ಕೊಡಿಹಬ್ಬ ಆಚರಣೆಗೆ ಅಣಿಯಾದ ಕೋಟಿಲಿಂಗೇಶ್ವರ ಸನ್ನಿಧಿ


Team Udayavani, Nov 19, 2021, 3:20 AM IST

ಕೊಡಿಹಬ್ಬ ಆಚರಣೆಗೆ ಅಣಿಯಾದ ಕೋಟಿಲಿಂಗೇಶ್ವರ ಸನ್ನಿಧಿ

ಕೋಟೇಶ್ವರ:  ಕೋಟಿಲಿಂಗೇಶ್ವರ ದೇಗುಲದ ರಥೋತ್ಸವದ ಸಲುವಾಗಿ ದೇಗುಲದಲ್ಲಿ ಪ್ರಧಾನ ಅರ್ಚಕ ಹಾಗೂ ತಂತ್ರಿ ಪ್ರಸನ್ನ ಕುಮಾರ ಐತಾಳ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು.

ದೇಗುಲದ ಒಳಪೌಳಿಯಲ್ಲಿ ನ. 18ರಂದು ರಂಗೋತ್ಸವ, ಸಿಂಹವಾನೋತ್ಸವದಲ್ಲಿ ಉತ್ಸವ ಮೂರ್ತಿ, ದೇವರ ಪಲ್ಲಕಿಯ ಪ್ರದ ಕ್ಷಿ ಣೆ ಯನ್ನು ಒಳಸುತ್ತಿನಲ್ಲಿ ಚೆಂಡೆ-ವಾದ್ಯ ಗಳೊಡನೆ ಸಾಂಪ್ರ ದಾಯಿಕ, ಶಾಸ್ತ್ರೋಕ್ತವಾಗಿ ನಡೆಸಲಾಯಿತು.

ದೇಗುಲದಲ್ಲಿ ನಡೆದ ವಿವಿಧ ಉತ್ಸವಾದಿಗಳಲ್ಲಿ ತಾಂಡವ ನೃತ್ಯ ಹಾಗೂ ಚೆಂಡೆವಾದನ ರವಿರಾಜ ಭಟ್‌ ನಂದಳಿಕೆ ಅವರ ನೇತೃತ್ವದಲ್ಲಿ ನಡೆಯಿತು.

ದೇಗುಲದಲ್ಲಿ ಸೇವಾಕರ್ತರಿಂದ ಶತ ರುದ್ರಾಭಿಷೇಕ, ಸಣ್ಣ ಹಾಗೂ ದೊಡ್ಡ ರಂಗಪೂಜೆ ನಡೆಯಿತು. ಆಸ್ತಿಕ ಸಮಾಜದ ನೇತೃತ್ವದಲ್ಲಿ  ಪ್ರತೀ ದಿನ ಭಜನೆ ಹಾಗೂ ಮಂಗಲೋತ್ಸವ ನಡೆಯಿತು.

2 ಕೋ.ರೂ. ವೆಚ್ಚದಲ್ಲಿ ಜೀರ್ಣೋದ್ಧಾರ:  

400 ವರ್ಷಗಳ ಶಿಥಿಲಗೊಂಡ ಗರ್ಭಗುಡಿಯ ಮಾಡನ್ನು ಹೊಸತಾಗಿ ತಾಮ್ರದ ಹೊದಿಕೆಯೊಂದಿಗೆ ನಿರ್ಮಿಸಲಾಗಿದೆ. 60 ವರ್ಷಗಳ ಹಿಂದಿನ ಕಾಂಕ್ರೀಟ್‌ ಛಾವಡಿಯನ್ನು ತೆರ ವು ಗೊ ಳಿ ಸಿ ಎಡನಾಳಿ ಮಾಡನ್ನು ನೂತನ ತಾಮ್ರದ ಹೊದಿಕೆಯೊಂದಿಗೆ ರಚಿಸಲಾಗಿದೆ. ಗರ್ಭಗುಡಿಯ ಮೇಲಿನ ಶಿಥಿಲಗೊಂಡ ಗೋಡೆಯನ್ನು ತೆರ ವು  ಮಾಡಿ ಹೊಸ ದಾಗಿ ಗೋಡೆ ಹಾಗೂ ಮುಚ್ಚಿಗೆಗಳನ್ನು  ನಿರ್ಮಿಸಲಾ ಗಿ ದೆ. ಶಿಲಾ ಮಾಡಿನ ಮೇಲೆ ಸಂಪೂರ್ಣ ಸಿಮೆಂಟ್‌ ಗಾರೆ ಹಾಕಲಾಗಿದೆ. ಗರ್ಭಗುಡಿಯ ಮೇಲಿನ ಗೋಡೆಯ ಹೊರಸುತ್ತಿನಲ್ಲಿ ಹೊಸತಾಗಿ ಭಿತ್ತಿಚಿತ್ರಗಳನ್ನು ರಚಿಸಲಾಗಿದೆ. ತೀರ್ಥ ಮಂಟಪ ವನ್ನು ತಾಮ್ರದ ಹೊದಿಕೆಯೊಂದಿಗೆ ಹೊಸತಾಗಿ ನಿರ್ಮಿಸಲಾಗಿದೆ. ಗರ್ಭಗುಡಿಯ ಮೇಲಿನ ಹೊರಗಿನ ಗೋಡೆಯ ಸುತ್ತ ನಾಲ್ಕು ಸಿಂಹ ಹಾಗೂ 36 ಚಾರುಗೂಟ ನಿರ್ಮಿಸಲಾಗಿದೆ. ನೂತನ ಧ್ವಜ ಮರ ಕೆತ್ತನೆ, ಶಿಲಾಪೀಠ, ಕಂಚಿನ ಪದ್ಮಪೀಠ, ಎರಕದ ಅಷ್ಟದಿಕಾ³ಲಕರು, ಧ್ವಜಮರಕ್ಕೆ ತಾಮ್ರದ ಕವಚದ ಕೆಲಸ ಸಂಪೂರ್ಣವಾಗಿದೆ. ಬ್ರಹ್ಮ ಅಶ್ವತ್ಥ ಕಟ್ಟೆಯಲ್ಲಿ ನಾಗಶಿಲೆಯ ಪುನರ್‌ ಪ್ರತಿಷ್ಠೆಯಾಗಿದೆ. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಎನ್‌. ಕೃಷ್ಣಮೂರ್ತಿ ರಾವ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣದೇವ ಕಾರಂತ ಕೋಣಿ ಹಾಗೂ ಸದಸ್ಯರ ಮುತುವರ್ಜಿಯಲ್ಲಿ ಕಾಮಗಾರಿಗಳು ಪೂರ್ಣಗೊಂಡಿವೆ.

ಮದ್ಯ ಮಾರಾಟ ನಿಷೇಧ:

ಕೋಟೇಶ್ವರ, ಹಂಗಳೂರು ಹಾಗೂ ಗೋಪಾಡಿ ವ್ಯಾಪ್ತಿಯ ಎಲ್ಲ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್‌, ರೆಸ್ಟೋರೆಂಟ್‌ ಹಾಗೂ ವೈನ್‌ ಶಾಪ್‌ಗ್ಳಲ್ಲಿ ಮದ್ಯಮಾರಾಟವನ್ನು ನ.18ರ ಬೆಳಗ್ಗೆ 6ರಿಂದ  19ರ ರಾತ್ರಿ 12ರ ವರೆಗೆ ನಿಷೇಧಿಸುವಂತೆ ಜಿಲ್ಲಾಧಿಕಾರಿ ಕೂರ್ಮರಾವ್‌ ಆದೇಶಿಸಿದ್ದಾರೆ.

ಜನಮನ  ಸೂರೆಗೊಂಡ  ತಟ್ಟಿರಾಯ :

ಕೊಡಿಹಬ್ಬ ಹಾಗೂ ವಿಶೇಷ ಸಂದರ್ಭ ಗಳಲ್ಲಿ ಉತ್ಸವ ಮೂರ್ತಿಯೊಡನೆ ಸಾಗುವ ಇಲ್ಲಿನ ಎರಡು ಬೃಹತ್‌ ತಟ್ಟಿರಾಯ ವಿಶೇಷ ಆಕರ್ಷಣೆಯಾಗಿದೆ. ದೇಗುಲದ ಕೊಡಿಹಬ್ಬ ಸಹಿತ ಕಟ್ಟೆಪೂಜೆ ಕಾರ್ಯಕ್ರಮಗಳಲ್ಲಿ ತಟ್ಟಿರಾಯನಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಪುರಾತನ ಪರಂಪರೆಗೆ ಇದೊಂದು ಪ್ರತೀಕವಾಗಿದೆ. ವಿವಿಧ ದೇಗುಲಗಳ ಧಾರ್ಮಿಕ ಆಚರಣೆಗಳಲ್ಲಿ ಇಲ್ಲಿನ ತಟ್ಟಿರಾಯರನ್ನು ಬಳಸಲಾಗುತ್ತದೆ. ಐತಿಹಾಸಿಕ ಹಿನ್ನೆಲೆಯಲ್ಲಿ ತಟ್ಟಿರಾಯನ ವರ್ಣನೆ ಇದ್ದು, ಅದರ ಬಳಕೆಯನ್ನು ಸಂಪ್ರದಾಯಕ್ಕೆ ಲೋಪವಾಗದಂತೆ ಕೋಟಿಲಿಂಗೇಶ್ವರ ದೇಗುಲದಲ್ಲಿ ಧಾರ್ಮಿಕ ಶ್ರದ್ಧೆಯೊಡನೆ ಬಳಸಲಾಗುತ್ತಿದೆ.

ಇಂದು ಕೊಡಿಹಬ್ಬ :

ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ನ. 19ರಂದು ನಡೆಯಲಿರುವ ರಥೋತ್ಸವಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಬ್ರಹ್ಮರಥವನ್ನು ಅಲಂಕರಿ ಸಲಾಗಿದೆ. ಪಟ್ಟಾಭಿ ರಾಮಚಂದ್ರ ದೇಗುಲದ ಶ್ರೀ ರಾಮ ಸೇವಾ ಸಂಘದಿಂದ ಬ್ರಹ್ಮರಥಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ಮಿತ್ರದಳ ಕೋಟೇಶ್ವರ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಜಾತ್ರೆ ದಿನ ಶ್ರೀ ದೇವರು ಹಾಗೂ ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ತಂತ್ರಿ ಪ್ರಸನ್ನ ಕುಮಾರ್‌ ಐತಾಳ್‌, ಕಾರ್ಯ ನಿರ್ವಹಣಾಧಿ ಕಾರಿ ಗಣೇಶ ಗೌಡ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಹಾಗೂ ಸಮಿತಿ ಸದಸ್ಯರು ಕೊಡಿಹಬ್ಬದ ಆಚರಣೆಗೆ ಸಕಲ ಸಿದ್ಧತೆಗಳನ್ನು ಏರ್ಪಡಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.