ಕೆರಾಡಿಯ 4 ಬಡ ಕುಟುಂಬಕ್ಕೆ ಗುಡಿಸಲಿನಿಂದ ಇನ್ನೂ ಸಿಗದ ಮುಕ್ತಿ

  ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿ 6 ವರ್ಷ , ಮನೆ ಕಟ್ಟುವುದು ವಿಳಂಬವಾದ್ದರಿಂದ ಮಂಜೂರಾಗದ ಅನುದಾನ

Team Udayavani, Mar 5, 2021, 8:10 AM IST

ಕೆರಾಡಿಯ 4 ಬಡ ಕುಟುಂಬಕ್ಕೆ ಗುಡಿಸಲಿನಿಂದ ಇನ್ನೂ ಸಿಗದ ಮುಕ್ತಿ

ಕೆರಾಡಿ: ಸರಕಾರ ಬಡವರ ಕಲ್ಯಾಣಕ್ಕಾಗಿ, ಮನೆ ಕಟ್ಟಲು ಸಾಧ್ಯವಿಲ್ಲದವರಿಗೆ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರೂ, ಸಂಕಷ್ಟದಲ್ಲಿರುವವರಿಗೆ, ಅರ್ಹರಿಗೆ ಮಾತ್ರ ಅದರ ಪ್ರಯೋಜನ ಸಿಗದಿರುವ ಬೆಳವಣಿಗೆಗಳು ಆಗಾಗ ನಡೆಯುತ್ತಲೇ ಇರುತ್ತದೆ. ಇದಕ್ಕೆ ಕೆರಾಡಿ ಗ್ರಾಮದ 4 ಬಡ ಕುಟುಂಬಗಳ ಕಥೆಯೇ ಜ್ವಲಂತ ನಿದರ್ಶನ.

ಹೌದು, ಈ 4 ಬಡ ಕುಟುಂಬಗಳು ಇನ್ನೂ ಗುಡಿಸಲಿನಲ್ಲಿಯೇ ವಾಸಿಸುತ್ತಿವೆ. ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿ 6 ವರ್ಷಗಳು ಕಳೆದರೂ ಇನ್ನೂ ಈ ಕುಟುಂಬಗಳ ಗುಡಿಸಲಿನ ವಾಸಕ್ಕೆ ಮಾತ್ರ ಮುಕ್ತಿ ಸಿಕ್ಕಿಲ್ಲ. ಅಲ್ಲಿಂದ ಈ ವರೆಗೆ ಸಾಕಷ್ಟು ಬಾರಿ ಪಂಚಾಯತ್‌ಗೆ, ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಇವರು ಮೊರೆಯಿಡುತ್ತಲೇ ಇದ್ದಾರೆ. ಆದರೂ ಇವರಿಗೆ ಇನ್ನೂ ಮನೆ ಕಟ್ಟಲು ಅನುದಾನ ಮಾತ್ರ ಮಂಜೂರಾಗಿಲ್ಲ.

ಮನೆ ಮಂಜೂರಾಗಿತ್ತು…

ಕೆರಾಡಿ ಗ್ರಾಮದ ಗುಲಾಬಿ ಹಸ್ಲ, ರತ್ನಾ ಹಸ್ಲ, ಜಲಜಾ ಹಸ್ಲ ಹಾಗೂ ಸುನೀತಾ ಹಸ್ಲ ಅವರ ಕುಟುಂಬಗಳು ಮನೆಯಿಲ್ಲದೆ, ಈಗಲೂ ಗುಡಿಸಲಲ್ಲಿಯೇ ದಿನ ಕಳೆಯುತ್ತಿದ್ದಾರೆ. 2013-14ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ಮನೆಗೆ ಅರ್ಜಿ ಸಲ್ಲಿಸಿದ್ದರು. ಆಗ ಅನುದಾನವು ಮಂಜೂರಾಗಿತ್ತು. ಆದರೆ ಇವರದು ಬಡ ಕುಟುಂಬವಾಗಿದ್ದರಿಂದ, ಕೂಲಿ ಮಾಡಿ ದಿನ ಕಳೆಯುತ್ತಿದ್ದುದರಿಂದ ಮನೆ ಕಟ್ಟುವ ಕಾರ್ಯ ಆರಂಭಿಸಲು ಹಣವಿಲ್ಲದೆ ವಿಳಂಬವಾಯಿತು. ಸಕಾಲದಲ್ಲಿ ಮನೆ ಕಟ್ಟಿಕೊಳ್ಳದ ಕಾರಣ ಅನುದಾನವೇ ಬಿಡುಗಡೆಯಾಗಿಲ್ಲ.

ಮನವಿಗೆ ಸ್ಪಂದನೆಯೇ ಇಲ್ಲ  :

ಕಳೆದ 4-5 ವರ್ಷಗಳಿಂದ ನಾವು ಬಸವ ವಸತಿ ಯೋಜನೆಯಡಿ ಮನೆ ಮಂಜೂರಾತಿಗೆ ಮನವಿ ಸಲ್ಲಿಸುತ್ತಲೇ ಇದ್ದೇವೆ. ಆದರೆ ಯಾವುದೇ ಸ್ಪಂದನೆಯೇ ಇಲ್ಲ. ಇನ್ನೆಷ್ಟು ದಿನ ಕಾಯಬೇಕೋ ಗೊತ್ತಿಲ್ಲ. ಒಬ್ಬರ ಮನೆ ಸಹ ಕಳೆದ ಮಳೆಗಾಲದಲ್ಲಿ ಕುಸಿದಿದೆ. ಇನ್ನೆಷ್ಟು ದಿನ ಈ ಗುಡಿಸಲಲ್ಲಿಯೇ ಕಾಲ ಕಳೆಯಬೇಕು ಎನ್ನುವುದಾಗಿ ಸಂತ್ರಸ್ತರು ಪ್ರಶ್ನಿಸುತ್ತಿದ್ದಾರೆ.

ಪ್ರಸ್ತಾವನೆ ಸಲ್ಲಿಕೆ :

2013-14 ರಲ್ಲಿ ಮನೆ ಮಂಜೂರಾಗಿದ್ದು, ತಲಾ1.30 ಲಕ್ಷ ರೂ. ಅನುದಾನ ಸಿಗುತ್ತಿತ್ತು. ಆದರೆ ಸಕಾಲದಲ್ಲಿ ಅವರು ಮನೆ ಕಟ್ಟಿಕೊಳ್ಳದ ಕಾರಣ ರಾಜ್ಯ ಮಟ್ಟದಲ್ಲಿಯೇ ವಸತಿ ಯೋಜನೆಯಡಿ ಬ್ಲಾಕ್‌ ಆಗಿದೆ. ಈಗ ಪಂಚಾಯತ್‌ನಿಂದ ಜಾಗ ಜಿಪಿಎಸ್‌ ಮಾಡಿ, ತಾ.ಪಂ. ಮೂಲಕ ರಾಜ್ಯ ವಸತಿ ನಿಗಮಕ್ಕೆ ಬ್ಲಾಕ್‌ ತೆಗೆಯಲು ಹಾಗೂ ಮನೆ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.  – ಗುರುಮೂರ್ತಿ, ಕೆರಾಡಿ  ಗ್ರಾ.ಪಂ. ಪಿಡಿಒ

ಮನೆ ಮಂಜೂರಿಗೆ ಪ್ರಯತ್ನ : 

ಕೆರಾಡಿ ಗ್ರಾಮದ 4 ಕುಟುಂಬಗಳ ವಸತಿ ಯೋಜನೆ ಬ್ಲಾಕ್‌ ಆಗಿರುವ ಬಗ್ಗೆ ಪಿಡಿಒ ಅವರಿಗೆ ಒಂದು ಪ್ರತ್ಯೇಕ ಫಾರ್ಮೆಟ್‌ನಲ್ಲಿ ಅರ್ಜಿಯನ್ನು ಸಿದ್ಧಪಡಿಸಿ ಅದನ್ನು ಭರ್ತಿ ಮಾಡಿ ಕಳುಹಿಸಲು ತಿಳಿಸಿದ್ದು, ಅದನ್ನು ಜಿ.ಪಂ.ಗೆ ಸಲ್ಲಿಸಿ, ವಸತಿ ನಿಗಮಕ್ಕೆ ಸಲ್ಲಿಸಿ, ಮನೆ ಮಂಜೂರಾತಿಗೆ ಪ್ರಯತ್ನಿಸಲಾಗುವುದು.ಭೋಜ ಪೂಜಾರಿ, ನೋಡಲ್‌ ಅಧಿಕಾರಿ, ವಸತಿ ಯೋಜನೆ ಕುಂದಾಪುರ

 

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.