Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ
Team Udayavani, Oct 7, 2024, 7:30 AM IST
ಗಂಗೊಳ್ಳಿ: ಇಲ್ಲಿನ ಖಾರ್ವಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ದೇವರ ಮೇಲಿದ್ದ ಚಿನ್ನಾಭರಣಗಳನ್ನು ಪೂಜೆ ಮಾಡುವ ಅರ್ಚಕನೇ ಕಳವುಗೈದು, ವಿವಿಧೆಡೆ ಅಡವಿಟ್ಟಿದ್ದು, ಈಗ ಎಲ್ಲ 256 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣ ಸೆ. 21ರಂದು ಬೆಳಕಿಗೆ ಬಂದಿದ್ದು, ಆ ಕೂಡಲೇ ಆರೋಪಿ, ದೇವಸ್ಥಾನದಲ್ಲಿ ಪೂಜೆ ಮಾಡುವ ಅರ್ಚಕ ಶಿರಸಿ ಮೂಲದ ನರಸಿಂಹ ಭಟ್ (43) ಎಂಬಾತನನ್ನು ಪೊಲೀಸರು ಬಂಧಿಸಿದ್ದರು.
ಬಳಿಕ ಗಂಗೊಳ್ಳಿ ಠಾಣಾ ಎಸ್ಐಗಳಾದ ಹರೀಶ್ ಆರ್., ಬಸವರಾಜ ಕನಶೆಟ್ಟಿ, ಸಿಬಂದಿ ನಾಗರಾಜ, ಶಾಂತರಾಮ ಶೆಟ್ಟಿ, ರಾಘವೇಂದ್ರ, ಸಂದೀಪ ಕುರಣಿ ಹಾಗೂ ಚಾಲಕ ದಿನೇಶ ಅವರ ತಂಡವು ವಿಚಾರಣೆ ನಡೆಸಿ, ಆರೋಪಿಯು ಅಡವಿಟ್ಟಿದ್ದ ವಿವಿಧ ಬ್ಯಾಂಕ್, ಸಹಕಾರ ಸಂಘಗಳಲ್ಲಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 40 ಗ್ರಾಂ ತೂಕದ 3.20 ಲಕ್ಷ ರೂ. ಮೌಲ್ಯದ ಚಿನ್ನದ ಜೋಬಿನ ಸರ, 73 ಗ್ರಾಂ ತೂಕದ 5.84 ಲಕ್ಷ ರೂ. ಮೌಲ್ಯದ ಚಿನ್ನದ ಕಾಸಿ ತಾಳಿ ಸರ, 73 ಗ್ರಾಂ ತೂಕದ 5.84 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 6 ಗ್ರಾಂ ತೂಕದ 48 ಸಾವಿರ ರೂ. ಮೌಲ್ಯದ 3 ಚಿನ್ನದ ತಾಳಿ, 64 ಗ್ರಾಂ ತೂಕದ 5.12 ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲೆಸ್ ಸೇರಿದಂತೆ ಒಟ್ಟು 20.48 ಲಕ್ಷ ರೂ. ಮೌಲ್ಯದ 256 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯು ತನ್ನ ಸ್ವಂತಕ್ಕಾಗಿ ದೇವರ ಮೇಲಿದ್ದ ಚಿನ್ನಾಭರಣಗಳನ್ನು ತೆಗೆದು, ನಕಲಿ ಚಿನ್ನಾಭರಣಗಳನ್ನು ಹಾಕಿರುವುದಾಗಿದೆ. ದೇವರ ಚಿನ್ನಾಭರಣಗಳನ್ನು ಆತ ಕುಂದಾಪುರ, ಬೈಂದೂರು ಭಾಗದ ವಿವಿಧ ಬ್ಯಾಂಕ್ ಹಾಗೂ ಸೊಸೈಟಿಗಳಲ್ಲಿ ಅಡವಿಟ್ಟಿರುವುದಾಗಿದೆ. ವಶಪಡಿಸಿಕೊಂಡ ಚಿನ್ನಾಭರಣಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅಲ್ಲಿಂದ ದೇವಸ್ಥಾನದವರು ಪಡೆಯಬಹುದಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ
Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ
Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ
Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ
Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು
Bigg Boss Marathi 5: ಬಿಗ್ ಬಾಸ್ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.