Kundapur: ಗೆಲುವಿನ ಮೆಟ್ಟಿಲು ಏರುತ್ತಿರುವ ಬಿಜೆಪಿ: ಕಿರಣ್‌ ಕುಮಾರ್‌ ಕೊಡ್ಗಿ

85 ಸಾವಿರಕ್ಕೂ ಅಧಿಕ ಮತದಾರರ ಭೇಟಿ

Team Udayavani, May 9, 2023, 5:09 PM IST

Kundapur: ಗೆಲುವಿನ ಮೆಟ್ಟಿಲು ಏರುತ್ತಿರುವ ಬಿಜೆಪಿ: ಕಿರಣ್‌ ಕುಮಾರ್‌ ಕೊಡ್ಗಿ

ಕುಂದಾಪುರ: ಅಭೂತಪೂರ್ವ ಜನಸ್ಪಂದನ ದೊರೆಯುತ್ತಿದೆ. ಪ್ರತಿ ಸಭೆಗಳಲ್ಲೂ ಸಾವಿರಾರು ಮಂದಿ ಭಾಗವಹಿಸುವುದು ನೋಡಿದರೆ ಗೆಲುವಿನ ಮೆಟ್ಟಿಲು ದಿನದಿಂದ ದಿನಕ್ಕೆ ಏರುತ್ತಾ ದೊಡ್ಡ ಅಂತರದಲ್ಲಿ ವಿಜಯಿ ಆಗುವುದರಲ್ಲಿ ಸಂಶಯ ಇಲ್ಲ. ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಪ್ರಚಾರ ಕಾರ್ಯದಲ್ಲಿ ನಿರಂತರ ತೊಡಗಿಸಿಕೊಂಡಿದ್ದು ಮತದಾರರು ಪ್ರಾಮಾಣಿಕತೆಗೆ, ಸಾಮಾಜಿಕ ನ್ಯಾಯಕ್ಕೆ ಬೆಲೆ ನೀಡಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಕಿರಣ್‌ ಕುಮಾರ್‌ ಕೊಡ್ಗಿ ಹೇಳಿದರು.

ಅವರು ಸೋಮವಾರ ವಿವಿಧೆಡೆ ಮತದಾರರನ್ನು ಭೇಟಿ ಮಾಡಿ ಪ್ರಚಾರ ಕಾರ್ಯದಲ್ಲಿ ತೊಡಗಿ ಮಾತನಾಡಿದರು.

ಬಿಜೆಪಿ ಮಾಜಿ ಅಧ್ಯಕ್ಷ ಸುರೇಶ್‌ ಶೆಟ್ಟಿ ಕಾಡೂರು, ವಿವಿಧ ಸಭೆ, ಸಮಾವೇಶ, ಮನೆ ಭೇಟಿ ಮೂಲಕ ಕಿರಣ್‌ ಕುಮಾರ್‌ ಕೊಡ್ಗಿ ಅವರು 85 ಸಾವಿರಕ್ಕೂ ಅಧಿಕ ಮತದಾರರನ್ನು ನೇರ ಭೇಟಿ ಮಾಡಿದ್ದಾರೆ. ವಿವಿಧ ನಗರಗಳಲ್ಲಿ ನಡೆದ ಪಾದಯಾತ್ರೆ ಮೂಲಕ ಲಕ್ಷಕ್ಕೂ ಅಧಿಕ ಜನರನ್ನು ಸಂಪರ್ಕಿಸಿದ್ದಾರೆ. ಎಲ್ಲೆಡೆ ಕಾರ್ಯಕರ್ತರ, ಮತದಾರರ ಬೆಂಬಲ ಬಿಜೆಪಿಗೆ ವ್ಯಕ್ತವಾಗಿದೆ. ಒಬ್ಬ ಪ್ರಾಮಾಣಿಕ, ಸಜ್ಜನಿಕೆಯ ಅಭ್ಯರ್ಥಿಯನ್ನು ಗೆಲ್ಲಿಸುವುದು ಮತದಾರರ ಗುರಿಯಾಗಿದೆ ಎಂದರು.

ಬಿಜೆಪಿ ಮಂಡಲದಲ್ಲಿ 7 ಮಹಾಶಕ್ತಿ ಕೇಂದ್ರಗಳು, 40 ಶಕ್ತಿ ಕೇಂದ್ರಗಳಿವೆ. 42 ಕಡೆ ಕಾರ್ಯಕರ್ತರ ಸಭೆ ನಡೆಸಿದ್ದು ಪ್ರತಿ ಸಭೆಗಳಲ್ಲೂ ಕನಿಷ್ಟ 800ರಿಂದ 1,500 ತನಕ ಜನ ಸೇರಿದ್ದಾರೆ. ಕೋಟೇಶ್ವರದಲ್ಲಿ, ಕುಂದಾಪುರ ನಗರದಲ್ಲಿ ಬೃಹತ್‌ ಸಭೆಗಳನ್ನು ನಡೆಸಲಾಗಿದೆ. ಸಾಲಿಗ್ರಾಮದಲ್ಲಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಕಾರ್ಯಕ್ರಮ ನಡೆದಿದೆ. ಹೀಗೆ ಕನಿಷ್ಟ ದಿನಗಳಲ್ಲಿ ಗರಿಷ್ಟ ಜನರನ್ನು ತಲುಪುವ ಮೂಲಕ ಕಿರಣ್‌ ಕೊಡ್ಗಿ ಅವರು ಮತದಾರರಿಗೆ ಸಮೀಪ ಆಗಿದ್ದಾರೆ ಎಂದರು.

ಮಂಡಲ ಅಧ್ಯಕ್ಷ ಶಂಕರ್‌ ಅಂಕದಕಟ್ಟೆ, ಕುಂದಾಪುರ ನಗರದಲ್ಲಿ ಬೃಹತ್‌ ಪಾದಯಾತ್ರೆ ಮೂಲಕ ಮತ ಯಾಚಿಸಲಾಗಿದೆ. ಬಹಳ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಶಾಸಕ ಹಾಲಾಡಿ ಹಾಗೂ ಅಭ್ಯರ್ಥಿ ಕಿರಣ್‌ ಕೊಡ್ಗಿ ಅವರ ಜತೆಗೂಡಿ ಕೇಸರಿ ಶಾಲು ಹಾಕಿ ಹೆಜ್ಜೆ ಹಾಕಿದ್ದಾರೆ.

ಪುರಸಭೆಯ ಎಲ್ಲ ವಾರ್ಡ್‌ಗಳಲ್ಲಿ ಸ್ವತಃ ಅಭ್ಯರ್ಥಿ ಮೂಲಕ ಪ್ರಚಾರ ಮಾಡಲಾಗಿದೆ. ವಿಧಾನಸಭಾ ಕ್ಷೇತ್ರದ ಎಲ್ಲ ಪ್ರಮುಖ ಪಟ್ಟಣಗಳಲ್ಲಿ ಪಾದಯಾತ್ರೆ ನಡೆಸಿ ಅಭ್ಯರ್ಥಿ ಮತಯಾಚಿಸಿದ್ದಾರೆ. ಇವೆಲ್ಲವೂ ಕೂಡಾ ಅಭ್ಯರ್ಥಿಯ ಪರಿಚಯ ಇಲ್ಲ ಎನ್ನುವ ವಿಪಕ್ಷದ ಟೀಕೆಗೆ ಉತ್ತರವಾಗಿದೆ. ಕಳೆದ 30 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಇರುವ ಕಿರಣ್‌ ಕೊಡ್ಗಿ ಅವರನ್ನು ಬಿಜೆಪಿ ಕಾರ್ಯಕರ್ತರಿಗೆ ಪರಿಚಯಿಸಬೇಕಿರಲಿಲ್ಲ. ಮತದಾರರನ್ನು ಈಗ ಸಮಾವೇಶ, ಸಭೆ, ಪಾದಯಾತ್ರೆ ಮೂಲಕ ತಲುಪಿದಾಗಲೂ ಎಲ್ಲಿಯೂ ಅಪರಿಚಿತ ಎಂಬ ಭಾವದ ಪ್ರತಿಕ್ರಿಯೆ ಬರಲಿಲ್ಲ. ಬಿಜೆಪಿ ಗೆಲುವಿಗೆ ಯಾರಿಂದಲೂ ತಡೆ ಒಡ್ಡಲು ಸಾಧ್ಯವಿಲ್ಲ ಎಂದರು.

ಸಾಮಾಜಿಕ ನ್ಯಾಯ
ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹೇಗೆ ಜಾತಿ, ಮತ, ಧರ್ಮಗಳನ್ನು ಸಮಾನವಾಗಿ ಕಾಣುತ್ತಾ ಸಾಮಾಜಿಕ ನ್ಯಾಯವನ್ನು ಪರಿಪಾಲಿಸುತ್ತಿದ್ದರೋ ಅದೇ ಮಾದರಿಯಲ್ಲಿ ಸಾಮಾಜಿಕ ನ್ಯಾಯ ಕಾಪಾಡುತ್ತೇನೆ. ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುತ್ತೇನೆ. ಕ್ಷೇತ್ರದ ಜನರ ಜತೆ ನಿಕಟ ಸಂಪರ್ಕದಲ್ಲಿ ಇರುತ್ತೇನೆ. ಕ್ಷೇತ್ರದ ಜನರ ಬೇಡಿಕೆಗಳನ್ನು ಈಡೇರಿಸಲು ಎಲ್ಲ ಹಂತದಲ್ಲೂ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕಳೆದ ಮೂರು ದಶಕಗಳಿಂದ ರಾಜಕೀಯ ಜೀವನದಲ್ಲಿ ಇದ್ದು ಈವರೆಗೂ ಯಾವುದೇ ಹುದ್ದೆ, ಅಧಿಕಾರದ ಹಿಂದೆ ಹೋದವನಲ್ಲ. ಅನಿರೀಕ್ಷಿತವಾಗಿ ದೊರೆತ ಈ ಅವಕಾಶದ ಸದ್ಬಳಕೆ ಮಾಡುತ್ತೇನೆ. ಅದಕ್ಕಾಗಿ ಮತದಾರರ ಆಶೀರ್ವಾದ ಅಗತ್ಯ.
ಕಿರಣ್‌ ಕುಮಾರ್‌ ಕೊಡ್ಗಿ, ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

Fake Document  ಸೃಷ್ಟಿಸಿ ವಾಹನ ನೋಂದಣಿ: ದೂರು ದಾಖಲು

Fake Document ಸೃಷ್ಟಿಸಿ ವಾಹನ ನೋಂದಣಿ: ದೂರು ದಾಖಲು

Kundapura ವಂಚನೆ: ಫೈನಾನ್ಸ್‌ ಸಿಬಂದಿ ವಿರುದ್ಧ ದೂರು

Kundapura ವಂಚನೆ: ಫೈನಾನ್ಸ್‌ ಸಿಬಂದಿ ವಿರುದ್ಧ ದೂರು

kuKundapura ಪ್ರತ್ಯೇಕ ಪ್ರಕರಣ: ಮೂವರು ದಿಢೀರ್‌ ಸಾವು

Kundapura ಪ್ರತ್ಯೇಕ ಪ್ರಕರಣ: ಮೂವರು ದಿಢೀರ್‌ ಸಾವು

Kundapura: ಊರಿಗೆ ಹೆಮ್ಮೆ: ಶಾಸಕ ಗಂಟಿಹೊಳೆ

Kundapura: ಊರಿಗೆ ಹೆಮ್ಮೆ: ಶಾಸಕ ಗಂಟಿಹೊಳೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.