ಬೈಂದೂರು: ಸಹಕಾರಿ ಬ್ಯಾಂಕಿನಲ್ಲಿ ಕಳ್ಳತನಕ್ಕೆ ಯತ್ನ

ಕಳ್ಳತನಕ್ಕೆಂದು ಬಂದು ಹೆಲ್ಮೆಟ್‌ ಬಿಟ್ಟು ತೆರಳಿದರು!

Team Udayavani, Oct 24, 2022, 12:00 AM IST

ಬೈಂದೂರು: ಸಹಕಾರಿ ಬ್ಯಾಂಕಿನಲ್ಲಿ ಕಳ್ಳತನಕ್ಕೆ ಯತ್ನ

ಬೈಂದೂರು: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ ಕುಂದಾಪುರ ಇದರ ಬೈಂದೂರು ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

ಅಚ್ಚರಿಯ ವಿಚಾರವೆಂದರೆ ಕಳ್ಳತನಕ್ಕೆ ಬಂದವರು ಸಂಘದ ಕಚೇರಿಯೊಳಗೆ ವೆಲ್ಡಿಂಗ್‌ ಮಾಡುವ ಹೋಲ್ಡರ್‌ ಮತ್ತು ಹೆಲ್ಮೆಟ್‌ ಅನ್ನು ಬಿಟ್ಟು ತೆರಳಿರುವುದು.

ಹೌದು ಯಡ್ತರೆ ಗ್ರಾಮದಲ್ಲಿರುವ ಈ ಸಹಕಾರಿ ಸಂಘದ ಕಚೇರಿಗೆ ಅ. 20ರ ಸಂಜೆ 5.30ರಿಂದ ಅ. 21 ರ ಬೆಳಗ್ಗೆ ಮಧ್ಯದ ಅವಧಿಯಲ್ಲಿ ಆಗಮಿಸಿದ್ದ ಕಳ್ಳರು ಯಾವುದೋ ಆಯುಧದಿಂದ ಬ್ಯಾಂಕ್‌ ನ ಉತ್ತರ ಬದಿಯ ಕಿಟಕಿಯ ಸರಳುಗಳನ್ನು ಕತ್ತರಿಸಿ, ಒಳ ಪ್ರವೇಶಿಸಿದ್ದಾರೆ. ಬಳಿಕ ಕಿಟಕಿಗಳಿಗೆ ಕಪ್ಪು ಬಣ್ಣದ ಟರ್ಪಾಲುಗಳನ್ನು, ಅಲ್ಲಲ್ಲಿ ಬಟ್ಟೆಗಳನ್ನು ಹಾಕಿ, ವೆಲ್ಡಿಂಗ್‌ ಮೆಷಿನ್‌ನಿಂದ ಲಾಕರನ್ನು ತೆರೆ ಯಲು ಪ್ರಯತ್ನಿಸಿದ್ದಾರೆ. ಬ್ಯಾಂಕಿನ ನಗದು ಕೌಂಟರ್‌ ಬಳಿಯ ಕಿಟಕಿಯ ಬಾಗಿಲನ್ನು ತೆರೆದು ಕಿಟಕಿಯ ಕಬ್ಬಿಣದ ಸರಳುಗಳನ್ನು ಕತ್ತರಿಸಿದ್ದಾರೆ.

ಬ್ಯಾಂಕ್‌ನಲ್ಲಿದ್ದ ಸಿಸಿ ಕೆಮರಾದ ವಯರ್‌ಗಳನ್ನು ಕೂಡ ಕತ್ತರಿಸಿದ್ದು, ಸೈರನ್‌ ವಯರ್‌ಗಳನ್ನು ಸಹ ಕತ್ತರಿಸಿದ್ದಾರೆ. ಲಾಕರ್‌ ಬಳಿ ಹೋಲ್ಡರ್‌ ಹಾಗೂ ಹೆಲ್ಮೆಟ್‌ ಅನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

ಘಟನ ಸ್ಥಳಕ್ಕೆ ಬೈಂದೂರು ವೃತ್ತ ನಿರೀಕ್ಷಕ ಸಂತೋಷ್‌ ಕಾಯ್ಕಿಣಿ, ಬೈಂದೂರು ಎಸ್‌ಐ ಶ್ರೀನಿವಾಸ ಗೌಡ, ಸಿಬಂದಿ, ಬೆರಳಚ್ಚು ತಜ್ಞರು, ಶ್ವಾನದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕಿನ ಶಾಖಾ ವ್ಯವಸ್ಥಾಪಕ ಎನ್‌. ರಾಮ ಅವರು ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊರಗಿನವರ ಕೃತ್ಯ?
ಪೊಲೀಸ್‌ ಮಾಹಿತಿ ಪ್ರಕಾರ ಇದು ಸ್ಥಳೀಯರ ಕೃತ್ಯವಾಗಿರಲು ಸಾಧ್ಯವಿಲ್ಲ, ಹೊರಗಿನವರ ತಂಡವೊಂದು ಈ ಕಳ್ಳತನಕ್ಕೆ ಯತ್ನಸಿರಬಹುದು ಎಂದು ತಿಳಿದು ಬಂದಿದೆ. ಕಳ್ಳತನಕ್ಕೆ ಬೇಕಾದ ಎಲ್ಲ ಸಲಕರಣೆಗಳನ್ನು ತಂದಿರುವುದು ನೋಡಿದರೆ, ಪರಿಣತ ಕಳ್ಳರ ತಂಡದ್ದೆ ಕೃತ್ಯ ಇರಬಹುದು ಎನ್ನಲಾಗುತ್ತಿದ್ದು, ಕೆಲ ಪರಿಕರಗಳನ್ನು ಅಲ್ಲಿಯೇ ಬಿಟ್ಟಿರುವುದರಿಂದ ಯಾರೋ ಬಂದರೆಂದು ಅಲ್ಲಿಂದ ಓಡಿ ಹೋಗಿರಬಹುದು ಎನ್ನುವ ಸಂಶಯ ಮೂಡಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.