ಕುಂದಾಪುರ: ಅಪಘಾತದಲ್ಲಿ ಸಾವು: ಚಾಲಕನಿಗೆ ಶಿಕ್ಷೆ


Team Udayavani, Jul 7, 2022, 7:11 PM IST

tdy-4

ಕುಂದಾಪುರ: ಬೈಂದೂರಿನ ಶಿರೂರಿನಲ್ಲಿ ಕಳೆದ 11 ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ಒಬ್ಬರ ಸಾವಿಗೆ ಕಾರಣನಾದ ಚಾಲಕನಿಗೆ ಬೈಂದೂರು ಸಂಚಾರಿ ನ್ಯಾಯಾಲಯ  ಪೀಠ 1 ವರ್ಷ ಜೈಲು ಶಿಕ್ಷೆ ನೀಡಿದೆ.

ಯಡ್ತರೆ ಗ್ರಾಮದ ಕಡ್ಕೆ ನಿವಾಸಿ ಚಂದ್ರ ಗೊಂಡ (33) ಶಿಕ್ಷೆಗೊಳಗಾದವ. 2011ರ ಅ.27ರಂದು ನೋಂದಣಿಯಾಗದ ಆಮ್ನಿ ಕಾರನ್ನು ಚಲಾಯಿಸುತ್ತಿದ್ದ ಚಂದ್ರ ಗೊಂಡ ರಸ್ತೆ ಹೊಂಡ ತಪ್ಪಿಸಲು ವಾಹನವನ್ನು ರಸ್ತೆ ಬದಿಗೆ ಕೊಂಡೊಯ್ದಾಗ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದಿತ್ತು. ಕಾರಿನಲ್ಲಿದ್ದ ವೆಂಕಟೇಶ ನಾಯ್ಕ ಮೃತಪಟ್ಟಿದ್ದು ಚಾಲಕ ಸಹಿತ ಇತರರು ಗಾಯಗೊಂಡಿದ್ದರು. ಚಾಲಕನ ಬಳಿ ಲೈಸೆನ್ಸ್‌  ಇರಲಿಲ್ಲ. ವಿಚಾರಣೆ ನಡೆಸಿದ ನ್ಯಾಯಾಲಯ ಚಂದ್ರ ಗೊಂಡ ದೋಷಿ ಎಂದು ತೀರ್ಪು ನೀಡಿದ್ದು ವಿವಿಧ ಕಲಮುಗಳಡಿ ಶಿಕ್ಷೆ ವಿಧಿಸಿದೆ. ಗಾಯಾಳುಗಳಿಗೆ ತಲಾ 1 ಸಾವಿರ ರೂ., ಮೃತರ ಮನೆಯವರಿಗೆ 2 ಸಾವಿರ ರೂ. ಪರಿಹಾರ ನೀಡಬೇಕು ಎಂದು ಜೆಎಂಎಫ್ಸಿ ನ್ಯಾಯಾಧೀಶ ಧನೇಶ ಮುಗಳಿ ಅವರು ತೀರ್ಪು ನೀಡಿದ್ದಾರೆ.

ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ವರ್ಷಶ್ರೀ ಶೆಟ್ಟಿ ವಾದಿಸಿದ್ದರು. ನ್ಯಾಯಾಲಯ ಕಲಾಪ ಬೈಂದೂರಿಗೆ ವರ್ಗವಾದ ಬಳಿಕ ಪ್ರಕಟವಾದ ಮೊದಲ ಶಿಕ್ಷೆ ತೀರ್ಪು ಇದಾಗಿದೆ.

ಸೆ.255 ಅಡಿಯಲ್ಲಿ 2 ತಿಂಗಳು ಶಿಕ್ಷೆ, 500 ರೂ. ದಂಡ, ದಂಡ ತೆರಲು ತಪ್ಪಿದರೆ ಹೆಚ್ಚುವರಿ 15 ದಿನಗಳ ಶಿಕ್ಷೆ, ಸೆ.337ರಲ್ಲಿ  2 ತಿಂಗಳು ಜೈಲು, 300 ರೂ. ದಂಡ, ದಂಡ ನೀಡಲು ತಪ್ಪಿದರೆ 10 ದಿನಗಳ ಹೆಚ್ಚುವರಿ ಜೈಲು, ಸೆ.338ರಲ್ಲಿ 3 ತಿಂಗಳ ಜೈಲು, 500 ರೂ. ದಂಡ, ದಂಡ ತೆರಲು ತಪ್ಪಿದರೆ 15 ದಿನಗಳ ಜೈಲು, ಸೆ.304ಎಯಲ್ಲಿ 1 ವರ್ಷ ಜೈಲು, 5 ಸಾವಿರ ರೂ. ದಂಡ, ದಂಡ ನೀಡಲು ತಪ್ಪಿದರೆ 1 ತಿಂಗಳ ಶಿಕ್ಷೆ, ಮೋಟಾರು ವಾಹನ ಕಾಯ್ದೆ ಸೆ.3 ಪ್ರಕಾರ 500 ರೂ. ದಂಡ, ಅದಕ್ಕೆ ತಪ್ಪಿದರೆ 15 ದಿನಗಳ ಜೈಲು, ಮೋ. ಕಾಯ್ದೆ ಸೆ.39 ಪ್ರಕಾರ 3 ಸಾವಿರ ರೂ. ದಂಡ, ತಪ್ಪಿದರೆ 45 ದಿನಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.