ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ: ಜಾಮೀನು ಮಂಜೂರು
Team Udayavani, Feb 25, 2023, 5:20 AM IST
ಕುಂದಾಪುರ: ಇಲ್ಲಿನ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಯಾನೆ ಕಟ್ಟೆ ಭೋಜಣ್ಣ (79) ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿಗಳ ಪೈಕಿ ಒಬ್ಬರಾದ ಎಚ್. ಇಸ್ಮಾಯಿಲ್ ಅವರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.
ಗೋಪಾಲಕೃಷ್ಣ ರಾವ್ ಅವರು ಕಳೆದ ವರ್ಷ ಮೇ 25ರಂದು ಕೋಟೇಶ್ವರ ಸಮೀಪ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಅವರ ಮನೆ ಸಿಟ್ಔಟ್ನಲ್ಲಿ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದಲ್ಲಿ ಡೆತ್ನೋಟ್ನಲ್ಲಿ ಹೆಸರಿದ್ದ ಗಣೇಶ್ ಶೆಟ್ಟಿಯನ್ನು ಈ ಮೊದಲೇ ಬಂಧಿಸಲಾಗಿದ್ದು, ಪ್ರಕರಣದಲ್ಲಿ ಇನ್ನೊಂದು ಹೆಸರಿದ್ದ ಬ್ರೋಕರ್ ಎಚ್. ಇಸ್ಮಾಯಿಲ್ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಉಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಆರೋಪಿ ಇಲ್ಲಿನ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಅನಂತರ ಪೊಲೀಸರು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ಅವರು ಆರೋಪಿ ಪರ ಜಾಮೀನಿಗೆ ಅರ್ಜಿ ಹಾಕಿದಾಗ ನ್ಯಾಯಾಧೀಶ ಧನೇಶ ಮುಗಳಿ ಅವರು ಉಚ್ಚ ನ್ಯಾಯಾಲಯದ ಆದೇಶದಂತೆ ಕ್ರಮಬದ್ಧ ಜಾಮೀನು ಮಂಜೂರು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.