ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ


Team Udayavani, May 21, 2024, 7:30 AM IST

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಕುಂದಾಪುರ: ಒಂದು ಕಾಲದಲ್ಲಿ ವರ್ಷಪೂರ್ತಿ ನೀರಿನಿಂದ ಕಂಗೊಳಿಸುತ್ತಿದ್ದ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಡವು ಗ್ರಾಮದ ಗೋರ್ಕಲ್ಲು ಮನೆ ಕೆರೆಯೀಗ ಹೂಳು ತುಂಬಿದ ಕೊಂಪೆಯಾಗಿದೆ. ಸುತ್ತಲಿನ ಹತ್ತಾರು ಎಕರೆ ಕೃಷಿ ಭೂಮಿಗೆ ನೀರುಣಿಸುತ್ತಿದ್ದ ಈ ಕೆರೆ ಈಗ ನಿಷ್ಪ್ರಯೋಜಕವಾಗಿದೆ.

ಹಡವು ಗ್ರಾಮದ ಗೋರ್ಕಲ್ಲುಮನೆ ಕೆರೆ ಬೈಂದೂರು ತಾಲೂಕಿನ ದೊಡ್ಡ ಕೆರೆಗಳಲ್ಲಿ ಒಂದು. ಅಂದಾಜು 50 ಸೆಂಟ್ಸ್‌ಗೂ ಅಧಿಕ ಪ್ರದೇಶದಲ್ಲಿ ವ್ಯಾಪಿಸಿದ್ದು, ಈಗ ಮಾತ್ರ ಹೂಳು ತುಂಬಿದೆ.

ಹಡವು ಗ್ರಾಮಕ್ಕೆ ಪ್ರಯೋಜನ
ಈ ಗೋರ್ಕಲ್ಲುಮನೆ ಕೆರೆ ಪುನರುಜ್ಜೀವನಗೊಂಡು, ಸಮೃದ್ಧ ನೀರು ಸಂಗ್ರಹಗೊಂಡರೆ ಸುಮಾರು 10-15 ಎಕರೆ ಕೃಷಿ ಭೂಮಿಗೆ ಪ್ರಯೋಜನವಾಗಲಿದೆ. ಈ ಭಾಗದ ಬಹುತೇಕ ರೈತರು ಭತ್ತದ ಕೃಷಿಯನ್ನೇ ನೆಚ್ಚಿಕೊಂಡಿದ್ದಾರೆ. ತುಂಬಾ ವರ್ಷಗಳ ಹಿಂದೆ ಈ ಕೆರೆಯಲ್ಲಿ ನೀರು ತುಂಬಿರುತ್ತಿದ್ದ ಕಾಲದಲ್ಲಿ ಮುಂಗಾರು ಹಾಗೂ ಹಿಂಗಾರು ಎರಡೂ ಬೆಳೆಗಳನ್ನು ಮಾಡುತ್ತಿದ್ದ ರೈತರು, ಈಗ ಮುಂಗಾರಲ್ಲಿ ಮಾತ್ರ ಭತ್ತದ ಬೆಳೆಯುತ್ತಿದ್ದಾರೆ. ಹಿಂಗಾರಿನಲ್ಲಿ ನೀರಿನ ಕೊರತೆಯಾಗುತ್ತಿದೆ. ಹಡವು ಗ್ರಾಮದ ಜನ ಪ್ರತೀ ಬೇಸಗೆಯಲ್ಲಿ ನೀರಿನ ಅಭಾವ ಎದುರಿಸುತ್ತಿದ್ದಾರೆ.
ಸುತ್ತ ನದಿಯಿದ್ದರೂ ಉಪ್ಪು ನೀರಿನ ಪ್ರಭಾವದಿಂದ ನೀರು ಕುಡಿಯಲು ಯೋಗ್ಯ ವಾಗಿಲ್ಲ. ಈ ಕೆರೆಯನ್ನು ಅಭಿವೃದ್ಧಿಪಡಿಸಿ ವರ್ಷಪೂರ್ತಿ ನೀರು ತುಂಬಿರುವಂತೆ ಮಾಡಿದರೆ ಅದನ್ನು ಶುದ್ಧೀಕರಿಸಿ ಗ್ರಾಮದ ಎಲ್ಲ 270ಕ್ಕೂ ಹೆಚ್ಚಿನ ಮನೆಗಳಿಗೆ ನಳ್ಳಿ ಮೂಲಕ ಪೂರೈಸಬಹುದು. ಈ ಕೆರೆಯಲ್ಲಿ ನೀರು ತುಂಬಿದ್ದರೆ ಆಸುಪಾಸಿನ 30ಕ್ಕೂ ಹೆಚ್ಚಿನ ಮನೆಗಳ ಬಾವಿಗಳ ಅಂತರ್ಜಲ ಮಟ್ಟವೂ ಉತ್ತಮವಾಗಿರಲಿದೆ.

ಏನೆಲ್ಲ ಆಗಬೇಕು?
ಈ ಕೆರೆಯ ಹೂಳೆತ್ತದೇ 40 ವರ್ಷಗಳಿಗೂ ಹೆಚ್ಚು ಕಾಲ ಆಗಿರಬಹುದು. ಕೆರೆ ಅಭಿವೃದ್ಧಿ ಯೋಜನೆಯಡಿ ಹೂಳೆತ್ತಿದರೆ ಸಮೃದ್ಧ ನೀರು ಸಂಗ್ರಹಗೊಳ್ಳಬಹುದು. ಸುತ್ತಲೂ ಸುಂದರ ದಂಡೆ ನಿರ್ಮಿಸಿದರೆ ಉತ್ತಮ.

ಹತ್ತಕ್ಕೂ ಹೆಚ್ಚು ಕೆರೆಗಳು
ನಾಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಹತ್ತಕ್ಕೂ ಮಿಕ್ಕಿ ಸರಕಾರಿ ಕೆರೆಗಳಿವೆ. ಅವುಗಳನ್ನು ಗುರುತಿಸಿ, ಹೂಳೆತ್ತಿ, ಅಭಿವೃದ್ಧಿಪಡಿಸಿದ್ದರೆ ಈಗ ನೀರಿನ ಸಮಸ್ಯೆಯೆ ಉದ್ಭವವೇ ಆಗುತ್ತಿರಲಿಲ್ಲ. ಈ ಗೋರ್ಕಲ್ಲುಮನೆ ಕೆರೆ ಇರುವ 1 ಕಿ.ಮೀ. ವ್ಯಾಪ್ತಿಯಲ್ಲಿಯೇ ಕೆಂಪು ಹೊಳೆ ಕೆರೆ, ಬಂಡಾÕಲೆ ಕೆರೆ, ಗುಂಡಿಕೆರೆ ಸೇರಿದಂತೆ 4 ಕೆರೆಗಳಿವೆ. ಇನ್ನು ನಾಡ ಪಂಚಾಯತ್‌ ವ್ಯಾಪ್ತಿಯಲ್ಲಿ ಅಂಗಡಿಹಿತ್ಲು ಕೆರೆ, ಹೆಮ್ಮುಂಜೆ ಮದಗ, ಹೆಬ್ಟಾರ್‌ಕೆರೆ, ಚುಂಗಿಗುಡ್ಡೆ ಕೆರೆ, ಬಡಿನಮಕ್ಕಿ ಮದಗ, ಅಂಗಡಿಬೆಟ್ಟು ಕೆರೆ, ಶೇಡಿಗುಂಡಿ ಮದಗ, ಜೋಯಿಸರಬೆಟ್ಟು ಮದಗ, ಶೇಡುRಳಿ ಮದಗ, ಪಾತನಮಕ್ಕಿ ಮದಗಗಳ ಪುನಶ್ಚೇತನ ಆಗಬೇಕಿದೆ.

ನೀರಿನ ಸಮಸ್ಯೆಗೆ ಮುಕ್ತಿ
ಗೋರ್ಕಲ್ಲುಮನೆ ಕೆರೆ ಅಭಿವೃದ್ಧಿಯಾದರೆ ಈ ಭಾಗದ ನೀರಿನ ಸಮಸ್ಯೆ ಬಹುತೇಕ ನೀಗಲಿದೆ. ಅನೇಕ ಬಾರಿ ಈ ಕೆರೆಯ ಅಭಿವೃದ್ಧಿಗಾಗಿ ಸಂಬಂಧಪಟ್ಟ ಎಲ್ಲರನ್ನೂ ಆಗ್ರಹಿಸಿದ್ದೇವೆ. ಆದರೆ ಅಭಿವೃದ್ಧಿಗೆ ಯಾವುದೇ ಯೋಜನೆ ರೂಪಿಸಿಲ್ಲ. ಈಗಲಾದರೂ ಪುನಶ್ಚೇತನಗೊಳಿಸಿದರೆ ಕೃಷಿಗೆ, ಕುಡಿಯುವ ನೀರಿಗೂ ಪ್ರಯೋಜನವಾಗಲಿದೆ.
– ಶೀಲಾವತಿ ಪಡುಕೋಣೆ,
ಸ್ಥಳೀಯರು

ಅಭಿವೃದ್ಧಿಗೆ ಪ್ರಯತ್ನ
ಗೋರ್ಕಲ್ಲುಮನೆ ಕೆರೆ ನಮ್ಮ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವುದಿಲ್ಲ. ಸ್ಥಳೀಯ ಪಂಚಾಯತ್‌ನಿಂದ ಪ್ರಸ್ತಾವನೆ ಸಲ್ಲಿಸಿದರೆ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು.
– ಅರುಣ್‌ ಭಂಡಾರಿ,
ಎಇಇ,ಸಣ್ಣ ನೀರಾವರಿ ಇಲಾಖೆ ಉಡುಪಿ

- ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Udupi ಕರ್ಕಶ ಹಾರ್ನ್: ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

Udupi ಕರ್ಕಶ ಹಾರ್ನ್: ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.