Lok Sabha Elections: ಕಾಂಗ್ರೆಸ್‌ ಪರ ಬೇರೆ ಕ್ಷೇತ್ರದಲ್ಲೂ ಪ್ರಚಾರ; ಶಿವರಾಜ್‌ ಕುಮಾರ್‌


Team Udayavani, Mar 21, 2024, 8:22 PM IST

Lok Sabha Elections: ಕಾಂಗ್ರೆಸ್‌ ಪರ ಬೇರೆ ಕ್ಷೇತ್ರದಲ್ಲೂ ಪ್ರಚಾರ; ಶಿವರಾಜ್‌ ಕುಮಾರ್‌

ಕುಂದಾಪುರ: ಶಿವಮೊಗ್ಗದಲ್ಲಿ ಗೀತಾ ಪರ ನಾನು ಈ ಬಾರಿ ಸಂಪೂರ್ಣ ಜತೆಗಿರುತ್ತೇನೆ. ಕಾಂಗ್ರೆಸ್‌ ಪರ ಶಿವಮೊಗ್ಗದೊಂದಿಗೆ ಬೇರೆ ಕ್ಷೇತ್ರದಲ್ಲೂ ಈ ಬಾರಿ ಪ್ರಚಾರ ಮಾಡುತ್ತೇನೆ. ಸ್ವಲ್ಪ ಶೂಟಿಂಗ್‌ ಇದೆ. ಅದು ಮುಗಿಸಿಕೊಂಡು ಮತ್ತೆ ಬರುತ್ತೇನೆ. ಗೀತಾ ಪರ ಪ್ರಚಾರಕ್ಕೆ ಚಿತ್ರರಂಗದವರೂ ಬರುತ್ತಾರೆ. ಫೀಲಂ ಚೇಂಬರ್‌ನವರು, ನಿರ್ಮಾಪಕರು, ನಿರ್ದೇಶಕರು ಬರುತ್ತಾರೆ. ಕಲಾವಿದರು ಯಾರೆಲ್ಲ ಬರುತ್ತಾರೆ ಗೊತ್ತಿಲ್ಲ, ಕರೆದರೆ ಖಂಡಿತ ಬರುತ್ತಾರೆ ಎಂದು ನಟ ಶಿವರಾಜ್‌ ಕುಮಾರ್‌ ಹೇಳಿದರು.

ಗುರುವಾರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರ ವಿಶೇಷ ಪೂಜೆ ಸಲ್ಲಿಸಿ, ಬಳಿಕ ವಂಡ್ಸೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.

ಎಲ್ಲ ಪಕ್ಷದಲ್ಲೂ ನನ್ನ ಅಭಿಮಾನಿಗಳಿದ್ದಾರೆ. ಎಲ್ಲರಿಗೂ ಅವರದ್ದೇ ನಿರ್ಧಾರ ಕೈಗೊಳ್ಳುವ ಹಕ್ಕಿದೆ. ನಾವು ಹೇಳುವ ಮಾತುಗಳು ಅವರಿಗೆ ಮನವರಿಕೆ ಆದರೆ ನಮ್ಮ ಜತೆ ಬರ್ತಾರೆ. ಯಾರನ್ನೂ ಒತ್ತಡ ಹಾಕಿ, ಎಳೆದುಕೊಂಡು ಬರಲು ಆಗಲ್ಲ. ಮನಸಾರೆ ನಾನು ಅಭಿಮಾನಿಗಳ ಜತೆಗೆ ಇರುತ್ತೇನೆ ಎಂದವರು ತಿಳಿಸಿದರು.

ಅಪ್ಪಾಜಿ ಬಿಟ್ಟರೆ ಕರಾವಳಿಯಲ್ಲಿ ಅತೀ ಹೆಚ್ಚು ಶೂಟಿಂಗ್‌ನಲ್ಲಿ ಪಾಲ್ಗೊಂಡಿರುವುದು ನಾನೇ. ಇಲ್ಲಿನ ಜನ ತುಂಬಾ ಇಷ್ಟ. ಕಾಣೆ, ಅಂಜಲ್‌, ಬೂತಾಯಿ ಎಲ್ಲವೂ ಇಷ್ಟ ಎಂದ ಅವರು, ಬೈಂದೂರು ಕ್ಷೇತ್ರದ ಎಲ್ಲ ಕಡೆಗೂ ಈ ಸಲ ಹೋಗುತ್ತೇನೆ ಎಂದವರು ಹೇಳಿದರು.

ಗೀತಾ ಖಂಡಿತ ಒಳ್ಳೆಯ ಕೆಲಸ ಮಾಡುವ ವಿಶ್ವಾಸವಿದೆ. ಗೆದ್ದರೆ ಜನರಿಗೆ ಸುಲಭವಾಗಿ ಸಿಗುತ್ತಾರೆ. ಇದಕ್ಕೆ ನಾನು ಗ್ಯಾರಂಟಿ. ಶಕ್ತಿಧಾಮವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಸಮಾಜದ ಬಗ್ಗೆಯೂ ಆಕೆಗೆ ಒಳ್ಳೆಯ ಕಾಳಜಿಯಿದೆ. ಹೆಣ್ಣು ಮನಸ್ಸು ಮಾಡಿದರೆ ಏನೂ ಬೇಕಾದರೂ ಮಾಡಬಹುದು. ಇಂದಿರಾ ಗಾಂಧಿಯವರಿಗಿಂತ ದೊಡ್ಡ ಉದಾಹರಣೆ ಬೇಕಾ? ಹಿಂದೆ ಗೀತಾ ಜೆಡಿಎಸ್‌ನಿಂದ ಸೋತಿರಬಹುದು. ಆದರೆ ಈ 10 ವರ್ಷದಲ್ಲಿ ಹೊಸ ಮತದಾರರು ಬಂದಿದ್ದಾರೆ. ಹೊಸ ಐಡಿಯಾಗಳು ಬಂದಿವೆ. ಮತದಾರರು ಪ್ರಾಯೋಗಿಕವಾಗಿ ನೋಡುತ್ತಾರೆ. ಜನ ಕಾಂಗ್ರೆಸ್‌ ಬಗ್ಗೆ ಒಲವು ತೋರುತ್ತಿದ್ದಾರೆ ಎಂದರು.

ಶಿವಮೊಗ್ಗ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌, ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ್‌ ಶೆಟ್ಟಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vinay-kulkarni1

Dharawad: ಜಲ ಜೀವನ್ ಮಿಷನ್‌ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.