![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 18, 2020, 9:21 AM IST
ಸಿದ್ದಾಪುರ: ಯಕ್ಷಗಾನ ಕಲಾವಿದ, ಅಮಾಸೆಬೈಲು ಗ್ರಾಮದ ಕೆಲ ಸುಗ್ಗಿಗದ್ದೆ ಸುದೀಪ ಶೆಟ್ಟಿ (24) ಅವರು ಮನೆಯ ಪಕ್ಕದ ಕೆರೆಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ನ. 16ರಂದು ನಡೆದಿದೆ.
2 ವರ್ಷದ ಹಿಂದೆ ರಸ್ತೆ ಅಪಘಾತಕ್ಕೊಳಗಾಗಿದ್ದ ಅವರು ಆಗಾಗ್ಗೆ ತಲೆಸುತ್ತು ಬಂದು ಬೀಳುತ್ತಿದ್ದರು. ಮನೆಯಿಂದ ಹೊರಗೆ ಹೋದವರು ಮರಳಿ ಬಾರದೆ ಇದ್ದುದರಿಂದ ಹುಡುಕಾಡಿದಾಗ ಮನೆಯ ಸಮೀಪದ ನೀರಿನ ತೋಡಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ತೋಡಿಗೆ ಬಹಿರ್ದೆಸೆಗೆಂದು ಹೋದಾಗ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಅವರ ತಾಯಿ ವನಜಾ ಶೆಟ್ಟಿ ಅವರು ನೀಡಿದ ದೂರಿನಂತೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೋದಿ-ಬೈಡೆನ್ ಮೊದಲ ಮಾತುಕತೆ: ಕೋವಿಡ್19, ಹವಾಮಾನ ಬದಲಾವಣೆ ಸೇರಿದಂತೆ ಹಲವು ವಿಚಾರಗಳ ಚರ್ಚೆ
ಸ್ತ್ರೀ ವೇಷಧಾರಿ
ಕಲಾವಿದ ಸುದೀಪ ಶೆಟ್ಟಿ ಅವರು ಮಂದಾರ್ತಿ ಮೇಳದಲ್ಲಿ ಸ್ತ್ರೀ ವೇಷಧಾರಿಯಾಗಿದ್ದರು. ಮೇಗರವಳ್ಳಿ, ಸಿಗಂಧೂರು ಹಾಗೂ ಮಂದಾರ್ತಿ ಮೇಳಗಳಲ್ಲಿ ಕಳೆದ ಕೆಲವು ವರ್ಷಗಳಿಂದ ವೇಷಧಾರಿಯಾಗಿದ್ದರು. ಅವಿವಾಹಿತರಾಗಿರುವ ಅವರು ತಂದೆ, ತಾಯಿಯನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಉಡುಪಿಯ ಯಕ್ಷಗಾನ ಕಲಾರಂಗ ಸಂತಾಪ ವ್ಯಕ್ತಪಡಿಸಿದೆ
ಇದನ್ನೂ ಓದಿ:ಇಂದು ಸಿಎಂ ದಿಲ್ಲಿಗೆ; ಎಲ್ಲರ ಚಿತ್ತ ವರಿಷ್ಠರತ್ತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.