Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ದಶಕಗಳಿಂದ ಹಳ್ಳಿ ಜನರ ಕೂಗಿಗೆ ಸಿಗದ ಮನ್ನಣೆ; ತುರ್ತು ಸಂದರ್ಭ ವಾಹನ ಸಿಗದೆ ಸಂಕಷ್ಟ

Team Udayavani, Sep 20, 2024, 1:43 PM IST

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕುಂದಾಪುರ: ಬೆಳ್ವೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತುರ್ತಾಗಿ 108 ಆ್ಯಂಬುಲೆನ್ಸ್‌ ಬೇಕಾಗಿದೆ. ಬಹುತೇಕ ಗ್ರಾಮೀಣ ಪ್ರದೇಶ ಗಳನ್ನೇ ಹೊಂದಿರುವ ಈ ಆಸ್ಪತ್ರೆಯ ವ್ಯಾಪ್ತಿ ಯಲ್ಲಿ ಅನಾರೋಗ್ಯ ಪೀಡಿತರನ್ನು, ಗರ್ಭಿಣಿಯರನ್ನು, ಯಾರಿಗಾದರೂ ಅಪಘಾತ ಉಂಟಾದರೆ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲು ಜನ ಪರದಾಡುವಂತಾಗಿದೆ. ದಶಕಗಳಿಂ ದಲೂ ಆ್ಯಂಬುಲೆನ್ಸ್‌ ಬೇಡಿಕೆಯಿದ್ದು, ಇನ್ನೂ ಬೇಡಿಕೆ ಈಡೇರಿಲ್ಲ.

ಇಲ್ಲಿನ ಜನ ಸುಮಾರು ವರ್ಷಗಳಿಂದ ಆ್ಯಂಬುಲೆನ್ಸ್‌ಗಾಗಿ ಬೇಡಿಕೆ ಇಡುತ್ತಿದ್ದರೂ, ಅದನ್ನು ಗಂಭೀರವಾಗಿ ಪರಿಗಣಿಸದ ಆರೋಗ್ಯ ಇಲಾಖೆಯು ಮೌನ ವಹಿಸಿದೆ. ಇಲಾಖೆಯ ಈ ಮೌನ ಹಳ್ಳಿ ಜನರ ಜೀವ ಹಿಂಡುತ್ತಿದೆ. ಸಕಾಲದಲ್ಲಿ ಆ್ಯಂಬುಲೆನ್ಸ್‌ ಸಿಗದೇ, ಜನರು ತೊಂದರೆ ಪಟ್ಟ ನಿದರ್ಶನಗಳು ಅನೇಕ.

5 ಗ್ರಾಮಗಳು: 14 ಸಾವಿರ ಜನಸಂಖ್ಯೆ
ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬೆಳ್ವೆ, ಹೆಂಗವಳ್ಳಿ, ಅಲಾºಡಿ, ಮಡಾಮಕ್ಕಿ ಹಾಗೂ ಶೇಡಿಮನೆ ಈ 5 ಗ್ರಾಮಗಳು ಬರುತ್ತವೆ. ಅಂದಾಜು 14 ಸಾವಿರ ಜನಸಂಖ್ಯೆಯಿದೆ.

ಬೇರೆ ಕಡೆಯ ಆ್ಯಂಬುಲೆನ್ಸ್‌ ಅವಲಂಬನೆ
ಐದು ಗ್ರಾಮಗಳ ಆರ್ಡಿ, ಅರಸಮ್ಮಕಾನು, ಯಡಮಲ್ಲಿ, ಕಬ್ಬಿನಾಲೆ, ಹಂಜಾ, ಕೊಂಜಾಡಿ, ತೊಂಬತ್ತು ಮತ್ತಿತರ ಹತ್ತಾರು ಊರುಗಳ ಜನ ಅನಾರೋಗ್ಯ ಉಂಟಾದರೆ, ವೃದ್ಧರನ್ನು ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯಬೇಕಾದರೆ ದೂರದ ಹೆಬ್ರಿ ಅಥವಾ ಹಾಲಾಡಿ ಆಸ್ಪತ್ರೆ ಗಳಿಂದ ಆ್ಯಂಬುಲೆನ್ಸ್‌ ಬರ ಬೇಕಾಗಿದೆ. ಅದು ಬೇರೆ ಕಡೆ ಹೋಗಿದ್ದರೆ, ಹಿರಿಯಡ್ಕ, ಕಾರ್ಕಳ ಅಥವಾ ಕುಂದಾಪುರದಿಂದ ಬರಬೇಕು. ಹಾಲಾಡಿ, ಹೆಬ್ರಿಯಿಂದ ಬಂದರೂ ಏನಿಲ್ಲ ವೆಂದರೂ ಕನಿಷ್ಠ ಹೋಗಲು 20-25 ಕಿ.ಮೀ., ವಾಪಾಸು ಬರಲು 20-25 ಕಿ.ಮೀ., ಒಟ್ಟಾರೆ 50 ಕಿ.ಮೀ. ಸಂಚರಿಸಬೇಕಾಗಿರುತ್ತದೆ. ಹಳ್ಳಿಗಾಡಿನ ರಸ್ತೆಗಳಲ್ಲಿ ಇನ್ನಷ್ಟು ವಿಳಂಬವಾಗಿ ಸಂಚರಿಸಬೇಕಾಗಿರುವುದರಿಂದ ರೋಗಿ ಯನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಗಂಟೆಗಟ್ಟಲೆ ಸಮಯ ವ್ಯಯವಾಗು ತ್ತದೆ. ಅನೇಕ ಬಾರಿ ಸಕಾಲದಲ್ಲಿ ಆ್ಯಂಬುಲೆನ್ಸ್‌ ಸಿಗದೇ ಸಾವನ್ನಪ್ಪಿದ ನಿದರ್ಶನಗಳು ಸಾಕಷ್ಟಿವೆ.

ಪ್ರಸ್ತಾವನೆ ಸಲ್ಲಿಕೆ
ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ 108 ಆ್ಯಂಬುಲೆನ್ಸ್‌ ವಾಹನಗಳು ಬೇಕು ಎನ್ನುವುದಾಗಿ ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕುಂದಾಪುರ ಆಸ್ಪತ್ರೆಗೊಂದು ಸುಸಜ್ಜಿತ ಆ್ಯಂಬುಲೆನ್ಸ್‌ , ಉಡುಪಿಗೆ ಹೆಚ್ಚುವರಿ ಆ್ಯಂಬುಲೆನ್ಸ್‌ , ಇನ್ನು 3 ಗ್ರಾಮೀಣ ಪ್ರದೇಶಗಳಿಗೂ ಬೇಡಿಕೆ ಸಲ್ಲಿಸಿದ್ದೇವೆ. ಬೆಳ್ವೆಗೂ ಬೇಡಿಕೆ ಇರುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಇದು ಸರಕಾರದ ಮಟ್ಟದಲ್ಲಿ ಆಗಬೇಕಾಗಿದೆ.
-ಡಾ| ಐ.ಪಿ. ಗಡಾದ್‌, ಜಿಲ್ಲಾ ಆರೋಗ್ಯಧಿಕಾರಿ

ಹಲವು ವರ್ಷಗಳಿಂದ ಮನವಿ
ಬೆಳ್ವೆ ಆಸ್ಪತ್ರೆಗೆ 108 ಆ್ಯಂಬುಲೆನ್ಸ್‌ ಬೇಕು ಅನ್ನುವುದಾಗಿ ನಿರಂತರ ಬೇಡಿಕೆ ಸಲ್ಲಿಸುತ್ತಿದ್ದು, ಗ್ರಾ.ಪಂ.ಗಳಿಂದಲೂ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಈ ಬಗ್ಗೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರಿದೆ. ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಆ್ಯಂಬುಲೆನ್ಸ್‌ ಸೇವೆಗೆ ಸಿಗದೇ, ಪರದಾಡುವಂತಾಗಿದೆ. ಇನ್ನಾದರೂ ಆರೋಗ್ಯ ಇಲಾಖೆಯವರು ಎಚ್ಚೆತ್ತುಕೊಂಡು ತುರ್ತಾಗಿ ಆ್ಯಂಬುಲೆನ್ಸ್‌ ಸೇವೆಯನ್ನು ಒದಗಿಸಲಿ.
– ಪ್ರತಾಪ್‌ ಶೆಟ್ಟಿ ಎ.ಆರ್‌., ಮಡಾಮಕ್ಕಿ ಗ್ರಾ.ಪಂ. ಸದಸ್ಯ.

ಜನರ ಗೋಳು ತಪ್ಪಿದ್ದಲ್ಲ…
ಕಿ.ಮೀ. ಗಟ್ಟಲೆ ದೂರದಿಂದ ಮನೆಯಲ್ಲಿ ಯಾರಿಗಾದರೂ ಅನಾರೋಗ್ಯ ಉಂಟಾದರೆ, ಹೃದಯಾಘಾತ ಉಂಟಾದರೆ, ಗರ್ಭಿಣಿಯರನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾದರೆ ಜನರು ಪಡುವ ಪಾಡು ಅಷ್ಟಿಷ್ಟಲ್ಲ. ಅದು ಅನುಭವಿಸಿದವರಿಗೆ ಗೊತ್ತು. ತುರ್ತು ಸಂದರ್ಭದಲ್ಲಿ ಆ್ಯಂಬುಲೆನ್ಸ್‌ ಸಿಕ್ಕಿ, ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸುತ್ತಿದ್ದರೆ, ಬದುಕಿಸಬಹುದಿತ್ತು ಅನ್ನುವ ಕುಟುಂಬಗಳು ಅನೇಕ ಇವೆ. ಈಗಲಾದರೂ ಗ್ರಾಮೀಣ ಪ್ರದೇಶದ ನೆಲೆಯಲ್ಲಿ ಇಲ್ಲಿನ ಜನರ ಬೇಡಿಕೆಗೆ ಸ್ಪಂದಿಸಿ, ಆರೋಗ್ಯ ಇಲಾಖೆಯು ತ್ವರಿತಗತಿಯಲ್ಲಿ ಆ್ಯಂಬುಲೆನ್ಸ್‌ ನೀಡಿ, ಜೀವ ಉಳಿಸುವ ಕಾರ್ಯ ಮಾಡಲಿ ಎನ್ನುವುದು ಇಲ್ಲಿನ ಜನರ ಒತ್ತಾಯವಾಗಿದೆ.

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.