Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!


Team Udayavani, May 15, 2024, 12:11 AM IST

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

ಸಿದ್ದಾಪುರ: ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸಿದ್ದಾಪುರ ಗ್ರಾಮದ ಸ್ವಾಮಿಹಾಡಿಯ ಸುರೇಶ್‌ ಶೆಟ್ಟಿ (38) ಮೃತಪಟ್ಟವರು.

ಮಂಗಳವಾರ ಸಂಜೆ ಸಿದ್ದಾಪುರದಲ್ಲಿ ಸಿಡಿಲು ಸಹಿತ ಮಳೆಯಾಗಿದ್ದು, ಈ ಸಂದರ್ಭ ಸುರೇಶ್‌ ಅವರು ತನ್ನ ಕಿರಿಯ ಮಗನೊಂದಿಗೆ ಮನೆ ಸಮೀಪವೇ ಇದ್ದ ಮಾವಿನ ಮರದಿಂದ ಬಿದ್ದ ಮಾವಿನಹಣ್ಣು ತರಲು ತೆರಳಿದ್ದರು. ಆಗ ಭಾರೀ ಶಬ್ದದೊಂದಿಗೆ ಸಿಡಿಲು ಎರಗಿದ್ದು, ಅದು ಸುರೇಶ್‌ ಅವರ ಎದೆಯ ಭಾಗಕ್ಕೆ ಬಡಿದಿದೆ. ತಂದೆ ಬಿದ್ದಿರುವುದನ್ನು ಗಮನಿಸಿ ಮಗು ಮನೆಗೆ ಓಡಿ ಹೋಗಿ ಮನೆಯವರಿಗೆ ವಿಷಯ ತಿಳಿಸಿತು.

ಅಸ್ವಸ್ಥಗೊಂಡು ಬಿದ್ದಿದ್ದ ಅವರನ್ನು ಬದುಕಿಸುವ ಪ್ರಯತ್ನ ಮಾಡಲಾಗಿತ್ತಾದರೂ ಇದೇ ವೇಳೆ ಸಿದ್ಧಾಪುರ ಭಾಗದಲ್ಲಿ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ಎದುರಾಗಿದ್ದರಿಂದ ಯಾರನ್ನೂ ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಆಸ್ಪತ್ರೆಗೆ ಕರೆದೊಯ್ಯಲು ವಿಳಂಬವಾಗಿದ್ದರಿಂದ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.

ನಾಳೆ ಮಗುವಿನ ಜನ್ಮದಿನ
ಸುರೇಶ್‌ ಅವರ ಎರಡನೇ ಪುತ್ರನ ನಾಲ್ಕನೇ ವರ್ಷದ ಹುಟ್ಟುಹಬ್ಬ ಮೇ 16ರಂದು ನಡೆಯಲಿಕ್ಕಿತ್ತು. ಅದಕ್ಕಾಗಿಯೇ ಅವರು ಬೆಂಗಳೂರಿನಿಂದ ಬಂದು ಮನೆಯವರ ಜತೆ ಸಿದ್ಧತೆಯನ್ನೂ ನಡೆಸಿದ್ದರು. ಈ ನಡುವೆ ಕುಟುಂಬವನ್ನೇ ಸಿಡಿಲು ಕಣ್ಣೀರಿನಲ್ಲಿ ಮುಳುಗಿಸಿದೆ.

ಹೊಟೇಲ್‌ ಉದ್ಯೋಗಿ: ಹೆನ್ನಾಬೈಲುವಿನ ಬಸವ ಶೆಟ್ಟಿ ಅವರ ಪುತ್ರರಾದ ಸುರೇಶ್‌ ಬೆಂಗಳೂರಿನಲ್ಲಿ ಹೊಟೇಲ್‌ ಉದ್ಯೋಗಿಯಾಗಿದ್ದು, ಮಂಗಳವಾರ ಬೆಳಗ್ಗೆಯಷ್ಟೇ ಊರಿಗೆ ಬಂದಿದ್ದು, ಸಿದ್ದಾಪುರ ಸ್ವಾಮಿಹಾಡಿಯಲ್ಲಿರುವ ಪತ್ನಿಯ ತವರು ಮನೆಯಲ್ಲಿ ಉಳಿದುಕೊಂಡಿದ್ದರು.

ಸಿಡಿಲಾಘಾತದ ವೇಳೆ ಸುರೇಶ್‌ ಅವರ ಮಡದಿ, ಅತ್ತೆ, ನಾದಿನಿ ಹಾಗೂ ಓರ್ವ ಮಗ ಮನೆಯ ಒಳಗಿದ್ದುದರಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿದ್ದಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಯಿತು.

ಮೃತರು ಪತ್ನಿ ವಿನೋದಾ, ಪುತ್ರರಾದ 8 ವರ್ಷದ ಸುಮೋದ್‌ ಹಾಗೂ 4 ವರ್ಷದ ಸವೊìದ ಅವರನ್ನು ಅಗಲಿದ್ದಾರೆ. ಕುಂದಾಪುರ ತಹಶೀಲ್ದಾರ್‌ ಶೋಭಾಲಕ್ಷ್ಮೀ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿಡಿಲಾಘಾತಕ್ಕೆ ಸಿದ್ದಾಪುರ ಪರಿಸರದಲ್ಲಿ ಮೊಬೈಲ್‌ ನೆಟ್‌ವರ್ಕ್‌ ಹಾಗೂ ವಿದ್ಯುತ್‌ ಸಮಸ್ಯೆ ಎದುರಾಗಿದ್ದು ರಾತ್ರಿಯ ತನಕವೂ ದುರಸ್ತಿಯಾಗಿರಲಿಲ್ಲ.

ಟಾಪ್ ನ್ಯೂಸ್

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Udupi ಕರ್ಕಶ ಹಾರ್ನ್: ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

Udupi ಕರ್ಕಶ ಹಾರ್ನ್: ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

Kundapura ಬಸ್‌ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Kundapura ಬಸ್‌ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Fraud Case ಹೆಚ್ಚಿನ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವಂಚನೆ

Fraud Case ಹೆಚ್ಚಿನ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವಂಚನೆ

ಶಾಲಾ ಬಸ್ಸಿಗೆ ಕಾರು ಢಿಕ್ಕಿ ; ತಪ್ಪಿದ ಭಾರೀ ಅನಾಹುತ

School ಬಸ್ಸಿಗೆ ಕಾರು ಢಿಕ್ಕಿ ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.