Karkala:ಪಶ್ಚಿಮಘಟ್ಟದ ತಪ್ಪಲಿನ ಶಾಲೆಗಳ ಮಕ್ಕಳಲ್ಲಿ ಕಾಡಿನ ಬಗ್ಗೆ ಪ್ರೀತಿ ಮೂಡಿಸುವ ಕಲಾವಿದೆ


Team Udayavani, Sep 18, 2024, 1:29 PM IST

Karkala:ಪಶ್ಚಿಮಘಟ್ಟದ ತಪ್ಪಲಿನ ಶಾಲೆಗಳ ಮಕ್ಕಳಲ್ಲಿ ಕಾಡಿನ ಬಗ್ಗೆ ಪ್ರೀತಿ ಮೂಡಿಸುವ ಕಲಾವಿದೆ

ಕಾರ್ಕಳ: ಪಶ್ಚಿಮ ಘಟ್ಟದ ತಪ್ಪಲಿನ ಮಕ್ಕಳಲ್ಲಿ  ಕಾಡಿನ ಬಗ್ಗೆ ಪ್ರೀತಿ ಉಳಿದರೆ ಮಾತ್ರ ಮುಂದಿನ ದಿನಗಳಲ್ಲಿ  ಅರಣ್ಯ ಉಳಿದೀತು.  ಇದನ್ನು ಮನಗಂಡ ಕಲಾವಿದೆಯೊಬ್ಬರು ಕಾಡಂಚಿನ ಶಾಲೆಗಳ ಮಕ್ಕಳಲ್ಲಿ ಪರಿಸರ ಪ್ರೀತಿ ಹೆಚ್ಚಿಸುವ, ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಕಾಪು ಮೂಲದ ಚಿತ್ರ ಕಲಾವಿದೆಯಾಗಿರುವ  ರಕ್ಷಾ ಪೂಜಾರಿ ಪಶ್ಚಿಮ ಘಟ್ಟಗಳ ಸಾಲಿನ ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಹಳ್ಳಿ ವಿದ್ಯಾರ್ಥಿಗಳಿಗೆ ಚಿತ್ರಕಲೆಯ ಮೂಲಕ ಪರಿಸರದ ಪಾಠ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ. ಆಳ್ವಾಸ್‌ ಕಾಲೇಜಿನಲ್ಲಿ ವಿಷ್ಯುವಲ್‌ ಆರ್ಟ್ಸ್ ನಲ್ಲಿ ಪದವಿ ಪಡೆದ ಇವರು ತಮ್ಮ ಕಾಯಕಕ್ಕೆ ಇಟ್ಟಿರುವ ಹೆಸರು: ವನಗಿರಿಯ ರಂಗು!

ಯಾವ್ಯಾವ ಶಾಲೆಯಲ್ಲಿ  ಜಾಗೃತಿ?
ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಹಿಂದುಳಿದಿರುವ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಚಿತ್ರ ಕಲೆಗಳಲ್ಲಿ  ಆಸಕ್ತಿ ಮೂಡಿಸುವುದು, ಆ ಮೂಲಕ ಪರಿಸರ ಪಾಠ ಹೇಳಿಕೊಡುವುದು  ಇವರ ಉದ್ದೇಶ. ಕುಂದಾಪುರ ತಾ|ನ ಹಾಲಾಡಿಯ ಕೆಳಸುಂಕ ಶಾಲೆಯಲ್ಲಿ ವನಗಿರಿ ರಂಗು ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತ್ತು.

ತಪ್ಪಲಿನ ಊರುಗಳಾದ ಅಮಾವಾಸ್ಯೆಬೈಲು, ಹೆಬ್ರಿ, ನಾಡಾ³ಲು, ಮುದ್ರಾಡಿ, ಕಬ್ಬಿನಾಲೆ, ಮುನಿಯಾಲು, ಮುಟ್ಲುಪಾಡಿ, ಅಂಡಾರು, ಕಾರ್ಕಳ ತಾಲೂಕಿನ ಶಿರ್ಲಾಲು, ಅಜೆಕಾರು ಕೆರುವಾಶೆ, ಮಾಳ, ನೂರಾಳಬೆಟ್ಟು, ನಾರಾವಿ, ಹೊಸ್ಮಾರು, ಬೆಳ್ತಂಗಡಿ ತಾಲೂಕಿನ ಅಳದಂಗಡಿ, ಚಿಕ್ಕಮಗಳೂರಿನ ಕುದುರೆಮುಖ, ಕಳಸ, ಜಾಂಬಳೆ, ಸಂಸೆ, ಹೊರನಾಡು, ಶೃಂಗೇರಿ, ಕೊಗ್ರೆ, ಕಿಗ್ಗ, ಶಿವಮೊಗ್ಗ ಜಿಲ್ಲೆಯ ಆಗುಂಬೆ ಹೊಸನಗರ, ತಾಲೂಕಿನ ಭಾಗಗಳಲ್ಲಿ  ಪ್ರಯಾಣಿಸಿ  ಅಲ್ಲಿನ  ಸರಕಾರಿ ಶಾಲೆಗಳಲ್ಲಿ ಚಿತ್ರಕಲೆಯೊಂದಿಗೆ ಪರಿಸರದ ಪಾಠ ಕಲಿಸಲಿದ್ದಾರೆ.

ಮಗಳ ಈ ಕೆಲಸಕ್ಕೆ ತಂದೆ ರಮೇಶ್‌ ಅವರು ಸಹಕಾರ ನೀಡುತ್ತಿದ್ದಾರೆ. ಆಕೆಯ ಕೆಲಸ ಹೆಮ್ಮೆ ತಂದಿದೆ ಎನ್ನುತ್ತಾರೆ ಅವರು.

ಸ್ವಂತ ಹಣದಿಂದಲೇ ಪರಿಕರ ಖರೀದಿ
ರಕ್ಷಾ ಪೂಜಾರಿ ಅವರು  ಬೆಂಗಳೂರು, ಕೋಲ್ಕತ್ತಾ ಸೇರಿದಂತೆ ದೇಶದ ಹಲವೆಡೆ ಕಲಾಕೃತಿಗಳ ಪ್ರದರ್ಶನ ನೀಡಿದ್ದಾರೆ. ವಿವಿಧ ಕಲಾಕೃತಿ  ರಚಿಸಿ ಮಾರಾಟ ಮಾಡುತ್ತಾರೆ. ಆಯಿಲ್‌ ಪೈಂಟಿಂಗ್‌, ವಾಲ್‌ ಮ್ಯೂರಲ್ಸ…, ವಾಲ್‌ ಪೈಂಟಿಂಗ್‌ಗಳಲ್ಲಿ ಅನುಭವಿಗಳು. ಇವರು ವಿದ್ಯಾರ್ಥಿಗಳಿಗೆ ಚಿತ್ರಕಲೆ ಗಳಿಗೆ ಬೇಕಾದ ಪರಿಕರಗಳನ್ನು  ಸ್ವಂತ ಖರ್ಚಿನಿಂದಲೇ ಒದಗಿಸುತ್ತಿದ್ದಾರೆ.

ಚಿತ್ರ, ಫೋಟೊಗಳ ಮೂಲಕ ಜಾಗೃತಿ
ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲೆ ಹಾಗೂ ಕಲಾಕೃತಿಗಳನ್ನು ತಯಾರಿಸುವ ಕಾರ್ಯಾಗಾರ ಮಾಡುತ್ತಾರೆ ರಕ್ಷಾ. ಇದು ಮಕ್ಕಳ ಮನೋವಿಕಾಸ, ಕಲ್ಪನಾ ಶಕ್ತಿ ಹೆಚ್ಚಿಸಲು ಸಹಕಾರಿ ಆಗುವುದರ ಜತೆಗೆ ಪರಿಸರದ ಮೇಲೆ ಪ್ರೀತಿಯನ್ನು ಹೊಂದುತ್ತದೆ ಎನ್ನುವುದು ಅವರು ಕಂಡುಕೊಂಡ ಸತ್ಯ.  ಸಾಸ್ತಾನದ ವನ್ಯಜೀವಿ ಛಾಯಾಗ್ರಾಹಕ ಮನೋಜ್‌ ಭಂಡಾರಿ ತೆಗೆದಿರುವ ವಿವಿಧ ಕಾಡು ಪ್ರಾಣಿ ಪಕ್ಷಿಗಳ ಚಿತ್ರಗಳನ್ನೂ ವಿದ್ಯಾರ್ಥಿ ಗಳಿಗೆ ತೋರಿಸಲಾಗುತ್ತಿದೆ.  ಪರಿಸರ ಸಂರಕ್ಷಣೆ ಸಂಬಂಧಿತ  ಪ್ರಬಂಧಗಳನ್ನೂ ಬರೆಸಲಾಗುತ್ತದೆ.

ಹೆತ್ತವರೇ ಸ್ಫೂರ್ತಿ
ಕಲೆಯ ಬಗ್ಗೆ ನನಗೆ ಎಳವೆ ಯಿಂದಲೂ ಆಸಕ್ತಿ. ಹೆತ್ತವರೇ ನನಗೆ ಸ್ಫೂರ್ತಿ. ಸ್ನೇಹಿತರ ಪ್ರೋತ್ಸಾಹದಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ  ಕಲಾ ಪ್ರದರ್ಶನ ನೀಡಲು ಸಾಧ್ಯವಾಗಿದೆ. ರಾಜ್ಯದ 80ಕ್ಕೂ ಹೆಚ್ಚು ಕಡೆ ಸಂಚರಿಸಿ ಶಿಬಿರ ಏರ್ಪಡಿಸಿದ್ದೇನೆ. ಮುಂದೆ ಹಳ್ಳಿಯ ಶಾಲೆಗಳಲ್ಲಿ ಜಾಗೃತಿ ಮೂಡಿಸಿ ವಿಸ್ತರಿಸಲಾಗುವುದು.
-ರಕ್ಷಾ ಪೂಜಾರಿ, ಚಿತ್ರಕಲಾವಿದೆ

– ಬಾಲಕೃಷ್ಣ ಭೀಮಗುಳಿ 

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

ಗಂಗೊಳ್ಳಿ: ಉಸಿರಾಟದ ತೊಂದರೆಯಿಂದ ಮೀನುಗಾರ ಸಾವು

Gangolli: ಉಸಿರಾಟದ ತೊಂದರೆಯಿಂದ ಮೀನುಗಾರ ಸಾವು

Kundapura: ಜಾಲತಾಣದಿಂದಾಗಿ ಲೈಂಗಿಕ ದೌರ್ಜನ್ಯ ಹೆಚ್ಚಳ

Kundapura: ಜಾಲತಾಣದಿಂದಾಗಿ ಲೈಂಗಿಕ ದೌರ್ಜನ್ಯ ಹೆಚ್ಚಳ

Accident-Logo

Kundapura: ಖಾಸಗಿ ಬಸ್‌ಗಳ ಢಿಕ್ಕಿ: 7 ಮಂದಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.