Kolluru: ವಂಡ್ಸೆ-ಹಾಲ್ಕಲ್‌ ರಸ್ತೆ ಹೊಂಡಕ್ಕೆ ಮುಕ್ತಿ ಎಂದು?

ತೇಪೆ ಕಾರ್ಯ ನಡೆಸದಿದ್ದಲ್ಲಿ ರಸ್ತೆ ತಡೆಗೆ ಗ್ರಾಮಸ್ಥರ ನಿರ್ಧಾರ

Team Udayavani, Oct 22, 2024, 5:43 PM IST

10

ಕೊಲ್ಲೂರು: ಕೊಲ್ಲೂರಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ವಂಡ್ಸೆಯಿಂದ ಹಾಲ್ಕಲ್‌ವರೆಗೆ ಹೊಂಡಗುಂಡಿಗಳೇ ತುಂಬಿದೆ. ಈ ಹೊಂಡಮಯ ರಸ್ತೆಯ ದುರಸ್ತಿಗೆ ಇನ್ನೂ ಆರಂಭ ಮಾಡದಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮುಂದಿನ 20 ದಿನಗಳ ಒಳಗೆ ಕನಿಷ್ಠ ತೇಪೆ ಕಾರ್ಯ ನಡೆಸದೆ ಇದ್ದಲ್ಲಿ ರಸ್ತೆ ತಡೆ ನಡೆಸಲು ಗ್ರಾಮಸ್ಥರು ಮುಂದಾಗಿದ್ದಾರೆ.

ಸಂಪೂರ್ಣ ಡಾಮರೀಕರಣಕ್ಕೆ ಅನುದಾನದ ಕೊರತೆ ಎದುರಿಸುತ್ತಿರುವ ಇಲಾಖೆ ಕನಿಷ್ಠ ಹೊಂಡ ಮುಚ್ಚುವ ಕಾರ್ಯಕ್ಕೂ ವಿಳಂಬ ನೀತಿ ಅನುಸರಿಸುತ್ತಿರುವುದು ವಾಹನ ಚಾಲಕರಿಗೆ ತೊಂದರೆ ಉಂಟುಮಾಡಿದೆ. ದ್ವಿಚಕ್ರ ವಾಹನ ಚಾಲಕರ ಸ್ಥಿತಿಯಂತೂ ಹೇಳತೀರದು.

ಕೊಲ್ಲೂರು ಕ್ಷೇತ್ರದ ನವರಾತ್ರಿ ಉತ್ಸವಕ್ಕೆ ಸಾವಿರಾರು ಭಕ್ತರು ಬರುವುದರಿಂದ ಅದಕ್ಕೆ ಮುನ್ನ ರಿಪೇರಿ ನಡೆಯಬಹುದು ಎಂಬ ಸಾರ್ವಜನಿಕರ ನಿರೀಕ್ಷೆ ಹುಸಿಯಾಗಿದೆ. ಈಗ ದೀಪಾವಳಿ ಹೊತ್ತಿಗಾದರೂ ನಡೆಯಬಹುದೇ ಎಂಬ ಕಾಯುವಿಕೆ ಶುರುವಾಗಿದೆ.

ಸರಕಾರಕ್ಕೆ ಮನವಿ
ವಂಡ್ಸೆಯಿಂದ ಹಾಲ್ಕಲ್‌ ತನಕ ಮುಖ್ಯ ರಸ್ತೆಯ ಡಾಮರು ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೆ ಆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ರಸ್ತೆಯ ದುಸ್ಥಿತಿಗೆ ಕಾರಣವಾಗಿದೆ.
– ಗುರುರಾಜ ಗಂಟಿಹೊಳೆ, ಶಾಸಕರು

ಯಾರಿಗೂ ಇದರ ಗೊಡವೆ ಇಲ್ಲ!
ಕರ್ನಾಟಕ, ಕೇರಳ, ತಮಿಳುನಾಡು ಅಲ್ಲದೇ ಆಂಧ್ರಪ್ರದೇಶದಿಂದ ಕೊಲ್ಲೂರು ಕ್ಷೇತ್ರಕ್ಕೆ ಸಾವಿರಾರು ಭಕ್ತರು ನಿತ್ಯ ನಿರಂತರ ಆಗಮಿಸುತ್ತಾರೆ. ಹದಗೆಟ್ಟ ಮುಖ್ಯ ರಸ್ತೆಯ ದುಸ್ಥಿತಿಯಿಂದಾಗಿ ಭಯದ ವಾತಾವರಣದಲ್ಲೇ ಸಂಚರಿಸಬೇಕಾಗಿದೆ.

ಇಡೂರು, ಜಡ್ಕಲ್‌ ಮುಂತಾದೆಡೆ ಭಾರೀ ಹೊಂಡಗಳಿಂದ ಕೂಡಿದ್ದು, ಅಮಿತ ವೇಗದಲ್ಲಿ ಸಾಗಿದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಕೊಲ್ಲೂರು ಕ್ಷೇತ್ರಕ್ಕೆ ಕೇಂದ್ರ ರಾಜ್ಯ ಸಚಿವರು ಸಹಿತ ಅನೇಕ ರಾಜಕೀಯ ಮುಂದಾಳುಗಳು ಈ ಮಾರ್ಗವಾಗಿ ಆಗಮಿಸುತ್ತಾರೆ. ಆದರೆ ರಸ್ತೆಯ ದುಸ್ಥಿತಿಯ ಬಗ್ಗೆ ಯಾರೊಬ್ಬರು ಸರಕಾರದ ಗಮನ ಸೆಳೆದು ಕ್ರಮ ಕೈಗೊಳ್ಳುವ ಬಗ್ಗೆ ಒತ್ತಾಯಿಸುತ್ತಿಲ್ಲ.

ಟಾಪ್ ನ್ಯೂಸ್

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

13(3)

Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

11(1)

Thekkatte: ಸಂಪೂರ್ಣ ಹದಗೆಟ್ಟ ಬಿದ್ಕಲ್‌ಕಟ್ಟೆ-ಕಂಬಿಕಲ್ಲು ರಸ್ತೆ

9

Karkala: ಆಗಾಗ ಸುರಿಯುತ್ತಿರುವ ಮಳೆ; ರಸ್ತೆ ದುರಸ್ತಿಗೆ ಅಡ್ಡಿ

7

Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

12

Mangaluru: ಪಟಾಕಿ ಮಾರಾಟಕ್ಕೆ 13 ಸ್ಥಳ ನಿಗದಿ; ಬೆಳಕಿನ ಹಬ್ಬಕ್ಕೆ ಭರದ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.