![1-maya](https://www.udayavani.com/wp-content/uploads/2024/07/1-maya-415x233.jpg)
Toll Plazas ಸ್ಥಳೀಯರಿಗೆ ಟೋಲ್ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಂಟಿ ಸಭೆ
Team Udayavani, Jul 5, 2024, 12:02 AM IST
![Toll Plazas ಸ್ಥಳೀಯರಿಗೆ ಟೋಲ್ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ](https://www.udayavani.com/wp-content/uploads/2024/07/Udupi-DC-Dr.-vidya-kumari-620x437.jpg)
ಕೋಟ: ಜಿಲ್ಲೆಯ ಎಲ್ಲ ಟೋಲ್ ಪ್ಲಾಜಾಗಳಲ್ಲಿ ಸ್ಥಳೀಯರಿಗೆ ನೀಡಲಾಗುತ್ತಿರುವ ಶುಲ್ಕ ವಿನಾಯಿತಿಯನ್ನು ಹಿಂದಿನಂತೆ ಮುಂದು ವರಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಅವರು ಗುರುವಾರ ಡಿ.ಸಿ.ಕಚೇರಿಯಲ್ಲಿ ಜರಗಿದ ರಾಷ್ಟ್ರೀಯ ಹೆದ್ದಾರಿ ಯೋಜನಾಧಿ ಕಾರಿಗಳು, ಟೋಲ್ ನಿರ್ವಹಣೆ ಉಸ್ತುವಾರಿ ಕಂಪೆನಿ ಪ್ರಮುಖರು ಹಾಗೂ ಸ್ಥಳೀಯ ಹೋರಾಟಗಾರರ ಜಂಟಿ ಸಭೆಯಲ್ಲಿ ಸೂಚನೆ ನೀಡಿದರು.
ಟೋಲ್ ನಿರ್ವಹಣೆಯ ಹೊಣೆ ಯನ್ನು ನವಯುಗದಿಂದ ಹೈವೇ ಕನ್ಸ್ಸ್ಟ್ರಕನ್ ಕಂಪೆನಿ ವಹಿಸಿಕೊಂಡಾಗ ಸಾಸ್ತಾನ ಸಹಿತ ಜಿಲ್ಲೆಯ ಟೋಲ್ ಪ್ಲಾಜಾಗಳಲ್ಲಿ ಸ್ಥಳೀಯರಿಂದಲೂ ಟೋಲ್ ಸಂಗ್ರಹಕ್ಕೆ ಮುಂದಾಗಿತ್ತು. ಈ ಬಗ್ಗೆ ವಿರೋಧ ವ್ಯಕ್ತವಾಗಿ ಸಾಸ್ತಾನದಲ್ಲಿ ಪ್ರತಿಭಟನೆಯೂ ನಡೆದಿತ್ತು. ಆಗ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಈ ಬಗ್ಗೆ ಸಭೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡುವ ಭರವಸೆ ನೀಡಿದ್ದರು. ಅದರಂತೆ ಗುರುವಾರ ಎಲ್ಲ ಪ್ರಮುಖರೊಂದಿಗೆ ಸೇರಿ ಜಂಟಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಹೋರಾಟ ಸಮಿತಿಯ ಪ್ರಮುಖರು ತಮ್ಮ ವ್ಯಾಪ್ತಿಯ ಸರ್ವಿಸ್ ರಸ್ತೆ, ಚರಂಡಿ, ಬೀದಿ ದೀಪ ಇತ್ಯಾದಿ ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದಾರೆ. ಆಗ ಹೆದ್ದಾರಿ ಇಲಾಖೆ ಯೋಜನಾಧಿಕಾರಿಗಳು, ಸ್ಥಳೀಯರಿಗೆ ಶುಲ್ಕ ರಿಯಾಯತಿ ಪಾಸ್ ನೀಡುವುದು ಮತ್ತು ವಾಣಿಜ್ಯ ವಾಹನಗಳು ಕಡ್ಡಾಯವಾಗಿ ಟೋಲ್ ಪಾವತಿಸಬೇಕು ಎಂದು ಬೇಡಿಕೆಯನ್ನು ಮುಂದಿರಿಸಿದರು. ಆದರೆ ಹೋರಾಟಗಾರರು ಈ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ.
ಎಲ್ಲ ಟೋಲ್ಗಳಲ್ಲೂ ಈ ಹಿಂದಿನಂತೆ ವಿನಾಯಿತಿ ಮುಂದುವರಿಸಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಜತೆಗೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಪತ್ರಿಕೆಗೆ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕುಮಾರ್, ಅಪರ ಜಿಲ್ಲಾಧಿಕಾರಿ ಮಮತಾದೇವಿ, ರಾಷ್ಟ್ರೀಯ ಹೆದ್ದಾರಿ ಯೋಜನಾಧಿಕಾರಿ ಮಹಮ್ಮದ್ ಜಾವಿದ್, ಸಾಸ್ತಾನ ಹೆದ್ದಾರಿ ಜಾಗೃತಿ ಸಮಿತಿಯ ಪ್ರಮುಖರಾದ ಶ್ಯಾಮ್ ಸುಂದರ್ ನಾೖರಿ, ಪ್ರತಾಪ್ ಶೆಟ್ಟಿ, ಅಲ್ವಿನ್ ಅಂದ್ರಾದೆ, ನಾಗರಾಜ್ ಗಾಣಿಗ, ಅಚ್ಯುತ ಪೂಜಾರಿ, ಸಂದೀಪ್ ಕೋಡಿ, ಮಹಾಬಲ ಪೂಜಾರಿ ವಡ್ಡರ್ಸೆ, ಪೊಲೀಸ್ ಇಲಾಖೆಯ ಪ್ರಮುಖರು ಹಾಗೂ ಜಿಲ್ಲೆಯ ವಿವಿಧ ಟೋಲ್ಗಳ ಹೋರಾಟ ಸಮಿತಿ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![1-maya](https://www.udayavani.com/wp-content/uploads/2024/07/1-maya-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.