![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Nov 24, 2019, 12:48 PM IST
ಮಂಗಳೂರು:ಕಟೀಲ ಯಕ್ಷಗಾನ ಮೇಳದ ಹಾಲಿ ಪರಿಸ್ಥಿತಿ ಹಾಗೂ ಮೇಳ ಹೊರಡುವ ವೇಳೆ ಉಂಟಾದ ಘಟನೆಗಳ ಬಗ್ಗೆ ರಾಜ್ಯ ಸರಕಾರಕ್ಕೆ ಸಮಗ್ರವಾದ ವರದಿ ಸಲ್ಲಿಸುವಂತೆ ದ.ಕ. ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳ ತಿರುಗಾಟ ಚಾಲನೆ ಪ್ರಯುಕ್ತ ಕಟೀಲಿನಲ್ಲಿ ಶುಕ್ರವಾರ ರಾತ್ರಿ ನಡೆದ ಸೇವಾ ಪ್ರದರ್ಶನ ವೇಳೆ ಮೇಳದ ಓರ್ವ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರನ್ನು ರಂಗಸ್ಥಳದಿಂದ ವಾಪಸ್ ಕರೆಯಿಸಿದ ಘಟನೆ ಸಂಭವಿಸಿತ್ತು. ಈ ಘಟನೆಯನ್ನು ಖಂಡಿಸಿ ಶನಿವಾರ ಪಟ್ಲ ಅವರ ಅಭಿಮಾನಿಗಳು ಮಂಗಳೂರಿನಲ್ಲಿ ಸಭೆ ಕೂಡ ನಡೆಸಿದ್ದು, ಈ ಸಂಬಂಧವಾಗಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಡಿಸಿಗೆ ಮನವಿ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು.
“ಪಟ್ಲ ಸತೀಶ್ ಶೆಟ್ಟಿ ಅವರು ಈ ವರ್ಷದಿಂದ ಭಾಗವತಿಕೆ ಮಾಡುವುದು ಬೇಡ ಎಂದು ಮೊದಲೇ ಅವರಿಗೆ ತಿಳಿಸಲಾಗಿತ್ತು. ಆದರೂ ಅವರು ಭಾಗವತಿಕೆ ಮಾಡಲು ಮುಂದಾದರು’ ಎಂದು ಘಟನೆಯ ಕುರಿತು ಮೇಳದ ಸಂಚಾಲಕರು ಪ್ರತಿಕ್ರಿಯಿಸಿದ್ದರು.
ಪಟ್ಲ ಸತೀಶ್ ಶೆಟ್ಟಿ ಅವರು ಕಳೆದ 20 ವರ್ಷಗಳಿಂದ ಕಟೀಲು ಮೇಳದಲ್ಲಿ ಭಾಗವತರಾಗಿದ್ದಾರೆ. 2 ವರ್ಷಗಳ ಹಿಂದೆ ಮೇಳದ 7 ಕಲಾವಿದರು ರಾಜೀನಾಮೆ ನೀಡಿದ್ದರು. ಅನಂತರ ಮೇಳದ ಕುರಿತಾದ ವಿವಾದ ಬೆಳೆದು ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.