ಬಿದ್ಕಲ್ಕಟ್ಟೆ : ಶಿಥಿಲಗೊಂಡ ಮೀನು ಮಾರುಕಟ್ಟೆ
ಛಾವಣಿಗೆ ಹರಿದ ಟಾರ್ಪಾಲು ; ಸುವ್ಯವಸ್ಥಿತ ಮೀನು ಮಾರುಕಟ್ಟೆ ಅನಿವಾರ್ಯ
Team Udayavani, Nov 2, 2020, 9:37 PM IST
ಶಿಥಿಲಗೊಂಡಿರುವ ಬಿದ್ಕಲ್ಕಟ್ಟೆ ಮೀನು ಮಾರುಕಟ್ಟೆ.
ತೆಕ್ಕಟ್ಟೆ: ಇಲ್ಲಿನ ಹಾರ್ದಳ್ಳಿ- ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿದ್ಕಲ್ಕಟ್ಟೆಯ ಪ್ರಮುಖ ಭಾಗದಲ್ಲಿರುವ ಮೀನು ಮಾರುಕಟ್ಟೆಯ ಕಟ್ಟಡ ಶಿಥಿಲಗೊಂಡಿದ್ದು, ಮೀನು ಮಾರಾಟಕ್ಕೆ ಅಡಚಣೆ ಉಂಟಾಗಿದೆ.
ದಶಕಗಳ ಹಿಂದೆ ನಿರ್ಮಾಣಗೊಂಡಿ ರುವ ಈ ಮೀನು ಮಾರುಕಟ್ಟೆ ಕಟ್ಟಡದ ಸೂರು ಹಾನಿಗೊಳಗಾಗಿದೆ. ಗ್ರಾಮೀಣ ಭಾಗದ ಮೊಳಹಳ್ಳಿ, ಗಾವಳಿ, ಜನ್ನಾಡಿ, ಗುಡ್ಡೆ ಅಂಗಡಿಯ ಜನರು ಇಲ್ಲಿಗೆ ಬರುತ್ತಿದ್ದರೂ ಕಟ್ಟಡದ ಸ್ಥಿತಿ ಮಾತ್ರ ಸುಧಾರಣೆ ಕಂಡಿಲ್ಲ. ಸದ್ಯಕ್ಕೆ ಛಾವಣಿಗೆ ಟಾರ್ಪಾಲು
ಗ್ರಾಮ ಪಂಚಾಯತ್ ಕಚೇರಿಯ ಅನತಿ ದೂರದಲ್ಲೇ ಈ ಕಟ್ಟಡ ಇದೆ. ವರ್ಷಗಳು ಉರುಳಿದರೂ ಇದು ದುರಸ್ತಿ ಕಂಡಿಲ್ಲ. ಸದ್ಯ ಛಾವಣಿಗೆ ಟಾರ್ಪಾಲು ಹಾಕಲಾಗಿದೆ. ಅದೂ ಹರಿದು ಹೋಗಿದೆ. ಮಳೆ ಬರುವ ವೇಳೆ ನೀರು ಸೋರುತ್ತದೆ.
ಹಲವು ವರ್ಷಗಳಿಂದ ಮೀನು ಮಾರುಕಟ್ಟೆ ನಿರ್ವಹಣೆ ಇಲ್ಲದೆ ಸೊರಗಿದೆ. ಬಿದ್ಕಲ್ಕಟ್ಟೆ ಗ್ರಾಮಕ್ಕೆ ಸುವ್ಯವಸ್ಥಿತ ಮೀನು ಮಾರುಕಟ್ಟೆ ಅನಿವಾರ್ಯವಿದೆ. ಇದರಿಂದಾಗಿ ಗ್ರಾಮೀಣ ಭಾಗದ ಮಹಿಳೆಯರು ಸ್ವೋದ್ಯೋಗ ಸೃಷ್ಟಿ
ಯಾಗಿ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸ್ಥಳೀಯರಾದ ಚಂದ್ರಶೇಖರ್ ಅವರು ಹೇಳುತ್ತಾರೆ.
ಪ್ರಸ್ತಾವ ಬಂದಿಲ್ಲ
ಈ ಮಾರುಕಟ್ಟೆ ನವೀಕರಣದ ಬಗ್ಗೆ ಈ ವರೆಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ . ಈಗಾಗಲೇ ರಸ್ತೆ ವಿಸ್ತರಣೆ ನಿಯಮದಂತೆ ಹಳೆ ಮೀನುಗಾರಿಕೆ ಕಟ್ಟಡ ತೆರವುಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಸುವ್ಯವಸ್ಥಿತ ಕಟ್ಟಡ ನಿರ್ಮಾಣಕ್ಕೆ ಸಾರ್ವಜನಿಕರಿಂದ ಬೇಡಿಕೆ ಬಂದಾಗ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವ ಜತೆಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
-ರೇಖಾ, ಪಿಡಿಒ, ಗ್ರಾ.ಪಂ.ಹಾರ್ದಳ್ಳಿ -ಮಂಡಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.