Karkala: ಪರಪಾಡಿ ಸೇತುವೆ ಬಳಿ ನಿತ್ಯವೂ ಪರದಾಟ

ರಸ್ತೆ ಎರಡೂ ಬದಿ ಹದಗೆಟ್ಟಿದೆ; ಬಾಕಿ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

Team Udayavani, Oct 14, 2024, 3:20 PM IST

6

ಸಂಪೂರ್ಣ ಹದಗೆಟ್ಟ ಪರಪಾಡಿ-ಬಾರಾಡಿ ಚಿಲಿಂಬಿ ರಸ್ತೆ.

ಕಾರ್ಕಳ: ಕಾಂಕ್ರೀಟ್‌ ರಸ್ತೆ ನಿರ್ಮಾಣವಾದರೂ ಸೇತುವೆಯ ಸಮೀಪದ ಎರಡು ಬದಿಯಲ್ಲಿ ರಸ್ತೆ ಸರಿಯಾಗಿಲ್ಲದ ಕಾರಣ ನಿಟ್ಟೆ ಪರಪಾಡಿ ಸೇತುವೆ ಮೂಲಕ ಸಾಗುವ ವಾಹನ ಸವಾರರು ಸಂಚಾರದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎರಡೂ ಬದಿ ರಸ್ತೆ ಸುಸ್ಥಿತಿಗೊಳಿಸಿ ಸಮಸ್ಯೆ ನಿವಾರಿಸುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ.

ನಿಟ್ಟೆ ಗ್ರಾಮದ ಪರಪಾಡಿಯಿಂದ ಬಾರಾಡಿ ಚಿಲಿಂಬಿ (ಅಕ್ಷರಾಪುರ) ಈ ಕಡೆಗೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟಿತು. 2020ರಲ್ಲಿ ಸುಮಾರು 5 ಕೋ.ರೂ. ವೆಚ್ಚದಲ್ಲಿ 4.20.ಕಿ.ಮೀ. ಉದ್ದದ ಕಾಂಕ್ರೀಟ್‌ ರಸ್ತೆಯನ್ನು ಇಲ್ಲಿ ನಿರ್ಮಿಸಲಾಗಿದೆ. ಅತ್ತ ಮತ್ತೂಂದು ಬದಿಯಲ್ಲಿ ಪರಪಾಡಿ ಸೇತುವೆಯ ಸಮೀಪದ ವರೆಗೆ ಕಾಂಕ್ರೀಟ್‌ ರಸ್ತೆ ಕೂಡ ಮಾಡಲಾಗಿದೆ. ಆದರೆ ಪರಪಾಡಿ ಸೇತುವೆ ಸಂಪರ್ಕಿಸುವ ಎರಡೂ ಬದಿಯಲ್ಲಿ ಸುಮಾರು ನೂರು ಮೀಟರ್‌ ಉದ್ದದ ರಸ್ತೆಯನ್ನು ಇನ್ನೂ ಕಾಂಕ್ರೀಟ್‌ ಅಥವಾ ಡಾಮರೀಕರಣಗೊಳಿಸಿಲ್ಲ. ಇದರಿಂದಾಗಿ ವಾಹನ ಸಂಚಾರದ ವೇಳೆ ಸವಾರರು, ಪಾದಚಾರಿಗಳು ಇಲ್ಲಿ ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ.

ಸೇತುವೆ ಸಂಪರ್ಕಕ್ಕೆ ಕಾಂಕ್ರೀಟ್‌ ಅವಶ್ಯ
ಪರಪಾಡಿಯ ಸೇತುಯ ಬಳಿ ತಿರುವಿನಿಂದ ಕೂಡಿದೆ. ಎರಡೂ ಬದಿಯಲ್ಲಿ ಇಳಿಜಾರಿನಿಂದ ಕೂಡಿದ ರಸ್ತೆಯಾಗಿದ್ದು ಕಾಂಕ್ರೀಟ್‌ನಿಂದ ಕೂಡಿದ ಸುಂದರ ರಸ್ತೆಯಲ್ಲಿ ವೇಗವಾಗಿ ಸಾಗಿ ಬರುವ ವಾಹನ ಸವಾರರು ಸೇತುವೆ ಬಳಿ ಬರುತ್ತಿದ್ದಂತೆ ಹೊಂಡ ಗುಂಡಿಯಿಂದ ಕೂಡಿದ ರಸ್ತೆಯಿಂದ ಸಮಸ್ಯೆಯನ್ನು ಎದುರಿಸುವಂತಾಗಿದೆ. ಈಗಾಗಲೇ ಸಾಕಷ್ಟು ಬೈಕ್‌ ಸವಾರರು ಬಿದ್ದು ಗಾಯಗೊಂಡ ಘಟನೆಗಳು ಇಲ್ಲಿ ನಡೆದಿದೆ. ಎರಡೂ ಬದಿಯಲ್ಲಿ ರಸ್ತೆಯ ಕಾಮಗಾರಿ ನಡೆಸಿ ಸುಮಾರು 100 ಮೀ.ನಷ್ಟು ಮಾತ್ರ ಯಾಕಾಗಿ ಬಾಕಿ ಇಟ್ಟರು ಎನ್ನುವುದು ಗ್ರಾಮಸ್ಥರ ಪ್ರಶ್ನೆಯಾಗಿದೆ.

ಸೇತುವೆಯೂ ಶಿಥಿಲಾವಸ್ಥೆಗೆ
ಪರಪಾಡಿಯಲ್ಲಿ ಹರಿಯುವ ಶಾಂಭವಿ ನದಿಯನ್ನು ದಾಟಿಕೊಂಡು ಹೋಗಲು ಪರಪಾಡಿ ಸೇತುವೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಚಿಲಿಂಬಿ, ಬಾರಾಡಿ, ಪೆಲತ ಕಟ್ಟೆ, ಹೀಗೆ ಅನೇಕ ಗ್ರಾಮೀಣ ಭಾಗದ ಜನ ನಿತ್ಯ ಈ ಸೇತುವೆಯಲ್ಲೇ ಸಂಚಾರ ನಡೆಸುತ್ತಾರೆ. ಕಳೆದ ಹಲವು ದಶಕದ ಹಿಂದೆ ನಿರ್ಮಾಣಗೊಂಡ ಈ ಸೇತುವೆ ಇದೀಗ ಸಂಪೂರ್ಣ ಶಿಥಿಲ ವ್ಯವಸ್ಥೆಯಲ್ಲಿದೆ. ಸೇತುವೆಯ ತಳದಲ್ಲಿ ಹಾಗೂ ಮೇಲ್ಭಾಗದಲ್ಲಿ ಅಲ್ಲಲ್ಲಿ ಸಿಮೆಂಟ್‌ ಸ್ಲ್ಯಾಬ್‌ಗಳು ಎದ್ದು ಕಬ್ಬಿಣದ ರಾಡುಗಳು ಗೋಚರಿಸುತ್ತಿದೆ. ಅಲ್ಲದೆ ಸೇತುವೆಯ ಮೇಲ್ಭಾಗದಲ್ಲಿ ಸೇತುವೆಯುದ್ದಕ್ಕೂ ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿದೆ. ತಡೆಗೋಡೆಯೂ ವಾಹನದ ಆರ್ಭಟಕ್ಕೆ ಅಲ್ಲಲ್ಲಿ ಕಿತ್ತು ಹೋಗುತ್ತಿದೆ. ಅಪಾಯಕಾರಿಯಾಗಿರುವ ಸೇತುವೆ ದುರಸ್ತಿ ಕಾರ್ಯವೂ ನಡೆಯಬೇಕಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಘನ ವಾಹನದಿಂದ ಸಮಸ್ಯೆ ಉಲ್ಬಣ
ಈ ಭಾಗದಲ್ಲಿ ಬಹುತೇಕ ಕಲ್ಲು ಕೋರೆಗಳು ಹಾಗೂ ಕ್ರಷರ್‌ಗಳು ಕಾರ್ಯಾಚರಿಸುತ್ತಿದ್ದು ಪರಪಾಡಿ ಸೇತುವೆಯನ್ನು ದಾಟಿಕೊಂಡು ನಿತ್ಯ ನೂರಾರು ಘನ ವಾಹನಗಳು ಸಾಗುತ್ತವೆೆ. ಶಿಥಿಲ ವ್ಯವಸ್ಥೆಯಲ್ಲಿರುವ ಸೇತುವೆಯೂ ಕುಸಿಯುವ ಭೀತಿ ಎದುರಾಗಿದೆ. ಅತ್ಯಲ್ಪ ದೂರದ ಈ ರಸ್ತೆಯ ಕಾಮಗಾರಿ ಯಾವಾಗ ನಡೆಯುತ್ತದೆ ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ. ರಸ್ತೆ ನಿರ್ಮಾಣವಾಗಿ ಹಲವು ವರ್ಷಗಳು ಸಂದರೂ ಬಾಕಿ ಉಳಿದಿರುವ ರಸ್ತೆಯ ಕಾಮಗಾರಿ ನಡೆಸುವ ಬಗ್ಗೆ ಸಂಬಂಧಪಟ್ಟವರು ಮನಸ್ಸು ಮಾಡುತಿಲ್ಲ ಎನ್ನುತ್ತಿದ್ದಾರೆ ಸ್ಥಳಿಯ ನಿವಾಸಿಗಳು.

ಕಾಮಗಾರಿ ಪೂರ್ಣಗೊಳಿಸಿ
ಸೇತುವೆಯ ಎರಡೂ ಬದಿಯಲ್ಲಿ ರಸ್ತೆಯ ಕಾಮಗಾರಿ ನಡೆದಿಲ್ಲ. ಹೀಗಾಗಿ ದ್ವಿಚಕ್ರ ವಾಹನ ಸವಾರರು ನಿತ್ಯ ಸಮಸ್ಯೆಯನ್ನು ಎದುರಿಸುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ರಸ್ತೆಯ ಕಾಮಗಾರಿ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳ ಬೇಕಾಗಿದೆ.
-ಸುಪ್ರಿಯಾ, ಸಂದೀಪ್‌, ಸ್ಥಳೀಯರು

ಟಾಪ್ ನ್ಯೂಸ್

1-shahsi

Modi ಮಾನನಷ್ಟ ಕೇಸ್‌: ತರೂರ್‌ ವಿಚಾರಣೆಗೆ ತಡೆಯಾಜ್ಞೆ 4 ವಾರ ವಿಸ್ತರಿಸಿದ ಸುಪ್ರೀಂ

Ballari-Cm

Ballari: ಸರಕಾರದ ಬಳಿ ಹಣವಿಲ್ಲವೆಂದು ಬಿಜೆಪಿಯ ಪೆದ್ದ ಶಿಖಾಮಣಿಗಳಿಂದಷ್ಟೇ ಅಪಪ್ರಚಾರ: ಸಿಎಂ

Belagavi: ಪಂಚಮಸಾಲಿ ಮೀಸಲಾತಿ ಚರ್ಚೆಗೆ ಸಭೆ ನಿಗದಿ ಮಾಡದ ಸಿಎಂ ವಿರುದ್ದ ಸ್ವಾಮೀಜಿ ಆಕ್ರೋಶ

0004

Renukaswamy Case; ದರ್ಶನ್,ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ: ಜೈಲೇ ಗತಿ

Bantwal: ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಶಿವಣ್ಣ ದಂಪತಿ

Bantwal: ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಶಿವಣ್ಣ ದಂಪತಿ

Kambala: ನ. 27ಕ್ಕೆ ಶಿರ್ವ ನಡಿಬೆಟ್ಟು ಸೂರ್ಯ -ಚಂದ್ರ ಜೋಡುಕೆರೆ ಕಂಬಳ

Kambala: ನ. 27ಕ್ಕೆ ಶಿರ್ವ ನಡಿಬೆಟ್ಟು ಸೂರ್ಯ -ಚಂದ್ರ ಜೋಡುಕೆರೆ ಕಂಬಳ

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala: ನ. 27ಕ್ಕೆ ಶಿರ್ವ ನಡಿಬೆಟ್ಟು ಸೂರ್ಯ -ಚಂದ್ರ ಜೋಡುಕೆರೆ ಕಂಬಳ

Kambala: ನ. 27ಕ್ಕೆ ಶಿರ್ವ ನಡಿಬೆಟ್ಟು ಸೂರ್ಯ -ಚಂದ್ರ ಜೋಡುಕೆರೆ ಕಂಬಳ

8(1)

Santhekatte: ಪರ್ಯಾಯ ರಸ್ತೆಯೂ ಸಮಸ್ಯೆಗಳ ಆಗರ

Udupi: ಅ. 24 ರಿಂದ ಮೂರೂ ದಿನಗಳ ಕಾಲ ಶ್ರೀ ಕೃಷ್ಣನ ಉಡುಪಿಯಲ್ಲಿ ಜ್ಞಾನದ ಹಬ್ಬ

Udupi: ಅ. 24 ರಿಂದ ಮೂರೂ ದಿನಗಳ ಕಾಲ ಶ್ರೀ ಕೃಷ್ಣನ ಉಡುಪಿಯಲ್ಲಿ ಜ್ಞಾನದ ಹಬ್ಬ

5

Hosadu: 4 ವರ್ಷಗಳಿಂದ ಸ್ಥಳೀಯ ಸರಕಾರವೇ ಇಲ್ಲ!

ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

Udupi: ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-shahsi

Modi ಮಾನನಷ್ಟ ಕೇಸ್‌: ತರೂರ್‌ ವಿಚಾರಣೆಗೆ ತಡೆಯಾಜ್ಞೆ 4 ವಾರ ವಿಸ್ತರಿಸಿದ ಸುಪ್ರೀಂ

Abhimanyu Son of Kashinath movie

Abhimanyu Son of Kashinath; ಕಾಶೀನಾಥ್‌ ಮಗನ ಹೊಸ ಸಿನಿಮಾ

Ballari-Cm

Ballari: ಸರಕಾರದ ಬಳಿ ಹಣವಿಲ್ಲವೆಂದು ಬಿಜೆಪಿಯ ಪೆದ್ದ ಶಿಖಾಮಣಿಗಳಿಂದಷ್ಟೇ ಅಪಪ್ರಚಾರ: ಸಿಎಂ

Belagavi: ಪಂಚಮಸಾಲಿ ಮೀಸಲಾತಿ ಚರ್ಚೆಗೆ ಸಭೆ ನಿಗದಿ ಮಾಡದ ಸಿಎಂ ವಿರುದ್ದ ಸ್ವಾಮೀಜಿ ಆಕ್ರೋಶ

0004

Renukaswamy Case; ದರ್ಶನ್,ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ: ಜೈಲೇ ಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.