![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 20, 2023, 11:23 PM IST
ಕೋಟ: ರಾಜ್ಯದ ಹಲವು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಾಗಿರುವ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆ ಭರ್ತಿಯಾಗದೆ ಹಲವು ತಿಂಗಳು ಕಳೆದಿವೆ. ನೇಮಕಾತಿಗೆ ಆನ್ಲೈನ್ ವಿಧಾನವನ್ನು ಪರಿಚಯಿಸುತ್ತಿರುವುದರಿಂದ ಪ್ರಕ್ರಿಯೆ ತಡವಾಗಲು ಕಾರಣ ಎನ್ನಲಾಗುತ್ತಿದೆ. ಸರಕಾರದ ಯೋಜನೆಗಳ ಅನುಷ್ಠಾನ, ಅಂಗನವಾಡಿ ನಿರ್ವಹಣೆ ಮುಂತಾದ ಕಾರ್ಯಗಳಿಗೆ ಇದರಿಂದ ಕಷ್ಟವಾಗುತ್ತಿದೆ.
ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಯೋಜನೆಗಳ ಅನುಷ್ಠಾನ, ಗೃಹಲಕ್ಷ್ಮಿ ಯೋಜನೆಯಲ್ಲಿನ ಸಮಸ್ಯೆಗಳನ್ನು ಪತ್ತೆಹಚ್ಚಿ ಪರಿಹರಿಸುವುದು ಹಾಗೂ ಅಂಗನವಾಡಿಯ ನಿರ್ವಹಣೆ, ಮಕ್ಕಳಿಗೆ ಅಕ್ಷರಾಭ್ಯಾಸ ಹೀಗೆ ಸಾಕಷ್ಟು ಕರ್ತವ್ಯಗಳಿ ರುವುದರಿಂದ ಅಂಗ® ವಾಡಿಯಲ್ಲಿ ಇಬ್ಬರು ಸಿಬಂದಿ ಇದ್ದರೂ ಮುಗಿಯದಷ್ಟು ಕೆಲಸವಿದೆ. ಸಿಬಂದಿ ಕೊರತೆ ಇರು ವಲ್ಲಿ ಮತ್ತಷ್ಟು ಸಮಸ್ಯೆಯಾಗುತ್ತಿದೆ.
ದಾಖಲಾತಿ ಮೇಲೂ ಪರಿಣಾಮ
ಸಿಬಂದಿ ಕೊರತೆ ಯಿಂದ ಮಕ್ಕಳ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ತೊಡಕಾಗುತ್ತದೆ ಎನ್ನುವ ಕಾರಣಕ್ಕೆ ಸರಕಾರಿ ವ್ಯವಸ್ಥೆಯ ಬಗ್ಗೆ ಒಲವಿರುವ ಹೆತ್ತವರೂ ಮಕ್ಕಳನ್ನು ಖಾಸಗಿ ಸಂಸ್ಥೆಗೆ ದಾಖಲಿಸುವ ಸಾಧ್ಯತೆ ಇರುತ್ತದೆ. ಇದರಿಂದ ಅಂಗನವಾಡಿಗಳ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎನ್ನುವ ಆತಂಕವನ್ನು ಗ್ರಾಮಸಭೆ, ಕೆಡಿಪಿ ಸಭೆಗಳಲ್ಲಿ ಜನಪ್ರತಿನಿಧಿಗಳು, ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.
ಅಂಗನವಾಡಿ ಸಿಬಂದಿ ಹುದ್ದೆ ಖಾಲಿ ಇರುವುದು ಗಮನದಲ್ಲಿದೆ. ಆನ್ಲೈನ್ ಮೂಲಕ ನೇಮಕಾತಿ ನಡೆಯುವುದರಿಂದ ಸ್ವಲ್ಪ ವಿಳಂಬವಾಗಿದೆ. ಸರಕಾರ ಶೀಘ್ರದಲ್ಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ.
– ಶ್ಯಾಮಲಾ ಸಿ.ಕೆ. / ಕುಮಾರ್,
ಉಪನಿರ್ದೇಶಕರು, ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆ ಉಡುಪಿ/ದ.ಕ.
-ರಾಜೇಶ್ ಗಾಣಿಗ ಅಚ್ಲಾಡಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.