ಆತಂಕ ಸೃಷ್ಟಿಸಿದ ಜಲಸಿರಿ ಕುಡಿಯುವ ನೀರು


Team Udayavani, Sep 19, 2022, 11:49 AM IST

8

ಕುಂದಾಪುರ: ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲೊಂದಾದ 24 ತಾಸು ನಿರಂತರ ಕುಡಿಯುವ ನೀರು ಸರಬರಾಜು ಯೊಜನೆ ಯಡಿಯಲ್ಲಿ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರು ಶುಚಿಯಾಗಿಲ್ಲ ಎಂಬ ಆಪಾದನೆ ಕೇಳಿ ಬರುತ್ತಿದೆ. ನಗರದ ಕೆಲವು ಭಾಗದಲ್ಲಿ ಸರಬರಾಜಾಗುತ್ತಿರುವ ನೀರು ನಾಗರಿಕರ ಆತಂಕಕ್ಕೆ ಕಾರಣವಾಗಿದೆ.

ಪುರಸಭೆ ವ್ಯಾಪ್ತಿಯಲ್ಲಿನ ಚಿಕನ್‌ ಸಾಲ್‌, ಸಂಗಮ್‌ ರಸ್ತೆಯಲ್ಲಿನ ಮನೆಗಳಲ್ಲಿ ಜಲಸಿರಿಯ ಕುಡಿಯುವ ನೀರು ಕುಡಿಯಲು ಯೋಗ್ಯವಲ್ಲ ಎನ್ನುವ ಅನುಮಾನ ಆರಂಭವಾಗಿದೆ. ನಲ್ಲಿಗಳಲ್ಲಿ ಸರಬರಾಜಾಗುವ ನೀರು ಸಾಬೂನಿನ ನೊರೆಯಂತೆ ತೋರುತ್ತಿದ್ದು, ಸ್ವಲ್ಪ ಸಮಯದ ಅನಂತರ ನೊರೆ ಮಾಯವಾಗುತ್ತದೆ. ಹೀಗೆ ಸರಬರಾಜಾದ ಕುಡಿಯುವ ನೀರು ಶುದ್ಧವೋ, ಅಶುದ್ಧವೋ ಎಂಬ ಪ್ರಶ್ನೆ ಸಾರ್ವಜನಿಕರದ್ದು. ಸಾವಜನಿಕರು ನೀರಿನಲ್ಲಾಗುವ ಬದಲಾವಣೆಗಳನ್ನು ಗಮನಿಸಿ ಆತಂಕಗೊಂಡು ಕಳವಳ ವ್ಯಕ್ತಪಡಿಸಿದ್ದು, ಈ ಕಲುಷಿತ ನೀರಿನ ಸೇವನೆಯಿಂದ ಅನೇಕರಿಗೆ ಆರೋಗ್ಯದಲ್ಲಿ ಏರುಪೇರು ಆಗಿ ಈಗಾಗಲೇ ಅನಾರೋಗ್ಯ ಕಾಣಿಸಿಕೊಂಡಿದೆ ಎಂದೂ ಹೇಳುತ್ತಾರೆ.

ನೀರಿನ ಗುಣಮಟ್ಟವನ್ನು ಪ್ರತಿ ಹಂತದಲ್ಲೂ ಪರೀಕ್ಷಿಸಿ ಸರಬರಾಜು ಮಾಡಲಾಗುತ್ತದೆ ಎನ್ನುವುದು ಈ ಯೋಜನೆಯ ಮುಖ್ಯ ಆಶ್ವಾಸನೆ. ಈ ನಿಟ್ಟಿನಲ್ಲಿ ಯೋಜನೆಯನ್ನು ನಿರ್ವಹಣೆ ಮಾಡುವ ಸಂಸ್ಥೆ ಈ ಕುರಿತು ಪರಿಶೀಲನೆ ನಡೆಸಬೇಕಿದೆ. ಸಾರ್ವಜನಿಕರ ಸಂಶಯ ನಿವಾರಿಸಬೇಕಿದೆ.

ಈ ಕಲುಷಿತ ನೀರು ಕುಡಿದು ಅನೇಕರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು ತತ್‌ಕ್ಷಣ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಂತೆ ಸಂಬಂಧ ಅಧಿ ಕಾರಿಗಳು ಕ್ರಮ ಕೈಗೊಳ್ಳಬೇಕು. ಅಧಿ ಕಾರಿಗಳು ಎಚ್ಚೆತ್ತುಕೊಂಡು ನೀರನ್ನು ಪರಿಶೀಲಿಸಿ (ಪರೀಕ್ಷಿಸಿ) ಕುಡಿಯಲು ಯೋಗ್ಯವಾಗಿದ್ದಲ್ಲಿ ಮಾತ್ರ ನೀರನ್ನು ಸರಬರಾಜು ಮಾಡಿ. ಜನರ ಆರೋಗ್ಯವನ್ನು ಕಾಪಾಡಿ. -ಕೋಡಿ ಅಶೋಕ್‌ ಪೂಜಾರಿ, ಸಾಮಾಜಿಕ ಕಾರ್ಯಕರ್ತರು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.