Kota: ಟೋಲ್‌ ತಪ್ಪಿಸಲು ನಕಲಿ ಆರ್‌ಸಿ ಸೃಷ್ಟಿ


Team Udayavani, Oct 17, 2024, 9:00 PM IST

15

ಕೋಟ: ಸಾಸ್ತಾನ ಟೋಲ್‌ನಲ್ಲಿ ಟೋಲ್‌ ತಪ್ಪಿಸುವ ಸಲುವಾಗಿ ನಕಲಿ ದಾಖಲೆ ಸೃಷ್ಟಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಸಾಸ್ತಾನ ಟೋಲ್‌ನಲ್ಲಿ ಕರಿಕಲ್‌ ಕಟ್ಟೆಯಿಂದ ಮಾಬುಕಳದವೆರೆಗೆ ಇರುವ ಸ್ಥಳೀಯ ನಿವಾಸಿಗಳಿಗೆ ಸುಂಕ ವಿನಾಯಿತಿ ಇದ್ದು ಅ. 15ರಂದು ಬಲೆನೋ ಕಾರೊಂದರ ಆರ್‌.ಸಿ.ಯನ್ನು ಸ್ಕ್ಯಾನರ್‌ನಲ್ಲಿ ಪರಿಶೀಲಿಸಿದಾಗ ಆರ್‌ಸಿ ವಿಳಾಸದಲ್ಲಿ ಮಯ್ನಾದಿ ಅಹಮ್ಮದ್‌ ಸಾಹೇಬ ಪಡುಕರೆ ಕೋಟ ಎಂದಿದ್ದು, ಆರ್‌ಸಿ ಪ್ರತಿಯನ್ನು ನೋಡಿದಾಗ ಎಡಿಟ್‌ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಬಗ್ಗೆ ಪರಿಶೀಲಿಸಿದಾಗ ಕಾರಿನ ಆರ್‌ಸಿ ಮಾಲಕರ ವಿಳಾಸ ಕಾಳಾವರ ಗ್ರಾಮ ಕುಂದಾಪುರ ತಾಲೂಕು ಎಂದಿದ್ದು, ಅನುಮಾನಗೊಂಡು ಹೆಜಮಾಡಿ ಟೋಲ್‌ನಲ್ಲಿ ಪರಿಶೀಲಿಸಿದಾಗ ಅಲ್ಲಿಯೂ ಸಹ ಸ್ಥಳೀಯ ವಿಳಾಸದ ಆರ್‌ಸಿ ನೀಡಿ ವಿನಾಯಿತಿ ಪಡೆದಿರುವುದು ಕಂಡುಬಂದಿದೆ.

ಆರೋಪಿಯು ಟೋಲ್‌ನಲ್ಲಿ ಸುಂಕ ವಿನಾಯಿತಿ ಪಡೆಯುವ ಉದ್ದೇಶದಿಂದ ಕಾರಿನ ಆರ್‌ಸಿಯ ವಿಳಾಸವನ್ನು ಬದಲಾಯಿಸಿ ಆರ್‌ಸಿಯಲ್ಲಿರುವ ವಿಳಾಸ ತನ್ನ ಸ್ವಂತ ವಿಳಾಸ ಎಂದು ಬಿಂಬಿಸಿ ನಕಲಿ ಆರ್‌ಸಿ ತಯಾರಿಸಿ ಟೋಲ್‌ ಸಂಸ್ಥೆಗೆ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನೂರಾರು ನಕಲಿ ಐಡಿ
ಶುಲ್ಕ ವಿನಾಯಿತಿಯನ್ನು ಪಡೆಯುವ ಉದ್ದೇಶದಿಂದ ನೂರಾರು ಮಂದಿ ವಾಹನ ಸವಾರರು ಈ ರೀತಿ ನಕಲಿ ಐ.ಡಿ.ಯನ್ನು ಸೃಷ್ಟಿಸಿಕೊಂಡಿರುವ ಬಗ್ಗೆ ಟೋಲ್‌ನವರಿಗೆ ಅನುಮಾನವಿದ್ದು, ಇದೀಗ ಹಂತ-ಹಂತವಾಗಿ ಈ ರೀತಿಯ ಐ.ಡಿ.ಗಳನ್ನು ಪರಿಶೀಲಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಈ ರೀತಿಯ ಕೃತ್ಯ ಎಸಗುವವರ ವಿರುದ್ಧ ನಿರಂತರವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಟೋಲ್‌ನವರ ಪರವಾಗಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಯೋಗೀಶ್‌ ನಾಯರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

complaint

Kundapura: ಪತಿಯಿಂದ ಹಲ್ಲೆ, ಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

9

Karkala: ಶಿರ್ಲಾಲು ಕಾಡಿನಲ್ಲಿದೆ ಪ್ರಾಚೀನ ಹೆರಿಗೆ ಕಲ್ಲು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

3

Puttur: ರಸ್ತೆ ಬದಿ ನಿಂತಿದ್ದ ಬಾಲಕನ ಬಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.