂದು ಕಡೆ ಕುಸಿದು ಹಾನಿಯಾಗಿ ಬ್ಲಾಕ್‌ ಆದಲ್ಲಿ ಅದನ್ನು ತೆರವುಗೊಳಿಸಿ ದುರಸ್ತಿಪಡಿಸಲು ಹಲವು ದಿನಗಳೇ ಬೇಕಾಗಿರುತ್ತದೆ. ಸುಲಭದಲ್ಲಿ ಕಾಮಗಾರಿ ನಿರ್ವಹಿಸುವ ಅತ್ಯಾಧುನಿಕ ಪರಿಕರ, ಅಗತ್ಯ ಕಾಮಗಾರಿಗೆ ಸೂಕ್ತ ಅನುದಾನ ಮೀಸಲಿಡುವ ನಿಟ್ಟಿನಲ್ಲಿ ನಗರಸಭೆ ಕ್ರಮವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

10(1)

Kaup: ಸುಂದರ ಕಾಪು ನಗರಕ್ಕೆ ಕೊಳಚೆ ಕಪ್ಪು ಚುಕ್ಕೆ!

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Shirva: ಶಿರ್ವ ಮಹಮ್ಮಾಯಿ ಮಾರಿಗುಡಿ; ನಿಧಿ ಕುಂಭ ಸಮರ್ಪಣೆ

Shirva: ಶಿರ್ವ ಮಹಮ್ಮಾಯಿ ಮಾರಿಗುಡಿ; ನಿಧಿ ಕುಂಭ ಸಮರ್ಪಣೆ

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

4

Surathkal: ಸಸಿಹಿತ್ಲು ಆಳಸಮುದ್ರದಲ್ಲಿ ಪ್ರಜ್ವಲ್‌ ಮೃತದೇಹ ಪತ್ತೆ

cr

Kasaragod:ಅಪರಾಧ ಸುದ್ದಿಗಳು;‌ ಅಕ್ರಮ ಮೀನುಗಾರಿಕೆ: 3 ಬೋಟ್‌ಗಳು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.