![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Apr 10, 2022, 10:54 AM IST
ಮರವಂತೆ: ನಾವುಂದ ಗ್ರಾ.ಪಂ. ವ್ಯಾಪ್ತಿಯ ಗರಡಿ ಕಡೆಗೆ ಹೋಗುವ ರಸ್ತೆಗೆ ಕೊನೆಗೂ ಕಾಂಕ್ರೀಟ್ ಕಾಮಗಾರಿ ಮಾಡುವ ಮೂಲಕ ಈ ಭಾಗದ ಜನರ ಬಹುದಿನಗಳ ಸಂಕಷ್ಟದ ಸಂಚಾರಕ್ಕೆ ಮುಕ್ತಿ ಸಿಕ್ಕಂತಾಗಿದೆ.
ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ನಾವುಂದ ಅಂಡರ್ಪಾಸ್ ಬಳಿಯಿಂದ ಶ್ರೀ ಬ್ರಹ್ಮಬೈದರ್ಕಳ ಕೋಟಿ ಚೆನ್ನಯ ಗರಡಿಗೆ ಹೋಗುವ ರಸ್ತೆಗೆ 40 ಲಕ್ಷ ರೂ. ವೆಚ್ಚದಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಮುತುವರ್ಜಿಯಲ್ಲಿ ಕಾಂಕ್ರೀಟ್ ಮಾಡಲಾಗಿದೆ.
ಹೊಂಡಮಯ ರಸ್ತೆಗೆ ಮುಕ್ತಿ
ಈ ರಸ್ತೆ ಡಾಮರುಗೊಂಡು ಸುಮಾರು ವರ್ಷಗಳೇ ಕಳೆದಿದೆ. ಆದರೆ 4-5 ವರ್ಷಗಳಿಂದ ಸುಮಾರು 500 ಮೀಟರ್ ದೂರದವರೆಗೆ ಡಾಮರೆಲ್ಲ ಅಲ್ಲಲ್ಲಿ ಎದ್ದು ಹೋಗಿ ಹೊಂಡದಿಂದ ಕೂಡಿದ ರಸ್ತೆಯಾಗಿತ್ತು. ಈ ಭಾಗದಲ್ಲಿ ಸುಮಾರು 100ಕ್ಕೂ ಅಧಿಕ ಮನೆಯವರು ಇದೇ ಮಾರ್ಗವನ್ನು ಆಶ್ರಯಿಸಿದ್ದಾರೆ.
ಸುದಿನ ವರದಿ ನಾವುಂದದಿಂದ ಗರಡಿಗೆ ಸಂಚರಿಸುವ ಈ ಡಾಮರು ರಸ್ತೆ ಅವ್ಯವಸ್ಥೆ, ಹೊಂಡಮಯ ರಸ್ತೆಯಲ್ಲಿ ಸಂಕಷ್ಟದ ಸಂಚಾರದ ಕುರಿತಂತೆ ‘ಉದಯವಾಣಿ ಸುದಿನ’ ವು ವಿಶೇಷ ವರದಿ ಪ್ರಕಟಿಸಿ, ಗಮನಸೆಳೆದಿತ್ತು.
You seem to have an Ad Blocker on.
To continue reading, please turn it off or whitelist Udayavani.