ಬಾವಿಗಿಳಿಯುವಾಗ ಎಚ್ಚರ ಅಗತ್ಯ ; ಆಮ್ಲಜನಕದ ಕೊರತೆ, ವಿಷಾನಿಲ ತುಂಬಿರುವ ಸಾಧ್ಯತೆ


Team Udayavani, May 28, 2020, 6:03 AM IST

ಬಾವಿಗಿಳಿಯುವಾಗ ಎಚ್ಚರ ಅಗತ್ಯ

ಕುಂದಾಪುರ: ಎಲ್ಲೆಡೆ ಬಿಸಿಲ ಬೇಗೆ ಹೆಚ್ಚಾಗುತ್ತಿದ್ದು, ಕೆಲವೆಡೆಗಳಲ್ಲಿ ಕೆರೆ, ಬಾವಿಗಳು ನೀರಿಲ್ಲದೆ ಬತ್ತುತ್ತಿವೆ. ಕರಾವಳಿ ಭಾಗದಲ್ಲಿ ಈ ಸಮಯ ಬಾವಿಗಳಲ್ಲಿ ತುಂಬಿಕೊಂಡಿರುವ ಹೂಳು, ಕೆಸರು ತೆಗೆದು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ. ಆದರೆ ಬಾವಿಯೊಳಗೆ ಆಮ್ಲಜನಕದ ಕೊರತೆಯುಂಟಾಗಿ, ವಿಷಾನಿಲ ತುಂಬಿರುವುದರಿಂದ ಬಾವಿಗಿಳಿಯುವ ಮುನ್ನ ಎಚ್ಚರವಹಿಸಬೇಕಾಗಿದೆ. ಬೇಸಗೆಯಲ್ಲಿ ಆಳವಾದ, ಅಗಲ ಕಡಿಮೆಯಿರುವ ಬಾವಿಗಳಲ್ಲಿ ವಿಷಾನಿಲ ತುಂಬಿಕೊಂಡಿರುವ ಸಾಧ್ಯತೆ ಗಳಿದ್ದು, ಸೂಕ್ತ ಸುರಕ್ಷತಾ ಕ್ರಮಗಳನ್ನು ಮಾಡಿಕೊಂಡು ಬಾವಿಗಿಳಿಯಬೇಕು.

ಗುಡ್ಡಮ್ಮಾಡಿಯಲ್ಲಿ ದುರ್ಘ‌ಟನೆ
ಇದಕ್ಕೆ ಪೂರಕವಾಗಿ ಬುಧವಾರ ಸೇನಾಪುರ ಗ್ರಾಮದ ಗುಡ್ಡಮ್ಮಾಡಿಯಲ್ಲಿಯೂ ಘಟನೆ ಸಂಭವಿಸಿದೆ. ಬಾವಿ ಯೊಳಗೆ ಒಬ್ಬರು ಆಯ ತಪ್ಪಿ ಬಿದ್ದಿದ್ದು, ಅವರು ಅಸ್ವಸ್ಥ ಗೊಂಡು ಮೃತಪಟ್ಟರೆ, ಅವರನ್ನು ಮೇಲೆತ್ತಲು ಇಳಿದ ವ್ಯಕ್ತಿಯು ಕೂಡ ಆಮ್ಲಜನಕದ ಕೊರತೆಯಿಂದಾಗಿ ಅಸ್ವಸ್ಥಗೊಂಡಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಜನರಿಗೆ ಸೂಕ್ತ ಮಾಹಿತಿ ಇಲ್ಲದಿರುವುದರಿಂದ ಪ್ರತಿ ವರ್ಷ ಜಿಲ್ಲೆಯಲ್ಲಿ ಬಾವಿಯಿಂದ ಕೆಸರು ತೆಗೆಯುವ ವೇಳೆ ಜೀವಹಾನಿಯಾಗುವ ಪ್ರಕರಣಗಳು ನಡೆಯುತ್ತಲೇ ಇವೆ. ವಿಷಾನಿಲ ಸೇವಿಸಿ ಬಲಿಯಾಗುವ ಅಪಾಯಗಳೂ ಇವೆ. ಹೀಗಾಗಿ, ಎಚ್ಚರವಹಿಸುವುದು ಅತ್ಯಗತ್ಯವಾಗಿದೆ.

ಏನೆಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು
– ಬಾವಿಗೆ ಇಳಿಯುವ ಮೊದಲು ಬಾವಿಯ ಆಳ ನೋಡಿ ಇಳಿಯುವುದು ಉತ್ತಮ. ಸಾಮಾನ್ಯವಾಗಿ ಆಳ ಜಾಸ್ತಿ ಇರುವ ಬಾವಿಗಳಲ್ಲಿ ಅಪಾಯ ಅಧಿಕ. ಕೆಲವು ಬಾವಿಗಳು 100 ಅಡಿಗಿಂತಲೂ ಅಧಿಕ ಆಳವನ್ನು ಹೊಂದಿರುತ್ತವೆ. ಇಂತಹ ಬಾವಿಗಳು ಅಪಾಯಕಾರಿ.

– ಆಳ ಬಾವಿಗಳಲ್ಲಿ ಆಮ್ಲಜನಕದ ಕೊರತೆ ಅಥವಾ ತ್ಯಾಜ್ಯಗಳು ಕೊಳೆತು ಮಿಥೇನ್‌ ಅನಿಲ ಇರುತ್ತದೆ. ಇಳಿಯುವಾಗ ಆಮ್ಲಜನಕ ಕೊರತೆ ಅಥವಾ ಮಿಥೇನ್‌ ಅನಿಲ ಇಲ್ಲವೆಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು.

– ಇಳಿಯುವಾಗ ಸೊಂಟಕ್ಕೆ ಹಗ್ಗ ಕಟ್ಟಿ ಅದರ ತುದಿ ಯನ್ನು ಮೇಲೆ ಇರುವವರ ಕೈಯಲ್ಲಿ ಕೊಡಬೇಕು. ಅರ್ಧಕ್ಕೆ ಹೋಗುವಾಗ ಉಸಿರುಕಟ್ಟಿದ ಅನುಭವ ಆದರೆ ತತ್‌ಕ್ಷಣ ಮೇಲೆ ಬರಬೇಕು.

– ಇಳಿಯುವ ಮುನ್ನ ಹಗ್ಗವೊಂದಕ್ಕೆ ಬಕೆಟ್‌ ಕಟ್ಟಿ ಅದರಲ್ಲಿ ದೀಪ ಅಥವಾ ಕ್ಯಾಂಡಲ್‌ ಉರಿಸಿಟ್ಟು ಬಾವಿಗೆ ಇಳಿಸಬೇಕು. ದೀಪ ಆರಿದರೆ ಅಲ್ಲಿ ವಿಷಾನಿಲ ಅಥವಾ ಆಮ್ಲಜನಕದ ಕೊರತೆ ಇದೆ ಎಂದರ್ಥ.

– ಬಾವಿಯೊಳಗೆ ವಿಷಾನಿಲ ಇದ್ದರೆ ಮೇಲಿನಿಂದ ಬಾವಿಗೆ ನೀರು ಹಾಕಬೇಕು. ಆಗ ವಿಷಾನಿಲ ಮೇಲಕ್ಕೆ ಬರುತ್ತದೆ. ಮೇಲಿನಿಂದ ಹಸುರು ಎಲೆಗಳಿರುವ ಮರದ ಗೆಲ್ಲುಗಳನ್ನು ಹಾಕಿದರೆ ಆಮ್ಲಜನಕದ ಕೊರತೆ ಸ್ವಲ್ಪಮಟ್ಟಿಗೆ ಪರಿಹಾರವಾಗುತ್ತದೆ.

ಈ ವರ್ಷ 40 ಪ್ರಕರಣ
ಈ ವರ್ಷದ ಜನವರಿಯಿಂದ ಇಲ್ಲಿಯವರೆಗೆ ಉಡುಪಿ ಜಿಲ್ಲೆಯಲ್ಲಿ ಉಡುಪಿ, ಕಾರ್ಕಳ, ಮಲ್ಪೆ ಹಾಗೂ ಕುಂದಾಪುರ ಈ 4 ಅಗ್ನಿಶಾಮಕ ಠಾಣೆಗಳ ವ್ಯಾಪ್ತಿಯಲ್ಲಿ ಬಾವಿಗೆ ಬಿದ್ದು ಅವಘಡ ಸಂಭವಿಸಿದ 40 ಪ್ರಕರಣಗಳು ದಾಖಲಾಗಿವೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆ. ಕಳೆದ ವರ್ಷ ಜಿಲ್ಲೆಯಲ್ಲಿ ಈ ಸಮಯದಲ್ಲಿ 100ಕ್ಕೂ ಅಧಿಕ ಪ್ರಕರಣಗಳಿದ್ದರೆ, ಅದಕ್ಕಿಂತಲೂ ಹಿಂದಿನ ವರ್ಷ ಅಂದರೆ 2018 ರಲ್ಲಿ ಗರಿಷ್ಠ 200ಕ್ಕೂ ಮಿಕ್ಕಿ ಬಾವಿ ಅವಘಡ ಪ್ರಕರಣಗಳು ದಾಖಲಾಗಿದ್ದವು.

ಎಚ್ಚರ ವಹಿಸಿ
ಬಾವಿಗೆ ಇಳಿಯುವ ಮುನ್ನ ಜಾಗರೂಕತೆ ವಹಿಸುವುದು ಅತ್ಯಗತ್ಯ. ಆಳದ ಬಾವಿಗೆ ಇಳಿಯುವ ಮುನ್ನವಂತೂ ಎಚ್ಚರ ವಹಿಸಲೇಬೇಕು. ಈ ಬಾರಿ ಲಾಕ್‌ಡೌನ್‌ನಿಂದಾಗಿ ಸ್ವಲ್ಪ ಮಟ್ಟಿಗೆ ಬಾವಿ ಅವಘಡ ಪ್ರಕರಣ ಕಡಿಮೆಯಾಗಿದೆ. ಬಾವಿಯೊಳಗೆ ವಿಷಾನಿಲ ಇದ್ದು, ಏನಾದರೂ ಅವಘಡವಾದರೆ, ಅಲ್ಲಿರುವವರು ಬಾವಿಗಿಳಿಯದೆ ಕೂಡಲೇ 101 ನಂಬರ್‌ ಡಯಲ್‌ ಮಾಡಿ ಅಗ್ನಿಶಾಮಕ ದಳವರಿಗೆ ಮಾಹಿತಿ ಕೊಡಿ. ಅವರು ಸ್ಥಳಕ್ಕೆ ಬಂದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಾರೆ. ನಮ್ಮಲ್ಲಿ ಉಸಿರಾಟಕ್ಕೆ ಬಳಸುವ ಸಾಧನಗಳಿರುತ್ತವೆ. ಇದರಿಂದ ಮುಂದಾಗುವ ಅನಾಹುತಗಳನ್ನು ತಪ್ಪಿಸಬಹುದು.
-ವಸಂತ ಕುಮಾರ್‌,  ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.