Crocodile Operation; ನಾಗೂರು: ಬಾವಿಯಲ್ಲಿದ್ದ ಮೊಸಳೆ ಸೆರೆ

ಬಾವಿಯ ಸುತ್ತಲೂ ಸಿಸಿ ಕೆಮರಾ ಅಳವಡಿಸಿ ರಾತ್ರಿಯಿಡಿ ಮೊಸಳೆ ಓಡಾಟದ ಮೇಲೆ ನಿಗಾ

Team Udayavani, Aug 1, 2024, 6:45 AM IST

Uppunda

ಉಪ್ಪುಂದ: ಕಿರಿಮಂಜೇಶ್ವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ನಾಗೂರಿನ ಬಾವಿಯೊಂದರಲ್ಲಿ ಮಂಗಳವಾರ ಕಂಡುಬಂದ ಮೊಸಳೆಯನ್ನು ಸತತ ಕಾಯಾಚರಣೆ ಮೂಲಕ ಬುಧವಾರ ಮಧ್ಯಾಹ್ನ ಸೆರೆಹಿಡಿಯಲಾಯಿತು.

ನಾಗೂರು ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ಮೊಸಳೆ ಕಂಡುಬಂದಿತ್ತು. ಮೊಸಳೆಯನ್ನು ಸೆರೆಹಿಡಿಯಲು ಬೈಂದೂರು ಅರಣ್ಯ ಇಲಾಖೆ, ಪೋಲಿಸ್‌ ಇಲಾಖೆ, ಅಗ್ನಿಶಾಮಕದಳ ಕಂದಾಯ ಇಲಾಖೆಯ ಸಹಾಯದೊಂದಿಗೆ ನಾಗೂರು, ಕೊಡೇರಿ, ಕಿರಿಮಂಜೇಶ್ವರ ಹೊಸಹಿತ್ಲು ಭಾಗದ ಮೀನುಗಾರರು ಕಾರ್ಯಾಚರಣೆ ನಡೆಸಿದರು.

ರಾತ್ರಿಯಿಡಿ ನಿಗಾ:
ಮಂಗಳವಾರ ಸಂಜೆ ಮೊಸಳೆ ಬಾವಿಯಿಂದ ಹೊರ ಬರಲು ಬಾವಿಯ ದಂಡೆಯನ್ನು ನೆಲ ಸಮಾನಕ್ಕೆ ಒಡೆದು ಬೊನಿಗೆ ಕೋಳಿಯ ಮಾಂಸವನ್ನು ಹಾಕಿ ಇಡಲಾಗಿತ್ತು. ಬಾವಿಯ ಸುತ್ತಲೂ ಸಿಸಿ ಕೆಮರಾ ಅಳವಡಿಸಿ ಕಂಪ್ಯೂಟರ್‌ ಮೂಲಕ ರಾತ್ರಿಯಿಡಿ ಮೊಸಳೆಯ ಓಡಾಟವನ್ನು ಗಮನಿಸಲಾಯಿತು. ಅರಣ್ಯ ಇಲಾಖೆಯವರು ಇಟ್ಟಿರುವ ಮಾಂಸದ ಕಡೆಗೆ ತಿರುಗಿಯೂ ನೋಡದ ಮೊಸಳೆ ರಾತ್ರಿಯಿಡೀ ಬಾವಿಯಲ್ಲಿ ಸುತ್ತುತ್ತಿತ್ತು.

ಬುಧವಾರ ಮಧ್ಯಾಹ್ನ ಹೊತ್ತಿಗೆ ಬೋನಿಗೆ ಬರುವ ಸಾಧ್ಯತೆ ಇಲ್ಲದಿರುವುದನ್ನು ಅರಿತ ಮೀನುಗಾರರು ಬೀಡಿನ ಬಲೆ ಹಾಕಿ ಹಿಡಿಯುವ ಪ್ರಯತ್ನಕ್ಕೆ ಕೈಹಾಕಿದರು. ಸುಮಾರು ಒಂದು ಗಂಟೆಗಳ ಪ್ರಯತ್ನದಿಂದ ಮೊಸಳೆಯ ಸುತ್ತ ಬಲೆಯನ್ನು ಎಳೆದು ಸುತ್ತಿ ಹಗ್ಗದಿಂದ ಕಟ್ಟಲು ಯಶಸ್ವಿಯಾದರು. ಬಾಯಿ ಹಾಗೂ ಕಾಲಿಗೆ ಗಮ್‌ಟೇಪ್‌ ಅಂಟಿಸಿ ಮೊಸಳೆಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಮೇಲಕ್ಕೆ ಎತ್ತಿದರು. ಮೊಸಳೆಗೆ 25-30 ವರ್ಷ ಪ್ರಾಯ ಅಂದಾಜಿಸಲಾಗಿದ್ದು, ಎಲ್ಲಿಗೆ ಬೀಡಲಾಗುತ್ತದೆ ಎನ್ನುವ ಮಾಹಿತಿ ನೀಡಲಿಲ್ಲ.

ಎಲ್ಲಿಂದ ಬಂದಿರಬಹುದು?: ಹಲವು ವರ್ಷಗಳ ಹಿಂದೆ ಮರವಂತೆ ಸೌರ್ಪಣಿಕಾ ನದಿ, ಬಿಜೂರು ಸುಮನಾವತಿ ನದಿಯಲ್ಲಿ ಮೊಸಳೆ ಗುಂಡಿ ಇರುವುದಾಗಿ ಹಿರಿಯರು ನೆನಪು ಮಾಡಿಕೊಳ್ಳುತ್ತಾರೆ. ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಿಂದಾಗಿ ಹೊಳೆಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ಕಂಬದಕೋಣೆ ಎಡಮಾವಿನ ಹೊಳೆ ಮೂಲಕ ಬಂದಿದೆ ಎನ್ನಲಾಗುತ್ತಿದೆ.

3ದಿನದ ಹಿಂದೆ ಹೆಜ್ಜೆ ಪತ್ತೆ:
ಎಡೆಮಾವಿನ ನದಿ ತೀರದ ಗದ್ದೆಯಲ್ಲಿ 3 ದಿನ ಹಿಂದೆ ಯಾವುದೋ ಪ್ರಾಣಿ ತಿರುಗಾಡಿ ಭತ್ತದ ಪೈರು ಹಾಳಾಗಿತ್ತು. ಗದ್ದೆಯಲ್ಲಿ ಕಳೆ ತೆಗೆಯುವ ಮಹಿಳೆಯರು ಕಡಲಾಮೆಯಿಂದ ಹಾಳಾಗಿದೆ ಎಂದು ಭಾವಿಸಿದ್ದರು. ಆದರೆ ಹೆಜ್ಜೆಗಳನ್ನು ಗಮನಿಸಿದಾಗ ಮೊಸಳೆ ತಿರುಗಾಡಿರುವುದು ಖಚಿತವಾಗಿತ್ತು.

ಮಣಿಪಾಲ: ಮುಂದುವರಿದ ಚಿರತೆ ಹುಡುಕಾಟ

ಮಣಿಪಾಲ: ಮಣಿಪಾಲ ಪರಿಸರದಲ್ಲಿ ಆತಂಕ ಮೂಡಿಸಿದ್ದ ಚಿರತೆ ಹುಡುಕಾಟ ಮುಂದುವರಿದಿದ್ದು, ಮಂಗಳವಾರ ತಡರಾತ್ರಿ ಮತ್ತು ಬುಧವಾರ ಚಿರತೆ ಕುರುಹು ಪತ್ತೆಯಾಗಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಮಣಿಪಾಲ ಪ್ರದೇಶದಲ್ಲಿ ರಾತ್ರಿ ಗಸ್ತು ಆರಂಭಿಸಿದ್ದಾರೆ. ಚಿರತೆ ಓಡಾಡಿದೆ ಎನ್ನಲಾದ ಅನಂತನಗರ, ಮಣ್ಣಪಳ್ಳ ಪರಿಸರದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಈ ಭಾಗದಲ್ಲಿ ಚಿರತೆ ಓಡಾಟದ ಸುಳಿವು ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ಪೆರಂಪಳ್ಳಿ, ಎಂಡ್‌ಪಾಯಿಂಟ್‌ನಲ್ಲಿ ಚಿರತೆ ಓಡಾಡಿರುವ ಕುರುಹು ಪತ್ತೆಯಾದ ಹಿನ್ನೆಲೆಯಲ್ಲಿ ಸದ್ಯಕ್ಕೆ ಇಲ್ಲಿ ಬೋನು ಇರಿಸಲಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಚಿರತೆ ಕಾಣಿಸಿಕೊಂಡ ಬಗ್ಗೆ ಬುಧವಾರ ಸಾರ್ವಜನಿಕರಿಂದಲೂ ಯಾವುದೇ ದೂರವಾಣಿ ಕರೆಗಳು ಬಂದಿಲ್ಲ. ಅರಣ್ಯ ಇಲಾಖೆ ಸಿಬಂದಿ ಗಸ್ತು ತಂಡವು ರಾತ್ರಿ ಸೂಕ್ಷ್ಮ ಪ್ರದೇಶದಲ್ಲಿ ನಿಗಾ ವಹಿಸುತ್ತಿದ್ದು, ಮಣಿಪಾಲ ಆರ್‌ಡಿಎಫ್ ಅವರ ನೇತೃತ್ವ ತಂಡ ಈ ಬಗ್ಗೆ ಕಟ್ಟೆಚ್ಚರ ವಹಿಸಿದೆ. ಸ್ಥಳೀಯರಿಗೆ ಚಿರತೆ ಕಾಣಿಸಿಕೊಂಡಲ್ಲಿ ಕೂಡಲೆ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಉಡುಪಿ ಆರ್‌ಎಫ್ಒ ವಾರಿಜಾಕ್ಷಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.