Kundapura: ತೆಂಗಿಗೆ ಕಪ್ಪು ತಲೆ ಹುಳ ಬಾಧೆ

ವಿಜ್ಞಾನಿಗಳು, ತೋಟಗಾರಿಕಾ ಅಧಿಕಾರಿಗಳಿಂದ ಕನ್ನಡಕುದ್ರುವಿಗೆ ಮತ್ತೆ ಭೇಟಿ

Team Udayavani, Aug 23, 2024, 1:22 PM IST

Kundapura: ತೆಂಗಿಗೆ ಕಪ್ಪು ತಲೆ ಹುಳ ಬಾಧೆ

ಕುಂದಾಪುರ: ಹೆಮ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಮೂವತ್ತುಮುಡಿ, ಕನ್ನಡಕುದ್ರು ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ತೆಂಗಿನ ಮರಗಳು ಕೀಟ ಬಾಧೆಯಿಂದ ಸಂಪೂರ್ಣ ಹಾನಿಗೊಳಗಾದ ಪ್ರದೇಶಕ್ಕೆ ಮತ್ತೆ ಕೃಷಿ ವಿಜ್ಞಾನಿಗಳು ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.

ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ, ಕೀಟಶಾಸ್ತ್ರಜ್ಞ ಡಾ| ರೇವಣ್ಣ ರೇವಣ್ಣನವರ್‌ ಅವರು ಅಲ್ಲಿ ಕಪ್ಪು ತಲೆ ಹುಳ ಬಾಧೆಗೊಳಗಾಗಿರುವ ಮರಗಳನ್ನು ಪರಿಶೀಲಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಅವರು, ನಾವು 10 ಕ್ಕೂ ಹೆಚ್ಚು ಮರಗಳ ಗರಿಗಳನ್ನು ನೋಡಿದ್ದೇವೆ. ಯಾವುದರಲ್ಲೂ ಹುಳಗಳು ಪತ್ತೆಯಾಗಿಲ್ಲ. 4-5 ಹೊಸ ಗರಿಗಳು ಕೂಡ ಬಂದಿವೆ. ತೆಂಗಿನ ಮರಗಳು ಚೇತರಿಕೆ ಕಾಣುತ್ತಿವೆ. ಈ ಹಂತದಲ್ಲಿ ಮಳೆ ಕಡಿಮೆಯಾದಾಗ ಗೊಬ್ಬರ ಹಾಕಿದರೆ ಉತ್ತಮ ನಿರ್ವಹಣೆ ಮಾಡಿದರೆ ಒಳ್ಳೆಯ ಫಸಲು ಪಡೆಯಬಹುದು. ಇನ್ನು ಬಹುಶಃ ಆ ಕಪ್ಪು ತಲೆ ಹುಳಗಳು ಇಲ್ಲಿ ಅದಕ್ಕೆ ಬೇಕಾದ ಆಹಾರ ಸಿಗದಿರುವ ಕಾರಣ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆಯೂ ಇರುತ್ತದೆ ಎಂದವರು ತಿಳಿಸಿದರು.

ಪರೋಪಕಾರಿ ಜೀವಿ ಬಿಡುವ ಪ್ರಸ್ತಾವ
ಕನ್ನಡಕುದ್ರು – ಮೂವತ್ತುಮುಡಿ ಪರಿಸರದಲ್ಲಿ ಸುಮಾರು 5 ಸಾವಿರಕ್ಕೂ ಮಿಕ್ಕಿ ತೆಂಗಿನ ಮರಗಳಿಗೆ ಈ ಕಪ್ಪು ತಲೆ ಹುಳ ಬಾಧೆ ಆವರಿಸಿದ್ದು, ಅದನ್ನು ನಿಯಂತ್ರಿಸುವ ಸಲುವಾಗಿ ಪರೋಪಕಾರಿ ಜೀವಿ (ಗೋನಿಯೋಜಿಸ್‌ ನೇಫಾಂಟಿಡಿಸ್‌)ಗಳನ್ನು ಬಿಡಲು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಯೋಚಿಸಿದ್ದರು. ಈ ಬಗ್ಗೆ ಶಿವಮೊಗ್ಗದ ಜೈವಿಕ ಕೇಂದ್ರ ಎಲೆ ವಿಶ್ಲೇಷಣಾ ಪ್ರಯೋಗಾಲಯವನ್ನು ಸಹ ಸಂಪರ್ಕಿಸಿದ್ದರು. ಆದರೆ ಈಗ ಮರಗಳಲ್ಲಿ ಆ ಹುಳಗಳು ಕಂಡು ಬಾರದಿರುವ ಕಾರಣ ಸದ್ಯಕ್ಕೆ ಈ ಪ್ರಸ್ತಾವವನ್ನು ತಡೆಹಿಡಿಯಲಾಗಿದೆ. ಈ ಹುಳಗಳು ಲಾವ್ರಾ ಅಥವಾ ಪ್ಯೂಪಲ್‌ ಹಂತದಲ್ಲಿದ್ದರೆ ಪರೋಪಕಾರಿ ಜೀವಿಗಳನ್ನು ಬಿಟ್ಟು ನಿಯಂತ್ರಿಸಬಹುದು. ಆದರೆ ಈಗ ಕಷ್ಟ. ಸ್ವಲ್ಪ ದಿನಗಳ ಬಳಿಕ ಮತ್ತೆ ಪರಿಶೀಲಿಸಿ, ಆ ಬಳಿಕ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಡಾ| ರೇವಣ್ಣ ರೇವಣ್ಣನವರ್‌ ಹೇಳಿದರು.

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ನಿಧೀಶ್‌ ಕೆ.ಜೆ. ಉಪಸ್ಥಿತರಿದ್ದರು.

ಉದಯವಾಣಿ ವರದಿ
ಕನ್ನಡುಕುದ್ರು, ಮೂವತ್ತುಮುಡಿ ಪರಿಸರದಲ್ಲಿ ತೆಂಗಿನಮರಗಳಿಗೆ ಗರಿ ತಿನ್ನುವ ಕಪ್ಪು ತಲೆಯ ಹುಳದ ಬಾಧೆ ಇರುವ ಬಗ್ಗೆ, ಆ ಪರಿಸರದ ತೆಂಗಿನ ಮರಗಳು ಸಾಯುವ ಸ್ಥಿತಿಗೆ ತಲುಪಿರುವ ಕುರಿತಂತೆ “ಉದಯವಾಣಿ’ಯು ಮಾ. 25 ರಂದು ವರದಿ ಪ್ರಕಟಿಸಿ, ಗಮನಸೆಳೆದಿತ್ತು. ಆ ಬಳಿಕ ತೋಟಗಾರಿಕಾ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿಗಳು ನಿರಂತರವಾಗಿ ಭೇಟಿ ನೀಡಿ, ಪರಿಶೀಲಿಸಿ, ರೈತರಿಗೆ ಕೆಲವೊಂದು ಅಗತ್ಯ ನಿರ್ದೇಶನಗಳನ್ನು ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

Udupi: ನಿಯಮ ಮೀರಿ ಕಾರ್ಯಾಚರಣೆ: ಪರವಾನಿಗೆ ರದ್ದತಿಗೆ ಸೂಚನೆ

Udupi: ನಿಯಮ ಮೀರಿ ಕಾರ್ಯಾಚರಣೆ: ಪರವಾನಿಗೆ ರದ್ದತಿಗೆ ಸೂಚನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.