Hattiangady ಶಾಲೆ: ಶಿಥಿಲ ಕೊಠಡಿ ತೆರವಿಗೆ ಕೊನೆಗೂ ಅನುಮತಿ


Team Udayavani, Aug 27, 2024, 12:47 PM IST

Hattiangady ಶಾಲೆ: ಶಿಥಿಲ ಕೊಠಡಿ ತೆರವಿಗೆ ಕೊನೆಗೂ ಅನುಮತಿ

ಕುಂದಾಪುರ: ಹಟ್ಟಿಯಂಗಡಿ ಸರಕಾರಿ ಹಿ.ಪ್ರಾ. ಶಾಲೆಯ ಶಿಥಿಲಗೊಂಡಿರುವ ಕೊಠಡಿಯೊಂದನ್ನು ತೆರವು ಮಾಡಲು ಇಲಾಖೆ ಕೊನೆಗೂ ಅನುಮತಿ ನೀಡಿದೆ. ಇದರೊಂದಿಗೆ ಗಾಳಿ – ಮಳೆಗೆ ಕುಸಿದು ಬೀಳುವ ಅಪಾಯವಿದ್ದು, ಕೆಡವಲು ಅನುಮತಿ ನೀಡಿರುವ ಆದೇಶದಿಂದಾಗಿ ಈಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಸುಮಾರು 75 ವರ್ಷ ಹಳೆಯದಾದ ಈ ಕೊಠಡಿಯು ತೀರಾ ಶಿಥಿಲಾವಸ್ಥೆಯಲ್ಲಿರುವುದರಿಂದ ದುರಸ್ತಿ ಅಸಾಧ್ಯ. ಪಂಚಾಯತ್‌ ರಾಜ್‌ ಎಂಜಿನಿಯರ್‌ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಅವರು ನೀಡಿರುವ ವರದಿಯಂತೆ ಈ ಕೊಠಡಿಯನ್ನು ಕೆಡವಲು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅನುಮತಿ ನೀಡಿದ್ದಾರೆ.

ಮಕ್ಕಳ ಹಿತದೃಷ್ಟಿಯಿಂದ ಆ ಕಟ್ಟಡದ ತೆರವಿಗೆ ಎಸ್‌ಡಿಎಂಸಿ, ಶಿಕ್ಷಕರು, ಪೋಷಕರು, ಹಳೆ ವಿದ್ಯಾರ್ಥಿ ಸಂಘದವರು ವರ್ಷದಿಂದ ಮನವಿ ಮಾಡುತ್ತಿದ್ದರು. ಸದ್ಯ ಅಲ್ಲಿ ತರಗತಿ ನಡೆಸದೇ, ಬೇರೆ ಕಡೆ ನಡೆಸಲಾಗುತ್ತಿತ್ತು. ಆದರೂ ಮಕ್ಕಳು ಆಚೀಚೆ ಓಡಾಡುವ ವೇಳೆ ಗಾಳಿ- ಮಳೆಗೆ ಕುಸಿದು ಬಿದ್ದು, ಏನಾದರೂ ಅನಾಹುತ ಸಂಭವಿಸುವ ಭೀತಿ ಇತ್ತು.

ತೆರವಿಗೆ ಎಸ್‌ಡಿಎಂಸಿ ಮನವಿ
ಈ ಶಿಥಿಲಗೊಂಡ ಕಟ್ಟಡ ಅಪಾಯಕಾರಿಯಾಗಿದ್ದು, ಇಲ್ಲಿ ತರಗತಿ ನಡೆಸಲು ಸಾಧ್ಯವಿಲ್ಲ. ಈ ಕಟ್ಟಡವನ್ನು ಆದಷ್ಟು ಬೇಗ ತೆರವು ಮಾಡಿ, ಆ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು ಎನ್ನುವುದಾಗಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ವತಿಯಿಂದ ಉಡುಪಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಇದಕ್ಕೂ ಮುನ್ನ ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಮನವಿ ಸಲ್ಲಿಸಿದ್ದು, ಅವರು ಸ್ವತಹಃ ಇಲ್ಲಿಗೆ ಭೇಟಿ ನೀಡಿ, ವರದಿ ತಯಾರಿಸಿ, ಮೇಲಾಧಿಕಾರಿಗಳಿಗೆ ಸಲ್ಲಿಸಿದ್ದರು.

ಈ ಕೊಠಡಿಯಲ್ಲಿ ಯಾವುದೇ ತರಗತಿ ನಡೆಯದ ಕಾರಣ, ಶಿಕ್ಷಕರ ಕಚೇರಿಯನ್ನೇ ಇನ್ನೊಂದು ತರಗತಿ ಕೋಣೆಯಾಗಿ ಮಾಡಲಾಗಿದೆ. ಇರುವಂತಹ ಕೊಠಡಿಗಳಲ್ಲಿಯೇ ತರಗತಿ ನಡೆಸಲಾಗುತ್ತಿದ್ದು, ಈ ಕಟ್ಟಡವನ್ನು ನೆಲಸಮಗೊಳಿಸಿದ ಬಳಿಕ ಆ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಬೇಕು ಎನ್ನುವುದು ಶಿಕ್ಷಕರು, ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಪೋಷಕರ ಬೇಡಿಕೆಯಾಗಿದೆ.

75 ವರ್ಷ ಹಳೆಯ ಕಟ್ಟಡ
ಬೈಂದೂರು ವಲಯದ ಹಟ್ಟಿಯಂಗಡಿ ಸರಕಾರಿ ಹಿ.ಪ್ರಾ. ಶಾಲೆಯ ಈ ಕಟ್ಟಡವೂ ಸುಮಾರು 75 ವರ್ಷಗಳಿಗೂ ಹಿಂದಿನದ್ದಾಗಿದೆ. ಈ ಶಾಲೆಯಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮ, ಸಭೆ, ಸಮಾರಂಭಗಳು ಇದೇ ಕಟ್ಟಡದಲ್ಲಿ ನಡೆಯುತ್ತಿದ್ದವು. ಪ್ರತೀ ಚುನಾವಣೆಯಲ್ಲೂ ಈ ಕಟ್ಟಡದಲ್ಲಿಯೇ ಮತಗಟ್ಟೆಯನ್ನು ತೆರೆಯಲಾಗುತ್ತಿತ್ತು. ಆದರೆ ಈ ಬಾರಿಯ ಲೋಕಸಭಾ ಚುನಾವಣೆ ವೇಳೆ ಇಲ್ಲಿ ಮತಗಟ್ಟೆ ತೆರೆದಿರಲಿಲ್ಲ. ಈ ಕಟ್ಟಡದಲ್ಲಿ 3 ಕೊಠಡಿಗಳಿದ್ದು, ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಸಿಮೆಂಟ್‌ ಹಾಕಿರುವುದು ಎದ್ದು ಹೋಗಿ, ಕೆಲವೆಡೆಗಳಲ್ಲಿ ಗೋಡೆ ಮಾತ್ರ ಕಾಣುತ್ತಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.