ಅಂಗವಿಕಲರಿಗಾಗಿ ವಿಶೇಷ ಮತಗಟ್ಟೆಯಾಗಿ ಬದಲಾದ ಕೋಡಿ ಗ್ರಾ.ಪಂ.ಕಚೇರಿ


Team Udayavani, Apr 18, 2019, 6:30 AM IST

angavikala

ಕೋಟ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಭಾಗವಹಿಸುವಂತೆ ಮಾಡಬೇಕು ಎನ್ನುವ ಸಲುವಾಗಿ ಉಡುಪಿ ಜಿಲ್ಲಾಡಳಿತ ಎಲ್ಲ ರೀತಿಯ ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಕೋಟ ಹೋಬಳಿಯ ಕೋಡಿಕನ್ಯಾಣ ಹಾಗೂ ಉಡುಪಿಯ ಹನುಮಂತ ನಗರದಲ್ಲಿ ವಿಶೇಷ ಮಾದರಿ ಮತಗಟ್ಟೆಗಳನ್ನು ರೂಪಿಸಿದ್ದು, ವಿಕಲಚೇತನರು ಮನೆಯಿಂದ ಹೊರಟು ಮತದಾನ ಮಾಡಿ ಮತ್ತೆ ಮನೆ ತಲುಪುವ ತನಕ ಬೇಕಿರುವ ಎಲ್ಲಾ ಸೌಲಭ್ಯಗಳನ್ನು ಇಲ್ಲಿ ಒದಗಿಸಲಾಗಿದೆ.

ಮತಗಟ್ಟೆಯ ವಿಶೇಷ ಸೌಲಭ್ಯಗಳು
ಕೋಡಿಯಲ್ಲಿ ಗ್ರಾ.ಪಂ. ಕಚೇರಿಯಲ್ಲಿನ ಎಲ್ಲಾ ಪಿಠೊಪಕರಣ ಹಾಗೂ ಕಚೇರಿಯ ಸಾಮಾಗ್ರಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಿ, ಕಟ್ಟಡವನ್ನು ಸ್ವಲ್ಪಮಟ್ಟಿಗೆ ನವೀಕರಿಸಿ ವಿಕಲಚೇತನರ ಮತಗಟ್ಟೆಯಾಗಿ ಪರಿವರ್ತಿಸಲಾಗಿದೆ. ವಿಕಲಚೇತನರು ಮತಗಟ್ಟೆ ಪ್ರವೇಶಿಸಲು ಅನುಕೂಲವಾಗುವಂತೆ ಮೆಟ್ಟಿಲುಗಳನ್ನು ವಿನ್ಯಾಸಗೊಳಿಸಲಾಗಿದೆ ಹಾಗೂ ಬಾಗಿಲ ತನಕ ಕಬ್ಬಿಣದ ಹಿಡಿಗಳನ್ನು ಅಳವಡಿಸಲಾಗಿದೆ. ಮತ ಕೇಂದ್ರ ಪಿಂಕ್‌ ಬಣ್ಣದಿಂದ ಶೃಂಗರಿಸಲಾಗಿದೆ. ಪ್ರವೇಶದ್ವಾರದಲ್ಲಿ ಸ್ವಾಗತ್‌ ಕಮಾನ್‌ಗಳನ್ನು ಅಳವಡಿಸಲಾಗಿದೆ. ಸೂಕ್ತ ವಿದ್ಯುತ್‌ ವ್ಯವಸ್ಥೆ, ಫ್ಯಾನ್‌ ವ್ಯವಸ್ಥೆ, ವಿಕಲಚೇತನ ಸ್ನೇಹಿ ಹೊಸ ಶೌಚಾಲಯ ಹಾಗೂ ನೀರಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವೀಲ್‌ ಚೇರ್‌,ಸ್ಟಿಕ್‌ ಮುಂತಾದ ಸಾಧನ ಹಾಗೂ ಮತಗಟ್ಟೆಯ ಹೊರಗೆ ನೆರಳಿಗೆ ಶ್ಯಾಮಿಯಾನ ವ್ಯವಸ್ಥೆ, ತುರ್ತು ಚಿಕಿತ್ಸೆಗಾಗಿ ಆರೋಗ್ಯ ಸಹಾಯಕಿಯರು, ಸ್ವಯಂ ಸೇವಕರ ನಿಯೋಜನೆ, ಸನ್ನೆ ಹಾಗೂ ಸಂಜ್ಞಾ ಭಾಷೆಯಲ್ಲಿ ಮಾತನಾಡಿಸಲು ವ್ಯವಸ್ಥೆ, ಮತಗಟ್ಟೆಗೆ ಬರಲು ಮತ್ತು ವಾಪಸ್‌ ಹೋಗಲು ಸೂಕ್ತ ವಾಹನ ವ್ಯವಸ್ಥೆ, ವಾಹನ ನಿಲ್ಲಿಸಲು ಪಾರ್ಕಿಂಗ್‌ ವ್ಯವಸ್ಥೆ, ಸಹಾಯ ಕೇಂದ್ರ ಸ್ಥಾಪನೆ ಮುಂತಾದ ವ್ಯವಸ್ಥೆ ಮಾಡಲಾಗಿದೆ. ಈ ಮತಗಟ್ಟೆಗಳು ವಿಕಲಚೇತನ ಸಿಬಂದಿಗಳಿಂದ ನಿರ್ವಹಿಸುವ ಮತಗಟ್ಟೆಗಳಾಗಿದೆ.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮತ್ತು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾ ಕಾರಿ ಸಿಂಧೂ ಬಿ ರೂಪೇಶ್‌ ಅವರು ವಿಶೇಷ ಮುತುವರ್ಜಿವಹಿಸಿ ಈ ಮತಗಟ್ಟೆಗಳನ್ನು ಸ್ಥಾಪಿಸಿದ್ದಾರೆ.

ಹೆಚ್ಚು ಮತದಾನಕ್ಕೆ ಪ್ರೇರೇಪಿಸಲು…
ಕೋಡಿ ಮತಕೇಂದ್ರದಲ್ಲಿ ಒಟ್ಟು ಮೂರು ಬೂತ್‌ಗಳಿದ್ದು ಇಲ್ಲಿ ಅತೀ ಹೆಚ್ಚಿನ ಸಂಖ್ಯೆಯ 45 ವಿಕಲಚೇತನ ಮತದಾರರಿದ್ದಾರೆ. ಇದುವರೆಗಿನ ಚುನಾವಣೆಗಳಲ್ಲಿ ಇಲ್ಲಿ ಶೇ. 30ರಿಂದ-35ರ ತನಕ ಮಾತ್ರ ವಿಕಲಚೇತನರ ಮತಗಳು ಚಲಾವಣೆಯಾಗುತ್ತಿದ್ದವು. ಹೀಗಾಗಿ ಈ ಬಾರಿ ಶೇ.100ರಷ್ಟು ವಿಕಲಚೇತನರ ಮತಚಲಾವಣೆಯ ಗುರಿ ಇರಿಸಿ ವಿಶೇಷ ಮತಗಟ್ಟೆ ಸ್ಥಾಪಿಸಲಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.