K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ
Team Udayavani, Sep 27, 2024, 9:34 AM IST
ಕುಂದಾಪುರ : ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ಶುಕ್ರವಾರ(ಸೆ. ೨೭) ಬೆಳಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು.
ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು.
ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇವರು 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಅದಕ್ಕೂ ಮೊದಲು ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಸ್ನಾತಕೋತ್ತರ ಪದವಿಧದರಾಗಿರುವ ಇವರು ಉದ್ಯಮಿಯಾಗಿ ಹೆಸರು ಗಳಿಸಿದ್ದರು.
ಇದನ್ನೂ ಓದಿ: MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Arrested: ಬೈಕ್, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ
Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು
Success Story-ಮುನಿಯಾಲ್ To ಅಬುಧಾಬಿ; ಯಶಸ್ವಿ ಹೋಟೆಲ್ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ
Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್ ಎಂದರೇನು?
Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.