ಉಪ್ಪುನೀರಿನಿಂದ ಬೆಳೆ ನಾಶ, ಹಕ್ಕುಪತ್ರ ಸಮಸ್ಯೆ

ಇವೆರಡು ಕೋಡಿಕನ್ಯಾಣದ ಖಾಯಂ ಸಮಸ್ಯೆಗಳು

Team Udayavani, Aug 29, 2021, 6:44 AM IST

ಉಪ್ಪುನೀರಿನಿಂದ ಬೆಳೆ ನಾಶ, ಹಕ್ಕುಪತ್ರ ಸಮಸ್ಯೆ

ಕೋಡಿ ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟಿರುವ ಕೋಡಿಕನ್ಯಾಣ 442.15 ಹೆಕ್ಟೆರ್‌ ಭೂಪ್ರದೇಶವನ್ನು ಒಳಗೊಂಡಿದೆ. ಕೋಡಿಬೆಂಗ್ರೆ ಹೊರತುಪಡಿಸಿ ಇಲ್ಲಿನ ಮೂರು ವಾರ್ಡ್‌ಗಳಲ್ಲಿ ಸುಮಾರು 2,500 ಜನಸಂಖ್ಯೆ ಇದೆ. ಇಲ್ಲಿನ ನಿವಾಸಿಗಳು ಹತ್ತಾರು ದಶಕಗಳಿಂದ ಹಕ್ಕುಪತ್ರದ ಸಮಸ್ಯೆ, ಕೃಷಿಭೂಮಿಗೆ ಉಪ್ಪುನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ಪರಿಹಾರದ ಅಗತ್ಯವಿದೆ.

ಕೋಟ: ಕೋಡಿ ಗ್ರಾ.ಪಂ. ವ್ಯಾಪ್ತಿಯ ಕೋಡಿ ಕನ್ಯಾಣದಲ್ಲಿ ವಾಸಿಸುವ ಸುಮಾರು 471 ಕುಟುಂಬಗಳು 4 ದಶಕಗಳಿಂದ ಹಕ್ಕು ಪತ್ರಕ್ಕಾಗಿ ಹೋರಾಟ ನಡೆಸುತ್ತಿದೆ. ಆದರೆ ಸಿ.ಆರ್‌.ಝಡ್‌. ಮುಂತಾದ ಸಮಸ್ಯೆಗಳಿಂದಾಗಿ ಇವರಿಗೆ ಹಕ್ಕು ಪತ್ರ ಸಿಗುತ್ತಿಲ್ಲ ಮತ್ತು ಸರಕಾರದ ವಸತಿ ಯೋಜನೆ, ವಿದ್ಯುತ್‌, ಶೌಚಾ ಲಯ, ಸಾಲ ಸೌಲಭ್ಯಗಳು ಕಾನೂನಾತ್ಮಕವಾಗಿ ದೊರೆಯುತ್ತಿಲ್ಲ.

ಹೊಸ ಸರ್ವೇ ನಂಬರ್‌ ನೀಡಬೇಕಿದೆ
ಇಲ್ಲಿನ ಹಲವು ಕುಟುಂಬಗಳು ವಾಸಿಸುತ್ತಿರುವ ಜಾಗಕ್ಕೆ ಸರ್ವೇ ನಂಬರ್‌ ಇಲ್ಲ ಮತ್ತು ಪೊರಂಬೋಕು, ಸಮುದ್ರ ಎಂದು ನಕ್ಷೆಯಲ್ಲಿ ಉಲ್ಲೇಖಗೊಂಡಿದೆ. ಹೀಗಾಗಿ ಹಕ್ಕುಪತ್ರ ನೀಡಬೇಕಾದರೆ ಈ ಪ್ರದೇಶವನ್ನು ಆ ಶೀರ್ಷಿಕೆಯಿಂದ ವಿರಹಿತಗೊಳಿಸಿ ಹೊಸ ಸರ್ವೇ ನಂಬರ್‌ ನೀಡಬೇಕಿದೆ. ಈಗಾಗಲೇ ತಹಶೀಲ್ದಾರ್‌ ನೇತೃತ್ವದಲ್ಲಿ ನೇಮಕಗೊಂಡ ಸಮಿತಿ ಜಿಲ್ಲಾಧಿಕಾರಿಯ ಮಾರ್ಗದರ್ಶನ ಮೇರೆಗೆ ಎಲ್ಲ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿ ವರದಿ ಸಿದ್ಧಪಡಿಸಿದ್ದು ಪೊರಂಬೋಕು ವಿರಹಿತ ಗೊಳಿಸಲು, ಹೊಸ ಸರ್ವೇ ನಂಬರ್‌ ಸೃಷ್ಟಿಸುವ ಪ್ರಸ್ತಾವನೆ ಸಿದ್ಧಪಡಿಸಿ ಸರಕಾರಕ್ಕೆ ಕಳುಹಿಸಿದೆ ಎನ್ನಲಾಗಿದೆ. ಜನಪ್ರತಿನಿಧಿಗಳು ಈ ಕುರಿತು ಮತ್ತಷ್ಟು ಕಾಳಜಿ ವಹಿಸಿ ಸಂತ್ರಸ್ತ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ಕೈ ಸೇರುವಂತೆ ಮಾಡಬೇಕಿದೆ.

ಕೃಷಿಭೂಮಿಗೆ ಉಪ್ಪು ನೀರು ಲಗ್ಗೆ
ಮೀನುಗಾರಿಕೆ ಹೊರತುಪಡಿಸಿದರೆ ಕೋಡಿಕನ್ಯಾಣದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆ ಯಲ್ಲಿ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಭತ್ತ, ಶೇಂಗ, ವಿವಿಧ ತರಕಾರಿಗಳನ್ನು ಈ ಭಾಗದಲ್ಲಿ ಬೆಳೆಯಲಾಗುತ್ತದೆ. ಆದರೆ ಇಲ್ಲಿನ ನೂರಾರು ಎಕ್ರೆ ಕೃಷಿಭೂಮಿಗೆ ಪ್ರತೀ ವರ್ಷ ದೊಡ್ಡ ಹೊಳೆಯ ಉಪ್ಪು ನೀರು ಹರಿದು ಬಂದು ಬೆಳೆ ನಾಶವಾಗುತ್ತಿದೆ ಮತ್ತು ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಹೊಳೆಗೆ ಉಪ್ಪು ನೀರಿನ ತಡೆಗೋಡೆ ನಿರ್ಮಿಸುವುದರ ಮೂಲಕ ಬೆಳೆ ನಾಶವಾಗುವುದನ್ನು ತಡೆಯಬೇಕು ಎಂದು ಇಲ್ಲಿನ ರೈತರು ಸಾಕಷ್ಟು ಬಾರಿ ಆಡಳಿತ ವ್ಯವಸ್ಥೆಗೆ ಮನವಿ ಸಲ್ಲಿಸಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಪೂರಕ ಕ್ರಮ ಇದುವರೆಗೆ ಕೈಗೊಂಡಿಲ್ಲ. ಹಕ್ಕುಪತ್ರ, ಉಪ್ಪು ನೀರಿನ ಸಮಸ್ಯೆಗೆ ಪರಿಹಾರ ದೊರೆತಲ್ಲಿ ಇಲ್ಲಿನ ನಿವಾಸಿಗಳು ಒಂದಷ್ಟು ನೆಮ್ಮದಿಯಿಂದ ಬದುಕಬಹುದಾಗಿದೆ.

ಇತರ ಸಮಸ್ಯೆಗಳೇನು?
– ಮೀನುಗಾರಿಕೆ ಜಟ್ಟಿಯಲ್ಲಿ ಹೂಳು ತುಂಬಿರುವುದರಿಂದ ಮೀನುಗಾರಿಕೆಗೆ ತೆರಳಲು ಸಾಧ್ಯವಾಗುತ್ತಿಲ್ಲ.
– ಸಮುದ್ರ ತೀರದ ಪ್ರದೇಶಗಳಾಗಿ ರುವುದರಿಂದ ಕುಡಿಯುವ ನೀರಿನ ಸಮಸ್ಯೆ ಇದೆ.
– ಕಡಲ್ಕೊರೆತದ ಸಮಸ್ಯೆ ಸಾಕಷ್ಟಿದೆ.
– ಆರೋಗ್ಯ ಸಹಾಯಕರಿಲ್ಲದೆ ಆರೋಗ್ಯ ಉಪಕೇಂದ್ರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ.

ಪರಿಹಾರಕ್ಕೆ ಯತ್ನ
ಹಕ್ಕುಪತ್ರ ಸಮಸ್ಯೆ ಪರಿಹಾರಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳ ವಿಶೇಷ ಸಭೆ ನಡೆಸಲಾಗಿದ್ದು ಅಗತ್ಯ ದಾಖಲೆಗಳನ್ನು ಸರಕಾರಕ್ಕೆ ಕಳುಹಿಸಲಾಗಿದೆ. ಆದಷ್ಟು ಶೀಘ್ರ ಸಮಸ್ಯೆ ಪರಿಹಾರವಾಗುವ ನಿರೀಕ್ಷೆ ಇದೆ.
-ರಾಜಶೇಖರ್‌ಮೂರ್ತಿ, ತಹಶೀಲ್ದಾರರು ಬ್ರಹ್ಮಾವರ

ಗಮನ ಹರಿಸಲಾಗಿದೆ
ಹಕ್ಕುಪತ್ರ ಸಮಸ್ಯೆ ಪರಿಹಾರ ಕೊನೆಯ ಹಂತದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೃಷಿಭೂಮಿಗೆ ಉಪ್ಪುನೀರಿನ ಸಮಸ್ಯೆಯನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳುವ ಪ್ರಯತ್ನ ಚಾಲ್ತಿಯಲ್ಲಿದೆ.
-ಪ್ರಭಾಕರ ಮೆಂಡನ್‌, ಅಧ್ಯಕ್ಷರು, ಕೋಡಿ ಗ್ರಾ.ಪಂ.

ಹಲವು ಬಾರಿ ಮನವಿ
ಉಪ್ಪು ನೀರಿನ ಸಮಸ್ಯೆಯಿಂದ ಪ್ರತಿವರ್ಷ ನಮ್ಮೂರಿನ ಹಲವು ಎಕ್ರೆ ಬೆಳೆ ನಾಶವಾಗುತ್ತಿದೆ ಹಾಗೂ ಮಣ್ಣಿನ ಫಲವತ್ತತೆ ಕಡಿಮೆಯಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪರಿಹಾರ ಸಿಕ್ಕಿಲ್ಲ. ಆಡಳಿತ ವ್ಯವಸ್ಥೆ ಈ ಬಗ್ಗೆ ಗಮನಹರಿಸಬೇಕಿದೆ.
-ನಾಗೇಂದ್ರ ನಾವಡ, ಸ್ಥಳೀಯ ರೈತರು

-ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

13

ಪುರಾಣ ಪ್ರಸಂಗ ಕಾಯಕಲ್ಪ-ಯಕ್ಷಗಾನದ ಸಾಂಪ್ರದಾಯಿಕ ಆವರಣದ ಸೌಂದರ್ಯ, ಔಚಿತ್ಯ ಪ್ರಜ್ಞೆ

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

9(1)

Trasi-ಮರವಂತೆ ಬೀಚ್‌: ವಾಟರ್‌ ಗೇಮ್ಸ್‌ ಬೋಟಿಂಗ್‌ ಮತ್ತೆ ಆರಂಭ

Areca-Chde

Karkala: ಅಡಿಕೆಯಲ್ಲಿ ಚೆಂಡೆಕೊಳೆ ರೋಗ ಪತ್ತೆ; ರೈತರಿಗೆ ದೊಡ್ಡ ಪ್ರಮಾಣದ ನಷ್ಟ

boil-rice

Ration: ಕರಾವಳಿಗೆ ಹೊರರಾಜ್ಯದ ಕುಚಲಕ್ಕಿಯೇ ಅನಿವಾರ್ಯ; ಭತ್ತವೂ ಇಲ್ಲ, ಅಕ್ಕಿಯೂ ಇಲ್ಲ,

Eshwar-Malpe1

Udupi: ಮುಳುಗುತಜ್ಞ ಈಶ್ವರ ಮಲ್ಪೆ ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

9(1)

Trasi-ಮರವಂತೆ ಬೀಚ್‌: ವಾಟರ್‌ ಗೇಮ್ಸ್‌ ಬೋಟಿಂಗ್‌ ಮತ್ತೆ ಆರಂಭ

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.