Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

2 ದಶಕದಿಂದ ಹಡಿಲು ಗದ್ದೆಗಳಲ್ಲಿ ಕೃಷಿ ಮಾಡುವ ಗಂಗಾಧರ ಪೂಜಾರಿ

Team Udayavani, Jun 29, 2024, 7:18 AM IST

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

ಕುಂದಾಪುರ: ಇಲ್ಲೊಬ್ಬ ಅಪರೂಪದ ಕೃಷಿಕ ತನ್ನ ಮಾದರಿ ಕಾರ್ಯದ ಮೂಲಕ ಎಕ್ರೆಗಟ್ಟಲೆ ಹಡಿಲು ಭೂಮಿಯನ್ನು ಹಸನು ಮಾಡುತ್ತಿದ್ದಾರೆ. ಊರಲ್ಲಿ ಹಡಿಲು ಬೀಳುವ ಗದ್ದೆಗಳನ್ನು ಗೇಣಿಗೆ ಪಡೆದು ಬೇಸಾಯ ಮಾಡುವುದೇ ಇವರ ಕಾಯಕ. 20 ವರ್ಷಗಳಿಂದ ನಿರಂತರವಾಗಿ ಈ ಕಾರ್ಯವನ್ನು ಬದ್ಧತೆಯಿಂದ ಮಾಡುತ್ತಿದ್ದಾರೆ. ಕುಂದಾಪುರ ಕೋಡಿಯ ಗಂಗಾಧರ ಪೂಜಾರಿ ಅವರೇ ಮಾದರಿ ಕೃಷಿಕ.

ಇವರು ತನ್ನ ಒಂದು ಎಕ್ರೆ ಗದ್ದೆಯೊಂದಿಗೆ ಕೋಡಿಯ ಶ್ರೀ ಚಕ್ರೇಶ್ವರಿ ದೇವಸ್ಥಾನದ ಆಸುಪಾಸಿನಲ್ಲಿ ರೈತರು ಹಡಿಲು ಬಿಡುವ ಗದ್ದೆಗಳನ್ನು ಹುಡುಕಿ, ಅವುಗಳಲ್ಲಿ ಬೇಸಾಯ ಮಾಡುತ್ತಿದ್ದಾರೆ. ಈ ವರ್ಷ ಒಟ್ಟಾರೆ 45 ಎಕ್ರೆ ಗದ್ದೆಗಳಲ್ಲಿ ನಾಟಿ ಕಾರ್ಯ ಕೈಗೊಂಡಿದ್ದಾರೆ. ಈ ಬಾರಿ ಸೋನ್ಸ್‌ ಶಾಲೆ ಹತ್ತಿರ ಹೆಚ್ಚುವರಿಯಾಗಿ 15 ಎಕ್ರೆ ಗದ್ದೆಗಳಿಗೆ ಜೀವ ತುಂಬುವ ಪ್ರಯತ್ನವನ್ನು ಮಾಡುತ್ತಿದ್ದಾರೆ.

ಇಡೀ ಕುಟುಂಬ ಜತೆಗಿದೆ
ಗಂಗಾಧರ ಪೂಜಾರಿ ವೃತ್ತಿಯಲ್ಲಿ ಎಲೆಕ್ಟ್ರಿಕಲ್‌ ಹಾಗೂ ಡೆಕೊರೇಶನ್‌ ಕೆಲಸ ಮಾಡುತ್ತಿದ್ದು, ಅವರಿಗೆ ಕೃಷಿಯಲ್ಲಿ ಅಪಾರ ಆಸಕ್ತಿಯಿದೆ. ತಂದೆಯಿಂದ ಬಳುವಳಿಯಾಗಿ ಬಂದ ಕೃಷಿ ಕಾಯಕವನ್ನು ಎಂದಿಗೂ ಬಿಡಲಾರೆ ಎನ್ನುವ ಅವರಿಗೆ ಈ ಕಾರ್ಯದಲ್ಲಿ ಇಡೀ ಕುಟುಂಬವೇ ಸಹಕಾರ ನೀಡುತ್ತಿದೆ. ಮನೆಮಂದಿ ಜತೆಗೆ ಸಹೋದರ, ಅಳಿಯ, ಮಾವ ಹೀಗೆ ಎಲ್ಲರೂ ನಾಟಿ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಇವರೆಲ್ಲರ ಬೆಂಬಲದಿಂದ ಯಾವತ್ತೂ ಈ ಕಾರ್ಯ ತನಗೆ ಹೊರೆ ಎನಿಸಿಲ್ಲ ಎಂದು ಗಂಗಾಧರ ಪೂಜಾರಿ ಅವರು ಹೇಳುತ್ತಿದ್ದಾರೆ.

ಲಾಭಕ್ಕಿಂತಲೂ ಖುಷಿ ಜಾಸ್ತಿ
ತಂದೆ ಕಾಲದಿಂದಲೂ ಈ ಕಾರ್ಯ ಮಾಡುತ್ತಿದ್ದೇವೆ. ಮೊದಲಿಗೆ 10 ಎಕ್ರೆ ಮಾಡಿದ್ದೇವೆ. ಹಿಂದೆ 30-40 ಆಳುಗಳಿಂದ ನಾಟಿ ಮಾಡುತ್ತಿದ್ದೆವು. ಆದರೆ ಕೂಲಿಯಾಳುಗಳ ಸಮಸ್ಯೆಯಿಂದ ಯಾಂತ್ರೀಕೃತ ನಾಟಿ ಮಾಡುತ್ತಿದ್ದೇವೆ. ಮನೆಯಂಗಳದಲ್ಲೇ ಚಾಪೆ ನೇಜಿ ಮಾಡುತ್ತಿದ್ದು, ಇದು ಲಾಭದಾಯಕ. ಲಾಭಕ್ಕಿಂತಲೂ ಹೆಚ್ಚು ಇದರಿಂದ ಸಿಗುವ ಖುಷಿಯೇ ವಿಶೇಷವಾದುದು. ಈ ಬಾರಿ 45 ಎಕ್ರೆ ಗದ್ದೆಯಲ್ಲಿ ನಾಟಿ ಮಾಡುತ್ತಿದ್ದೇವೆ. 1 ಎಕ್ರೆ ಬಿಟ್ಟರೆ ಮತ್ತೆಲ್ಲವೂ ಹಡಿಲು ಭೂಮಿಯೇ. ಈವರೆಗೆ 2.70 ಲಕ್ಷ ರೂ. ಖರ್ಚಾಗಿದೆ. ಇನ್ನು ಗೊಬ್ಬರ, ಕಟಾವು ಸೇರಿ ಒಟ್ಟು ಖರ್ಚು 5 ಲಕ್ಷ ರೂ. ಆಗಬಹುದು. ಉತ್ತಮ ಆದಾಯವೂ ಸಿಗುತ್ತದೆ, ಜತೆಗೆ ನಮ್ಮ ಇಡೀ ಕುಟುಂಬಕ್ಕೆ ವರ್ಷಪೂರ್ತಿ ಅಕ್ಕಿಯೂ ಸಿಗುತ್ತದೆ. ಗದ್ದೆಯ ಮಾಲಕರಿಗೆ 40 ಸೆಂಟ್ಸ್‌ಗೆ 1 ಮುಡಿ ಹಾಗೂ ಎಕ್ರೆಗೆ ಒಂದು ಕ್ವಿಂಟಾಲ್‌ ಅಕ್ಕಿ ಗೇಣಿ ನೀಡುತ್ತೇವೆ.
– ಗಂಗಾಧರ ಪೂಜಾರಿ ಕೋಡಿ, ಕೃಷಿಕ

ಕಷ್ಟಪಟ್ಟರೆ ಲಾಭ..
ಬಹಳ ಹಿಂದೆ ಕೈ ನಾಟಿಯೇ ಜಾಸ್ತಿ ಇತ್ತು. ಈಗ ಯಂತ್ರ ಬಂದಿರುವುದರಿಂದ ತುಂಬಾ ಸಹಾಯವಾಗುತ್ತಿದೆ. ಕೂಲಿ ತುಂಬಾ ಹೊರೆ ಯಾಗುತ್ತಿತ್ತು. ಇಂಥ ಸಂದರ್ಭ ದಲ್ಲಿ ಮನೆಯವರೆಲ್ಲ ಸೇರಿದರೆ ಅನುಕೂಲವಾಗುತ್ತದೆ ಹಾಗೂ ಉತ್ತಮ ಲಾಭವೂ ಸಿಗುತ್ತದೆ.
– ಶಂಕರ ಪೂಜಾರಿ ಕೋಡಿ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.