ಹೆಮ್ಮಾಡಿ ಸರಕಾರಿ ಮಾದರಿ ಹಿ. ಪ್ರಾ. ಶಾಲೆ: ಕೊಠಡಿ ದುರಸ್ತಿಗೆ ಬೇಡಿಕೆ

ನೂರಕ್ಕೂ ಮಿಕ್ಕಿ ಮಕ್ಕಳಿರುವ ಶಾಲೆ ; ಉತ್ತಮ ದಾಖಲಾತಿ ಹಿನ್ನೆಲೆ; ಕೊಠಡಿ ಕೊರತೆ

Team Udayavani, Nov 29, 2021, 6:31 AM IST

ಹೆಮ್ಮಾಡಿ ಸರಕಾರಿ ಮಾದರಿ ಹಿ. ಪ್ರಾ. ಶಾಲೆ: ಕೊಠಡಿ ದುರಸ್ತಿಗೆ ಬೇಡಿಕೆ

ಹೆಮ್ಮಾಡಿ: ಮೂರು ವರ್ಷಗಳ ಹಿಂದೆ 70ಕ್ಕಿಂತಲೂ ಕಡಿಮೆಯಿದ್ದ ಹೆಮ್ಮಾಡಿ ಸರಕಾರಿ ಮಾದರಿ ಹಿ. ಪ್ರಾ. ಶಾಲೆಯಲ್ಲೀಗ ನೂರಕ್ಕೂ ಮಿಕ್ಕಿ ಮಕ್ಕಳಿದ್ದಾರೆ.

ಮಕ್ಕಳ ಸಂಖ್ಯೆ ಹೆಚ್ಚಿರುವ ಕಾರಣ ಒಂದನೇ ತರಗತಿಯನ್ನು 2 ವಿಭಾಗ ಮಾಡಲಾಗಿದೆ. ಎಲ್‌ಕೆಜಿ, ಯುಕೆಜಿಯಲ್ಲಿ 40ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳ ದಾಖಲಾತಿಯಾಗಿದೆ. ಆದರೆ ಕೊಠಡಿ ಸಮಸ್ಯೆಯಿದ್ದು, ಈಗಿರುವ ಎರಡು ಕೊಠಡಿ ಶಿಥಿಲಾವಸ್ಥೆಯಲ್ಲಿದ್ದು ಅದರ ದುರಸ್ತಿಗೆ ಬೇಡಿಕೆ ಕೇಳಿ ಬಂದಿದೆ.

ಹೆಮ್ಮಾಡಿ ಸರಕಾರಿ ಶಾಲೆಯು ಈ ಭಾಗದ ಉತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದ್ದು, ಈ ಶೈಕ್ಷಣಿಕ ವರ್ಷ ಸೇರಿದಂತೆ ಕಳೆದೆರಡು ವರ್ಷಗಳಿಂದ ಉತ್ತಮ ದಾಖಲಾತಿಯಾಗಿದೆ. ಆದರೆ ಸದ್ಯ ಕೊಠಡಿ ಕೊರತೆಯಿಂದಾಗಿ ಪಾಠ- ಪ್ರವಚನಕ್ಕೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟವರು ಕೂಡಲೇ ಅಗತ್ಯ ಬೇಡಿಕೆಗಳನ್ನು ಈಡೇರಿಸಬೇಕು ಎನ್ನುವ ಆಗ್ರ ಹವನ್ನು ಹೆತ್ತ ವರು ವ್ಯಕ್ತಪಡಿಸಿದ್ದಾರೆ.

110 ಮಕ್ಕಳು
2019 ರಲ್ಲಿ ಈ ಶಾಲೆಯಲ್ಲಿ 70ಕ್ಕಿಂತಲೂ ಕಡಿಮೆ ಮಕ್ಕಳಿದ್ದರು. ಕಳೆದ ಸಾಲಿನಲ್ಲಿ 96 ಮಂದಿ ಮಕ್ಕಳಿದ್ದರೆ, ಈ ಬಾರಿ ಒಟ್ಟು 110 ಮಂದಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಅದರಲ್ಲೂ ಒಂದನೇ ತರಗತಿಗೆ 25 ಮಂದಿ ಮಕ್ಕಳ ದಾಖಲಾತಿಯಾಗಿದೆ. ಒಂದನೇ ತರಗತಿಯಲ್ಲದೆ ಇತರ ತರಗತಿಗಳಿಗೂ ಬೇರೆ ಬೇರೆ ಖಾಸಗಿ ಶಾಲೆಗಳಿಂದ ಇಲ್ಲಿಗೆ ಮಕ್ಕಳು ಬಂದಿದ್ದಾರೆ. ಇನ್ನು ಎಲ್‌ಕೆಜಿ- ಯುಕೆಜಿ ವಿಭಾಗದಲ್ಲಿ 42 ಮಂದಿ ಸೇರಿದಂತೆ ಒಟ್ಟಾರೆ ಈ ಶಾಲೆಯಲ್ಲಿ 152 ಮಂದಿ ವಿದ್ಯಾರ್ಥಿಗಳಿದ್ದಾರೆ.

ಸಮಸ್ಯೆಯೇನು?
ಶಾಲೆಯ ಒಂದು ಕೊಠಡಿ ಹಾಗೂ ಗ್ರಂಥಾಲಯ ಕೋಣೆಯ ಹಂಚಿನ ಮಾಡು, ಗೋಡೆ ಬಿರುಕು ಬಿಟ್ಟು, ಶಿಥಿಲಾವಸ್ಥೆಯಲ್ಲಿದೆ. ಇಲ್ಲಿ ತರಗತಿ ನಡೆಸುವುದು ಅಪಾಯಕಾರಿ ಎಂದರಿತ ಶಿಕ್ಷಕರು ಮುಂಜಾಗ್ರತೆಯಿಂದಾಗಿ ಈ ಎರಡು ಕೊಠಡಿಗಳಿಗೆ ಬೀಗ ಹಾಕಿದ್ದಾರೆ. ಕಂಪ್ಯೂಟರ್‌ ತರಗತಿ ಹಾಗೂ ಸಭಾಭವನದಲ್ಲೂ ನಿತ್ಯದ ತರಗತಿ ನಡೆಸುವಂತಾಗಿದೆ. ಅದಕ್ಕಾಗಿ ಶಿಥಿಲಾವಸ್ಥೆಯಲ್ಲಿರುವ ಎರಡು ಕೊಠಡಿಗಳನ್ನು ಕೂಡಲೇ ದುರಸ್ತಿಪಡಿಸಬೇಕು ಹಾಗೂ ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆಯನ್ನು ಇಲಾಖೆಯ ಮುಂದಿರಿಸಲಾಗಿದೆ. ಇನ್ನುಳಿದಂತೆ ಮುಖ್ಯ ಶಿಕ್ಷಕರು ಸೇರಿದಂತೆ 6 ಮಂದಿ ಶಿಕ್ಷಕರಿದ್ದಾರೆ. ಆದರೆ ಆಂಗ್ಲ ಭಾಷಾ ಶಿಕ್ಷಕರ ಅಗತ್ಯವಿದೆ. ಆವರಣ ಗೋಡೆ ಈಗಾಗಲೇ ಹೆಮ್ಮಾಡಿ ಪಂಚಾಯತ್‌ನಿಂದ ನಿರ್ಮಾಣವಾಗುತ್ತಿದೆ. ಹೆಚ್ಚುವರಿ ಶೌಚಾಲಯದ ಅಗತ್ಯವಿದ್ದು, ಜಿ.ಪಂ. ಅನುದಾನ ಮಂಜೂರಾಗಿದೆ.

ದುರಸ್ತಿಗೆ ಪ್ರಯತ್ನ
ಶಾಲೆಯಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿದ್ದರಿಂದ ಕೊಠಡಿ ಸಮಸ್ಯೆಯಾಗುತ್ತಿದೆ. ಸದ್ಯಕ್ಕೆ ಮಕ್ಕಳಿಗೆ ತೊಂದರೆಯಾಗದಂತೆ ತರಗತಿಗಳನ್ನು ನಡೆಸಲಾಗುತ್ತಿದೆ. ಕೊಠಡಿ ದುರಸ್ತಿ ಸಂಬಂಧ ಮುಖ್ಯ ಶಿಕ್ಷಕರಿಂದ ಮಾಹಿತಿ ಪಡೆದು, ತ್ವರಿತಗತಿಯಲ್ಲಿ ಕ್ರಮಕೈಗೊಳ್ಳಲಾಗುವುದು.
ಜಿ.ಎಂ. ಮುಂದಿನಮನಿ, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ

ಕೂಡಲೇ ಗಮನಹರಿಸಲಿ
ಈ ಶಾಲೆಯಲ್ಲಿ ಈ ಬಾರಿ ಉತ್ತಮ ದಾಖಲಾತಿಯಾಗಿದ್ದು, ಈಗಾಗಲೇ ಪಂಚಾಯತ್‌ನಿಂದ ಆವರಣ ಗೋಡೆ, ಜಿ.ಪಂ. ಅನುದಾನದಿಂದ ಶೌಚಾಲಯ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದೆ. ಆದರೆ ಒಂದೆರಡು ಕೊಠಡಿ ದುರಸ್ತಿಯಾಗದಿರುವುದರಿಂದ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಇದರ ದುರಸ್ತಿಗೆ ಕೂಡಲೇ ಇಲಾಖೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಶಾಸಕರು ಗಮನಹರಿಸಬೇಕು.
– ಸತ್ಯನಾರಾಯಣ ರಾವ್‌, ಅಧ್ಯಕ್ಷರು, ಹೆಮ್ಮಾಡಿ ಗ್ರಾ.ಪಂ.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.