ಕಟ್‌ಬೆಲ್ತೂರು ಗ್ರಾ.ಪಂ. ಕಟ್ಟಡ ಪೂರ್ಣಗೊಂಡರೂ ಉದ್ಘಾಟನೆಗೆ ಮೀನಮೇಷ

ವಿಳಂಬವಾಗಲು ಪಂಚಾಯತ್‌ ವ್ಯಾಪ್ತಿಯ ಸ್ಥಳೀಯ ರಾಜಕೀಯ ಕಾರಣ ಎನ್ನುವ ಆರೋಪಗಳಿವೆ.

Team Udayavani, Aug 10, 2023, 1:26 PM IST

ಕಟ್‌ಬೆಲ್ತೂರು ಗ್ರಾ.ಪಂ. ಕಟ್ಟಡ ಪೂರ್ಣಗೊಂಡರೂ ಉದ್ಘಾಟನೆಗೆ ಮೀನಮೇಷ

ಕುಂದಾಪುರ: ಸುಮಾರು 6 ವರ್ಷಗಳ ಹಿಂದೆ ಆರಂಭಗೊಂಡ ಕಟ್‌ಬೆಲ್ತೂರು ಗ್ರಾ.ಪಂ.ನ ಕಟ್ಟಡದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪೀಠೊಪಕರಣ ಜೋಡಣೆ ಸಹಿತ ಒಂದಷ್ಟು ಸಣ್ಣ- ಪುಟ್ಟ ಕಾಮಗಾರಿಗಳಷ್ಟೇ ಬಾಕಿಯಿದೆ. ಆದರೂ ಉದ್ಘಾಟನೆಗೆ ಮಾತ್ರ ಇನ್ನೂ ಕಾಲ ಕೂಡಿ ಬಂದಿಲ್ಲ. ಹೆಮ್ಮಾಡಿಯಿಂದ ಬೇರ್ಪಟ್ಟ ಕಟ್‌ಬೆಲೂ¤ರು ಹಾಗೂ ದೇವಲ್ಕುಂದ ಗ್ರಾಮವನ್ನೊಳಗೊಂಡ ಹೊಸ ಪಂಚಾಯತ್‌ ಆಗಿ 2014-15ನೇ ಸಾಲಿನಲ್ಲಿ ರಚನೆಗೊಂಡಿತು.

ಆಗ ದೇವಲ್ಕುಂದದಲ್ಲಿರುವ ಸಮುದಾಯ ಭವನದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಗ್ರಾ.ಪಂ. ಕಚೇರಿ ಆರಂಭಗೊಂಡಿತು. 2021ರಲ್ಲಿ ಕಟ್‌ಬೆಲ್ತೂರಿನಲ್ಲಿರುವ ಗ್ರಾಮ ವಿಕಾಸ ಯೋಜನೆಯಡಿ ನಿರ್ಮಾಣಗೊಂಡ ಸಮುದಾಯ ಭವನದಲ್ಲಿ ಗ್ರಾ.ಪಂ.ಕಚೇರಿ ಕಾರ್ಯಾಚರಿಸುತ್ತಿದೆ. ಇದೇ ಭವನದ ಪಕ್ಕದಲ್ಲಿಯೇ ಗ್ರಾ.ಪಂ. ಕಚೇರಿ ಕಟ್ಟಡ ನಿರ್ಮಾಣಕ್ಕೆ 2016 ರಲ್ಲಿ ಚಾಲನೆ ನೀಡಲಾಗಿತ್ತು.

ಸ್ಥಳೀಯ ರಾಜಕೀಯದಿಂದ ವಿಳಂಬ?
ಪಂಚಾಯತ್‌ನ ನೂತನ ಕಚೇರಿಯ ಕಟ್ಟಡ ಕಾಮಗಾರಿ ಆರಂಭಗೊಂಡು ಸರಿ ಸುಮಾರು 6 ವರ್ಷಗಳೇ ಕಳೆದಿದೆ. ಪಂಚಾಯತ್‌ ಹಾಗೂ ಉದ್ಯೋಗ ಖಾತರಿಯ ಅನುದಾನದಡಿ ಒಟ್ಟು ಅಂದಾಜು 25 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ 2016-17ನೇ ಸಾಲಿನಲ್ಲಿ ಶಿಲಾನ್ಯಾಸ ನೆರವೇರಿಸಲಾಗಿತ್ತು. ಆ ಬಳಿಕ ಕೆಲವು ವರ್ಷ ಸ್ಥಗಿತಗೊಂಡು, 2019ರಲ್ಲಿ ಮತ್ತೆ ಕಾಮಗಾರಿ ಆರಂಭಗೊಂಡಿತ್ತು.

ಈಗ ಕಟ್ಟಡದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಕಚೇರಿಯೊಳಗಿನ ಪೀಠೊಪಕರಣ ಜೋಡಣೆ ಕಾರ್ಯ ಬಾಕಿಯಿದೆ. ಕಟ್ಟಡ ಕಾಮಗಾರಿ ಇಷ್ಟು ವರ್ಷ ವಿಳಂಬವಾಗಲು ಪಂಚಾಯತ್‌ ವ್ಯಾಪ್ತಿಯ ಸ್ಥಳೀಯ ರಾಜಕೀಯ ಕಾರಣ ಎನ್ನುವ ಆರೋಪಗಳಿವೆ.

ಈ ಪಂಚಾಯತ್‌ ಕಚೇರಿಯ ಕಟ್ಟಡ ನಿರ್ಮಾಣ ಕಾಮಗಾರಿ ನಮ್ಮ ಆಡಳಿತಾವಧಿಯಲ್ಲಿ ಅಂದರೆ 6 ವರ್ಷಗಳ ಹಿಂದೆಯೇ ಆರಂಭವಾಗಿತ್ತು. ಆದರೆ ಕೆಲವೊಂದು ಕಾರಣಗಳಿಂದ ವಿಳಂಬ ಆಗಿದೆ. ಅಂತೂ ಇಂತೂ ಈಗ ಕೊನೆಯ ಹಂತಕ್ಕೆ ಬಂದಿದೆ. ಈ ತಿಂಗಳ ಕೊನೆಯ ವೇಳೆಗೆ ಉದ್ಘಾಟನೆಯಾಗಬಹುದು ಎನ್ನುವುದಾಗಿ ಕಟ್‌ಬೆಲ್ತೂರು ಮಾಜಿ ಉಪಾಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ ತಿಳಿಸಿದ್ದಾರೆ.

ಸಂಪರ್ಕ ರಸ್ತೆ ಕೆಸರುಮಯ
ಹೊಸ ಕಟ್ಟಡ ಹಾಗೂ ಈಗಿರುವ ಪಂಚಾಯತ್‌ ಕಚೇರಿಯನ್ನು ಸಂಪರ್ಕಿಸುವ ಸುಮಾರು 500 ಮೀ. ದೂರದ ಮಣ್ಣಿನ ರಸ್ತೆಯು ಈಗ ಸಂಪೂರ್ಣ ಕೆಸರುಮಯ ಆಗಿದೆ. ಇದರಿಂದ ಇಲ್ಲಿಗೆ ಪಂಚಾಯತ್‌ ಕೆಲಸಕ್ಕೆ ಬರುವ ಗ್ರಾಮಸ್ಥರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಈ ರಸ್ತೆಗೆ ಕಾಂಕ್ರೀಟ್‌ ಕಾಮಗಾರಿ ಮಾಡಬೇಕಾಗಿ ಗ್ರಾಮಸ್ಥರು ಪಂಚಾಯತ್‌ ಅನ್ನು ಒತ್ತಾಯಿಸಿದ್ದಾರೆ.

ಆದಷ್ಟು ಬೇಗ ಉದ್ಘಾಟನೆ
ಬಹುತೇಕ ಎಲ್ಲ ಕಾಮಗಾರಿ ಪೂರ್ಣಗೊಂಡಿದೆ. ನಮ್ಮ ಅವಧಿ ಮುಗಿಯುವುದರೊಳಗೆ ಪೂರ್ಣಗೊಳಿಸಿ, ಉದ್ಘಾಟನೆ ಮಾಡಬೇಕು ಅನ್ನುವ ಕನಸಿತ್ತು. ಆದರೆ ಪೀಠೊಪಕರಣ ಕಾಮಗಾರಿ ವಹಿಸಿದ್ದು, ಆದರೆ ವಿಳಂಬವಾಗಿದೆ. ಇದರಿಂದ ಸ್ವಲ್ಪ ತಡವಾಗಬಹುದು. ಆಗಸ್ಟ್‌ ಕೊನೆಯ ವಾರದೊಳಗೆ ಆಗುವ ನಿರೀಕ್ಷೆಯಿದೆ.
ನಾಗರಾಜ್‌ ಪುತ್ರನ್‌, ಅಧ್ಯಕ್ಷರು,
ಕಟ್‌ಬೆಲ್ತೂರು ಗ್ರಾ.ಪಂ. ಅಧ್ಯಕ್ಷ

*ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.