![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 17, 2022, 7:10 AM IST
ಕುಂದಾಪುರ: ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ಸಾಧಕರಿಗೆ ಅನ್ಯ ರಾಜ್ಯಗಳಂತೆ ನಮ್ಮ ರಾಜ್ಯದಲ್ಲಿಯೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಕುಂದಾಪುರದ ಗುರುರಾಜ್ ಪೂಜಾರಿ ಅವರು ಸಿಎಂ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಕಾಮನ್ವೆಲ್ತ್ನಲ್ಲಿ ಪದಕ ಗೆದ್ದವರಿಗೆ ನೀಡುವ ಪ್ರೋತ್ಸಾಹಧನ ತೀರಾ ಕಡಿಮೆ. ನಾನು ಕಳೆದ ಬಾರಿ ಬೆಳ್ಳಿ ಗೆದ್ದಾಗ ಆಗಿನ ಸರಕಾರ 25 ಲಕ್ಷ ರೂ. ನೀಡಿತ್ತು. ಪದಕ ವಿಜೇತರಿಗೆ ಪ್ರೋತ್ಸಾಹಧನ ಹೆಚ್ಚಿಸಿದರೆ ಇನ್ನಷ್ಟು ಸಾಧನೆ ಮಾಡಲು ಉತ್ತೇಜನ ಲಭಿಸುತ್ತದೆ ಎಂದು ಗುರುರಾಜ್ ತಿಳಿಸಿದರು.
ರಾಜ್ಯದಲ್ಲೇ ಉದ್ಯೋಗಕ್ಕೆ ಮನವಿ
ಸದ್ಯ ಚಂಡೀಗಢದಲ್ಲಿ ಭಾರತೀಯ ವಾಯುಸೇನೆಯ ಜೂನಿಯರ್ ವಾರಂಟ್ ಆಫೀಸರ್ ಆಗಿದ್ದೇನೆ. ಪದಕ ವಿಜೇತರಿಗೆ ರಾಜ್ಯದಲ್ಲೇ ಸರಕಾರಿ ಉದ್ಯೋಗ ನೀಡುವ ಪ್ರಸ್ತಾವ ಸರಕಾರದ ಮುಂದಿದೆ. ನನಗೂ ರಾಜ್ಯದಲ್ಲಿಯೇ ಸೂಕ್ತ ಹುದ್ದೆ ನೀಡಿ, ತರಬೇತಿಗೆ ಅವಕಾಶ ಒದಗಿಸಬೇಕು. ಮುಂಬರುವ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ನಲ್ಲಿ ಪಾಲ್ಗೊಂಡು ಪದಕ ಗೆಲ್ಲುವ ವಿಶ್ವಾಸವಿದೆ. ಅದಕ್ಕಾಗಿ ಕಠಿನ ಅಭ್ಯಾಸ, ತರಬೇತಿಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಮನವಿ ಸಲ್ಲಿಸಿದರು.
ನಿವೇಶನಕ್ಕೆ ಪ್ರಸ್ತಾವ
ನಮ್ಮದು ಬಡ ಕುಟುಂಬವಾಗಿದ್ದು, ತಂದೆ ಚಾಲಕ ವೃತ್ತಿ ಮಾಡಿಕೊಂಡು ಕೂಡು ಕುಟುಂಬವನ್ನು ಸಲಹುತ್ತಿದ್ದಾರೆ. ನಮಗೆ ಸ್ವಲ್ಪ ಕೃಷಿ ಭೂಮಿಯಷ್ಟೇ ಇದೆ. ಸರಕಾರ ನಿವೇಶನ ಮಂಜೂರು ಮಾಡಿದರೆ ಮನೆ ಕಟ್ಟಲು ಅನುಕೂಲವಾಗುತ್ತದೆ ಎಂದೂ ಗುರುರಾಜ್ ಪೂಜಾರಿ ಸಿಎಂ ಅವರಿಗೆ ಮನವಿ ಸಲ್ಲಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.