ಮುಳ್ಳಿಕಟ್ಟೆ: ಇನ್ನೂ ತೆರೆಯದ ಟ್ರಕ್‌ ಬೇ ವಿಶ್ರಾಂತಿ ಕೊಠಡಿ-ಸ್ನಾನಗೃಹ

ಪೂರ್ಣಗೊಂಡು ವರ್ಷ ಕಳೆದರೂ ಸಾರ್ವಜನಿಕರಿಗಿಲ್ಲ ಪ್ರಯೋಜನ

Team Udayavani, Apr 21, 2022, 11:23 AM IST

wash-room

ಮುಳ್ಳಿಕಟ್ಟೆ: ಬೈಂದೂರು- ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆಯಲ್ಲಿ ಲಾರಿ ಚಾಲಕರು, ನಿರ್ವಾಹಕರು ಹಾಗೂ ಸಾರ್ವಜನಿಕರಿಗಾಗಿ ನಿರ್ಮಿಸಿದ ಟ್ರಕ್‌ ಬೇ ವಿಶ್ರಾಂತಿ ಕೊಠಡಿ, ಶೌಚಾಲಯದ ಕಾರ್ಯ ಪೂರ್ಣಗೊಂಡು ಒಂದು ವರ್ಷ ಕಳೆದಿದೆ. ಇನ್ನೂ ಇದರ ಪ್ರಯೋಜನ ಲಾರಿ ಚಾಲಕ, ನಿರ್ವಾಹಕರಿಗೆ ಆಗಲಿ ಅಥವಾ ಸಾರ್ವಜನಿಕರಿಗೆ ಆಗಲಿ ಸಿಕ್ಕಿಲ್ಲ. ಈಗಲೂ ಮುಚ್ಚಿದ ಸ್ಥಿತಿಯಲ್ಲಿಯೇ ಇದೆ.

ಮುಳ್ಳಿಕಟ್ಟೆ – ತ್ರಾಸಿ ನಡುವಿನ ಮೊವಾಡಿ ಕ್ರಾಸ್‌ ಬಳಿಯಲ್ಲಿ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಐಆರ್‌ಬಿ ಸಂಸ್ಥೆಯವರು ಘನ ವಾಹನ ಸವಾರರು, ಸರಕು ಸಾಗಾಟದ ಲಾರಿ ಹಾಗೂ ಇನ್ನಿತರ ವಾಹನಗಳ ಚಾಲಕರು, ನಿರ್ವಾಹಕರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಈ ಟ್ರಕ್‌ ಬೇ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಿದ್ದಾರೆ. ಇಲ್ಲಿಯೇ ಒಂದು ಬದಿ ವಿಶ್ರಾಂತಿ ಪಡೆಯಲು ಸಹ ಅವಕಾಶ ಕಲ್ಪಿಸಲಾಗಿದೆ.

ಎದ್ದು ಹೋದ ಟೈಲ್ಸ್‌

ಇದೇ ಕಟ್ಟಡದ ಒಂದು ಬದಿಯಲ್ಲಿ ಸಣ್ಣ ವಿಶ್ರಾಂತಿ ಗೃಹವಿದೆ. ಸರಿಯಾದ ನಿರ್ವಹಣೆಯಿಲ್ಲದ ಕಾರಣ ಅದಕ್ಕೆ ಹಾಕಿರುವ ಟೈಲ್ಸ್‌ ಒಂದೇ ವರ್ಷದಲ್ಲಿ ಅಲ್ಲಲ್ಲಿ ಎದ್ದು ಹೋಗಿದೆ.

ಪ್ರಯೋಜನವಾಗಲಿ

ದೂರ-ದೂರದ ಊರುಗಳಿಂದ ಸರಕು ಸಾಗಾಟ ಮಾಡುವ ಲಾರಿ ಚಾಲಕ, ನಿರ್ವಾಹಕರ ಅನುಕೂಲಕ್ಕಾಗಿ ಮಾಡಲಾದ ಈ ವ್ಯವಸ್ಥೆಯು ಈವರೆಗೆ ಪ್ರಯೋಜನವಾಗದೇ ನಿಷ್ಪ್ರಯೋಜಕವಾಗಿದೆ. ಇನ್ನಾದರೂ ಅದನ್ನು ಕೂಡಲೇ ಸರಿಪಡಿಸಿ, ಲಾರಿ ಚಾಲಕ, ನಿರ್ವಾಹಕರು, ಇತರ ವಾಹನ ಚಾಲಕರಿಗೆ ಪ್ರಯೋಜನವಾಗುವಂತಾಗಲಿ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಬೀಚ್‌ ಬಳಿಯೇ ನಿಲುಗಡೆ

ತ್ರಾಸಿ, ಮರವಂತೆ ಕಡಲ ತೀರದಲ್ಲಿ ಲಾರಿ, ಟ್ರಕ್‌ಗಳನ್ನು ನಿಲ್ಲಿಸಿ, ಇಲ್ಲಿಗೆ ಬರುವ ಪ್ರವಾಸಿಗರಿಗೆ ತೊಂದರೆ ಕೊಡಬಾರದು ಎನ್ನುವ ನಿಟ್ಟಿನಲ್ಲಿ ಲಾರಿ, ಟ್ರಕ್‌ ಚಾಲಕರು, ನಿರ್ವಾಹಕರಿಗೆ ಅನುಕೂಲವಾಗುವಂತೆ ಮುಳ್ಳಿಕಟ್ಟೆಯಲ್ಲಿ ಹೆದ್ದಾರಿ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡ ಐಆರ್‌ಬಿ ಸಂಸ್ಥೆಗೆ ಇಲ್ಲಿ ವಿಶ್ರಾಂತಿ ಕೊಠಡಿ, ಶೌಚಾಲಯ, ಸ್ನಾನಗೃಹದ ಕೊಠಡಿಯನ್ನು ನಿರ್ಮಿಸುವಂತೆ ಸೂಚಿಸಲಾಗಿತ್ತು. ಅದರಂತೆ ಕಳೆದ ವರ್ಷದ ಜೂನ್‌ನಲ್ಲಿ ಇದರ ಕಾಮಗಾರಿ ಪೂರ್ಣಗೊಂಡು, ಒಂದಷ್ಟು ದಿನ ತೆರೆದುಕೊಂಡಿತ್ತು. ಆದರೆ ಅದಕ್ಕೆ ಶೌಚಾಲಯ, ಸ್ನಾನಗೃಹಕ್ಕೆ ಬಳಸಲು ನೀರಿನ ಸಂಪರ್ಕವನ್ನೇ ಇನ್ನೂ ಕಲ್ಪಿಸದ ಕಾರಣ, ಗಬ್ಬೆದ್ದು, ದುರ್ನಾತ ಬೀರುವಂತಾಗಿತ್ತು. ಇದಾದ 15 ದಿನಗಳಲ್ಲೇ ಮುಚ್ಚಲಾಗಿತ್ತು. ಅಲ್ಲಿಂದ ಈವರೆಗೆ ಬಾಗಿಲು ತೆರೆದೇ ಇಲ್ಲ. ಇದರಿಂದಾಗಿ ಸರಕು ಲಾರಿಗಳನ್ನು ಚಾಲಕರು ಮರವಂತೆ ಬೀಚ್‌ ಬಳಿಯೇ ಸಾಲುಗಟ್ಟಿ ನಿಲ್ಲಿಸುತ್ತಿದ್ದಾರೆ. ಇದರಿಂದ ಪ್ರವಾಸಿಗರಿಗೂ ಬೀಚ್‌ ವೀಕ್ಷಣೆಗೆ ಅಡ್ಡಿಯಾಗುತ್ತಿದೆ.

ತಿಳಿದು, ಕ್ರಮಕೈಗೊಳ್ಳುವೆ

ಮುಳ್ಳಿಕಟ್ಟೆಯ ಟ್ರಕ್‌ ಬೇ ಶೌಚಾಲಯ, ಸ್ನಾನಗೃಹ ತೆರೆಯದ ಬಗ್ಗೆ ನನಗೆ ತಿಳಿದಿರಲಿಲ್ಲ. ಈ ಬಗ್ಗೆ ಆದಷ್ಟು ಬೇಗ ತಿಳಿದುಕೊಂಡು, ಅಗತ್ಯ ಕ್ರಮಕೈಗೊಳ್ಳಲಾಗುವುದು. – ನಿಂಗೇಗೌಡ, ಪಿಡಿ, ಹೆದ್ದಾರಿ ಪ್ರಾಧಿಕಾರ ಮಂಗಳೂರು

ಪ್ರಶಾಂತ್ ಪಾದೆ

ಟಾಪ್ ನ್ಯೂಸ್

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

1-jock

Wimbledon ಟೆನಿಸ್‌ : ಜೊಕೋವಿಕ್‌ 3ನೇ ಸುತ್ತಿಗೆ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.