Kundapura: ತೆಂಗಿಗೆ ಕಪ್ಪು ತಲೆ ಹುಳ ಬಾಧೆ

ವಿಜ್ಞಾನಿಗಳು, ತೋಟಗಾರಿಕಾ ಅಧಿಕಾರಿಗಳಿಂದ ಕನ್ನಡಕುದ್ರುವಿಗೆ ಮತ್ತೆ ಭೇಟಿ

Team Udayavani, Aug 23, 2024, 1:22 PM IST

Kundapura: ತೆಂಗಿಗೆ ಕಪ್ಪು ತಲೆ ಹುಳ ಬಾಧೆ

ಕುಂದಾಪುರ: ಹೆಮ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಮೂವತ್ತುಮುಡಿ, ಕನ್ನಡಕುದ್ರು ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ತೆಂಗಿನ ಮರಗಳು ಕೀಟ ಬಾಧೆಯಿಂದ ಸಂಪೂರ್ಣ ಹಾನಿಗೊಳಗಾದ ಪ್ರದೇಶಕ್ಕೆ ಮತ್ತೆ ಕೃಷಿ ವಿಜ್ಞಾನಿಗಳು ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.

ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ, ಕೀಟಶಾಸ್ತ್ರಜ್ಞ ಡಾ| ರೇವಣ್ಣ ರೇವಣ್ಣನವರ್‌ ಅವರು ಅಲ್ಲಿ ಕಪ್ಪು ತಲೆ ಹುಳ ಬಾಧೆಗೊಳಗಾಗಿರುವ ಮರಗಳನ್ನು ಪರಿಶೀಲಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಅವರು, ನಾವು 10 ಕ್ಕೂ ಹೆಚ್ಚು ಮರಗಳ ಗರಿಗಳನ್ನು ನೋಡಿದ್ದೇವೆ. ಯಾವುದರಲ್ಲೂ ಹುಳಗಳು ಪತ್ತೆಯಾಗಿಲ್ಲ. 4-5 ಹೊಸ ಗರಿಗಳು ಕೂಡ ಬಂದಿವೆ. ತೆಂಗಿನ ಮರಗಳು ಚೇತರಿಕೆ ಕಾಣುತ್ತಿವೆ. ಈ ಹಂತದಲ್ಲಿ ಮಳೆ ಕಡಿಮೆಯಾದಾಗ ಗೊಬ್ಬರ ಹಾಕಿದರೆ ಉತ್ತಮ ನಿರ್ವಹಣೆ ಮಾಡಿದರೆ ಒಳ್ಳೆಯ ಫಸಲು ಪಡೆಯಬಹುದು. ಇನ್ನು ಬಹುಶಃ ಆ ಕಪ್ಪು ತಲೆ ಹುಳಗಳು ಇಲ್ಲಿ ಅದಕ್ಕೆ ಬೇಕಾದ ಆಹಾರ ಸಿಗದಿರುವ ಕಾರಣ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆಯೂ ಇರುತ್ತದೆ ಎಂದವರು ತಿಳಿಸಿದರು.

ಪರೋಪಕಾರಿ ಜೀವಿ ಬಿಡುವ ಪ್ರಸ್ತಾವ
ಕನ್ನಡಕುದ್ರು – ಮೂವತ್ತುಮುಡಿ ಪರಿಸರದಲ್ಲಿ ಸುಮಾರು 5 ಸಾವಿರಕ್ಕೂ ಮಿಕ್ಕಿ ತೆಂಗಿನ ಮರಗಳಿಗೆ ಈ ಕಪ್ಪು ತಲೆ ಹುಳ ಬಾಧೆ ಆವರಿಸಿದ್ದು, ಅದನ್ನು ನಿಯಂತ್ರಿಸುವ ಸಲುವಾಗಿ ಪರೋಪಕಾರಿ ಜೀವಿ (ಗೋನಿಯೋಜಿಸ್‌ ನೇಫಾಂಟಿಡಿಸ್‌)ಗಳನ್ನು ಬಿಡಲು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಯೋಚಿಸಿದ್ದರು. ಈ ಬಗ್ಗೆ ಶಿವಮೊಗ್ಗದ ಜೈವಿಕ ಕೇಂದ್ರ ಎಲೆ ವಿಶ್ಲೇಷಣಾ ಪ್ರಯೋಗಾಲಯವನ್ನು ಸಹ ಸಂಪರ್ಕಿಸಿದ್ದರು. ಆದರೆ ಈಗ ಮರಗಳಲ್ಲಿ ಆ ಹುಳಗಳು ಕಂಡು ಬಾರದಿರುವ ಕಾರಣ ಸದ್ಯಕ್ಕೆ ಈ ಪ್ರಸ್ತಾವವನ್ನು ತಡೆಹಿಡಿಯಲಾಗಿದೆ. ಈ ಹುಳಗಳು ಲಾವ್ರಾ ಅಥವಾ ಪ್ಯೂಪಲ್‌ ಹಂತದಲ್ಲಿದ್ದರೆ ಪರೋಪಕಾರಿ ಜೀವಿಗಳನ್ನು ಬಿಟ್ಟು ನಿಯಂತ್ರಿಸಬಹುದು. ಆದರೆ ಈಗ ಕಷ್ಟ. ಸ್ವಲ್ಪ ದಿನಗಳ ಬಳಿಕ ಮತ್ತೆ ಪರಿಶೀಲಿಸಿ, ಆ ಬಳಿಕ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಡಾ| ರೇವಣ್ಣ ರೇವಣ್ಣನವರ್‌ ಹೇಳಿದರು.

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ನಿಧೀಶ್‌ ಕೆ.ಜೆ. ಉಪಸ್ಥಿತರಿದ್ದರು.

ಉದಯವಾಣಿ ವರದಿ
ಕನ್ನಡುಕುದ್ರು, ಮೂವತ್ತುಮುಡಿ ಪರಿಸರದಲ್ಲಿ ತೆಂಗಿನಮರಗಳಿಗೆ ಗರಿ ತಿನ್ನುವ ಕಪ್ಪು ತಲೆಯ ಹುಳದ ಬಾಧೆ ಇರುವ ಬಗ್ಗೆ, ಆ ಪರಿಸರದ ತೆಂಗಿನ ಮರಗಳು ಸಾಯುವ ಸ್ಥಿತಿಗೆ ತಲುಪಿರುವ ಕುರಿತಂತೆ “ಉದಯವಾಣಿ’ಯು ಮಾ. 25 ರಂದು ವರದಿ ಪ್ರಕಟಿಸಿ, ಗಮನಸೆಳೆದಿತ್ತು. ಆ ಬಳಿಕ ತೋಟಗಾರಿಕಾ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿಗಳು ನಿರಂತರವಾಗಿ ಭೇಟಿ ನೀಡಿ, ಪರಿಶೀಲಿಸಿ, ರೈತರಿಗೆ ಕೆಲವೊಂದು ಅಗತ್ಯ ನಿರ್ದೇಶನಗಳನ್ನು ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.