![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 8, 2021, 7:55 AM IST
ಸಿದ್ದಾಪುರ :ಅಲ್ಬಾಡಿಯಿಂದ ಬೆಳ್ವೆ ಕಡೆಗೆ ಬರುತ್ತಿರುವ ಸ್ಕೂಟಿ ಬೆಳ್ವೆ ಜುಮ್ಮಾ ಮಸೀದಿ ಸಮೀಪದಲ್ಲಿ ಮೋರಿಗೆ ಢಿಕ್ಕಿ ಹೊಡೆದ ಅಪಘಾತ ದಲ್ಲಿ ಯುವಕರಿಬ್ಬರು ಮೃತಪಟ್ಟಿದ್ದಾರೆ. ಮತ್ತೋರ್ವ ಯುವಕ ಗಂಭೀರ ವಾಗಿ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳ್ವೆ ನಿವಾಸಿ ನಾಗರಾಜ್ (17), ನಾಲ್ಕೂರು ಗ್ರಾಮದ ಮುದ್ದೂರು ನಿವಾಸಿ ಪ್ರಜ್ವಲ್(21) ಮೃತಪಟ್ಟ ಯುವಕರು. ಗಂಭೀರವಾಗಿ ಗಾಯಗೊಂಡ ಮತ್ತೋರ್ವ ಯುವಕ ತೀರ್ಥಹಳ್ಳಿ ಮೂಲದ ಹಿಲಿಯಾಣ ನಿವಾಸಿ ವಿನಯ (20) ಅವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯುವಕರು ಸ್ಕೂಟಿಯಲ್ಲಿ ಅಲಾºಡಿ ಯಿಂದ ಬೆಳ್ವೆ ಕಡೆಗೆ ಬರುತ್ತಿದ್ದರು. ಬೆಳ್ವೆ ಜುಮ್ಮಾ ಮಸೀದಿ ಸಮೀಪ ರಸ್ತೆಯ ಮೋರಿಗೆ ಸ್ಕೂಟಿ ಢಿಕ್ಕಿ ಹೊಡೆದಿದೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬೆಳ್ವೆ ನಿವಾಸಿ, ಮೃತ ಯುವಕ ನಾಗರಾಜ್ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಗೋಳಿಯಂಗಡಿ ಯಲ್ಲಿ ಅಂಗಡಿ ಹೊಂದಿರುವ ಬೆಳ್ವೆ ಅಂಚೆ ಕಚೇರಿ ಬಳಿಯ ನಿವಾಸಿ ಗೋಪಾಲ ಮಡಿವಾಳ ಹಾಗೂ ಪಾರ್ವತಿ ದಂಪತಿಯ ಮೂವರು ಮಕ್ಕಳಲ್ಲಿ ಹಿರಿಯವನು. ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ನಾಲ್ಕೂರು ಗ್ರಾಮದ ಮುದ್ದೂರು ನಿವಾಸಿ ಪ್ರಜ್ವಲ್ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾನೆ. ಮೂದ್ದೂರು ಚಂದ್ರ ಮಡಿವಾಳ ಹಾಗೂ ಸುಶೀಲಾ ದಂಪತಿಯ ಹಿರಿಯ ಮಗನಾಗಿದ್ದು, ಸಹೋದರನನ್ನು ಅಗಲಿದ್ದಾರೆ. ಈತನ ತಂದೆ ಬೆಂಗಳೂರಿನಲ್ಲಿ ಕ್ಯಾಟರಿಂಗ್ ಸರ್ವೀಸ್ನಲ್ಲಿ ಕೆಲಸ ಮಾಡುತ್ತಿದ್ದಾರೆ.
ಗಾಯಾಳು ವಿನಯ ಹಿಲಿಯಾಣ ನಿವಾಸಿಯಾಗಿರುವ ತೀರ್ಥಹಳ್ಳಿ ಮೂಲದ ಉಮೇಶ ಮಡಿವಾಳ ಮತ್ತು ಚಂದ್ರಾವತಿ ದಂಪತಿಯ ಮಗ. ಈತ ಹಿಲಿಯಾಣದಲ್ಲಿ ತಾಯಿಯ ಮನೆಯಲ್ಲಿದ್ದು, ಕೆಲಸಕ್ಕೆ ಹೋಗುತ್ತಿದ್ದ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.