ಮಾನವ ಸೃಜನೆ: ಹಕ್ಲಾಡಿ ಗ್ರಾ.ಪಂ. ಜಿಲ್ಲೆಗೆ ಅಗ್ರಣಿ
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ಕುಂದಾಪುರ - 8 ; ಬೈಂದೂರು - 4 ಪಂ. ಉತ್ತಮ ಸಾಧನೆ
Team Udayavani, Dec 20, 2021, 5:48 PM IST
ಕುಂದಾಪುರ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯನ್ನು ಉತ್ತಮ ರೀತಿಯಲ್ಲಿ ಸದ್ಭಳಕೆ ಮಾಡಿಕೊಳ್ಳುವ ಮೂಲಕ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್ ನಿರೀಕ್ಷೆಗೂ ಮೀರಿದ ಸಾಧನೆಗೈದಿದೆ. ನರೇಗಾದಡಿ ಮಾನವ ಸೃಜನೆ ಮಾಡಿದ ಪಂಚಾಯತ್ಗಳ ಪೈಕಿ ಹಕ್ಲಾಡಿ ಗ್ರಾ.ಪಂ. ಉಡುಪಿ ಜಿಲ್ಲೆಯಲ್ಲಿಯೇ ಅಗ್ರಸ್ಥಾನ ಪಡೆದಿದೆ.
2021-2022ನೇ ಸಾಲಿನಲ್ಲಿ ಕುಂದಾಪುರ ತಾಲೂಕಿನ ಒಟ್ಟು 46 ಗ್ರಾ.ಪಂ.ಗಳಲ್ಲಿ 2,38,797 ದಿನ ಹಾಗೂ ಬೈಂದೂರು ತಾಲೂಕಿನ ಒಟ್ಟು 13 ಗ್ರಾ.ಪಂ.ಗಳಲ್ಲಿ 77,154 ಮಾನವ ದಿನಗಳ ಸೃಜನೆಯಾಗಿದೆ. ಈ ಪೈಕಿ ಕುಂದಾಪುರದಲ್ಲಿ 8 ಹಾಗೂ ಬೈಂದೂರಲ್ಲಿ 4 ಗ್ರಾ.ಪಂ.ಗಳು 8 ಸಾವಿರಕ್ಕೂ ಅಧಿಕ ಮಾನವ ದಿನಗಳ ಸೃಜನೆ ಮಾಡುವ ಮೂಲಕ ಉತ್ತಮ ಪ್ರಗತಿ ಸಾಧಿಸಿದೆ.
ಈ ಸಾಲಿನಲ್ಲಿ ಹಕ್ಲಾಡಿ ಗ್ರಾ.ಪಂ.ಗೆ 18,700 ಮಾನವ ಸೃಜನೆ ದಿನಗಳ ಗುರಿ ನೀಡಲಾಗಿದ್ದು, ಈ ಪೈಕಿ ಈಗಾಗಲೇ 14,800 ಮಾನವ ದಿನಗಳನ್ನುಸೃಜನೆ ಮಾಡುವ ಮೂಲಕ ವಿಶೇಷ ಸಾಧನೆಗೈದಿದೆ. 2022 ಮಾರ್ಚ್ ಅಂತ್ಯದೊಳಗೆ ನಿಗದಿತ ಗುರಿ ಸಹ ಮೀರಿಸುವ ನಿರೀಕ್ಷೆ ಹೊಂದಿದೆ.
ಕಳೆದ ಬಾರಿ ಇದರದಡಿ 65.59 ಲಕ್ಷ ರೂ. ವೆಚ್ಚದ ಕಾಮಗಾರಿಯಾಗಿದ್ದರೆ, ಈ ಬಾರಿ ಈಗಾಗಲೇ 51.40 ಲ.ರೂ. ಕಾಮಗಾರಿ ನಡೆಸಲಾಗಿದೆ. ಬದುಕು ಕಟ್ಟಿಕೊಟ್ಟ ನರೇಗಾಹಕ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಸಮುದಾಯ ಕಾಮಗಾರಿಗಳು ಪ್ರಗತಿ ಸಾಧಿಸಲಾಗಿದೆ. 5 ಕಡೆ ಕೆರೆ ಹೂಳೆತ್ತುವಿಕೆ, ಕೆರೆ ರಚನೆ, ತೋಡು ಹೂಳೆತ್ತುವಿಕೆ, ಶಾಲಾ ಆವರಣ ಗೋಡೆ, ಶಾಲೆಗಳ ಸಹಿತ ಸಮುದಾಯ ಮಳೆ ನೀರು ಕೊಯ್ಲು ಸೇರಿದಂತೆ ಅನೇಕ ಸಮುದಾಯ ಕಾಮಗಾರಿಗಳು ನಡೆಯುತ್ತಿದೆ.
ಈ ಕಾಮಗಾರಿಗಳಲ್ಲಿ ಮಹಿಳೆಯರೇ ಹೆಚ್ಚಾಗಿ ಕೂಲಿಕಾರರಾಗಿ ದುಡಿಯುತ್ತಿದ್ದು, 250ಕ್ಕೂ ಅಧಿಕ ಮಹಿಳೆಯರು ದಿನಕ್ಕೆ 289 ರೂ. ಕೂಲಿ ಪಡೆದು ಜೀವನ ಕಂಡುಕೊಂಡಿದ್ದಾರೆ. ಇನ್ನು ಮಿಷನ್ 25 ಅಭಿಯಾನದಡಿ ಅರ್ಹರಿಗೆ ವೈಯಕ್ತಿಕ ಕಾಮಗಾರಿಗಳನ್ನು ನೀಡಲಾಗುತ್ತಿದ್ದು, ಬಚ್ಚಲು ಗುಂಡಿ, ದನದ ಹಟ್ಟಿ, ಕೋಳಿ ಶೆಡ್, ಗೊಬ್ಬರದ ಗುಂಡಿ ಸೇರಿಂತೆ ಅನೇಕ ವೈಯಕ್ತಿಕ ಕಾಮಗಾರಿಗಳನ್ನು ಗ್ರಾಮಸ್ಥರು ಪಡೆದುಕೊಂಡಿದ್ದಾರೆ.
ನಮ್ಮ ಕುಟುಂಬ ನಿರ್ವಹಣೆಗೆ ನರೇಗಾ ಯೋಜನೆ ಬಹಳಷ್ಟು ಸಹಕಾರಿಯಾಗಿದೆ. ಸಮುದಾಯ ಕಾಮಗಾರಿಯಲ್ಲಿ ದುಡಿದು ಜೀವನ ಸಾಗಿಸುತ್ತಿದ್ದೇವೆ. ಕೊರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಉದ್ಯೋಗ ಖಾತರಿ ಯೋಜನೆ
ನಮ್ಮ ಕೈ ಹಿಡಿದಿದೆ ಎಂದು ಫಲಾನುಭವಿಗಳಲ್ಲಿ ಒಬ್ಬರಾದ ಬೇಬಿ ಅವರು ತಿಳಿಸಿದ್ದಾರೆ.
ಸಮುದಾಯ ಅಭಿವೃದ್ಧಿಗೆ ಒತ್ತು
ಹಕ್ಲಾಡಿ ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಡಿ ಉತ್ತಮ ಸಾಧನೆ ಮಾಡಿದೆ. ಕೇವಲ ವೈಯಕ್ತಿಕ
ಕಾಮಗಾರಿ ಮಾತ್ರವಲ್ಲದೆ ಉದ್ಯೋಗ ಸೃಷ್ಟಿಸುವ ಹಿನ್ನೆಲೆಯಲ್ಲಿ ಸಮುದಾಯ ಕಾಮಗಾರಿಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಸಮುದಾಯ ಕಾಮಗಾರಿಗಳಲ್ಲಿ 250ಕ್ಕೂ ಹೆಚ್ಚು ಮಹಿಳೆಯರು ದುಡಿದು ಬದುಕು ಕಟ್ಟಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲಿದ್ದೇವೆ-ಚಂದ್ರ ಬಿಲ್ಲವ, ಹಕ್ಲಾಡಿ ಗ್ರಾ.ಪಂ. ಪಿಡಿಒ
ನರೇಗಾ ಯೋಜನೆಯಡಿ ಹಕ್ಲಾಡಿ ಗ್ರಾಮ ಪಂಚಾಯತ್ ಉತ್ತಮ ಸಾಧನೆ ಮಾಡಿದೆ. ಅದರಲ್ಲೂ ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದು, ಇತರರಿಗೂ ಮಾದರಿಯಾಗಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಗ್ರಾಮೀಣ ಭಾಗದ ಜನರಿಗೆ ಈ ಯೋಜನೆ ವರದಾನವಾಗಿದೆ. ಇನ್ನಷ್ಟು ಜನರು ಇದರ ಸದುಪಯೋಗ ಪಡೆದುಕೊಳ್ಳುವಂತಾಗಲಿ.
-ಶ್ವೇತಾ ಎನ್., ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ
ಕುಂದಾಪುರ (ಪ್ರಭಾರ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ
Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ
Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ
Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್ಇ ಶಾಲೆ ಪ್ರಾರಂಭ
Kaup: ಶ್ರೀ ಹೊಸ ಮಾರಿಗುಡಿ: ಮಹಾಚಂಡಿಕಾಯಾಗ, ದರ್ಶನ ಸೇವೆ ಸಂಪನ್ನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.