24 ಮಂದಿ ವಶಕ್ಕೆ ನಗದು ಸಹಿತ 8.27 ಲಕ್ಷ ರೂ. ಮೌಲ್ಯದ ಸೊತ್ತು ವಶ

ಇಸ್ಪೀಟ್‌ ಜುಗಾರಿ ಬೃಹತ್‌ ಅಡ್ಡೆಗೆ ಕೋಟ ಪೊಲೀಸರ ದಾಳಿ

Team Udayavani, Aug 6, 2023, 10:45 PM IST

24 ಮಂದಿ ವಶಕ್ಕೆ ನಗದು ಸಹಿತ 8.27 ಲಕ್ಷ ರೂ. ಮೌಲ್ಯದ ಸೊತ್ತು ವಶ

ತೆಕ್ಕಟ್ಟೆ: ಕುಂದಾಪುರ ತಾಲೂಕು ಮೊಳಹಳ್ಳಿ ಗ್ರಾಮದ ಗುಡ್ಡೆಯಂಗಡಿ ಕ್ರಾಸ್‌ ಬಳಿ ಇರುವ ವಿನಾಯಕ ಸಭಾಂಗಣದಲ್ಲಿ ಇಸ್ಪೀಟು ಜುಗಾರಿ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಆ. 5ರಂದು ರಾತ್ರಿಯ ವೇಳೆ ಕೋಟ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಶಂಭುಲಿಂಗಯ್ಯ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಒಟ್ಟು ನಗದು 1,49,680 ಲಕ್ಷ ರೂ. ನಗದು ಸಹಿತ 8.27 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ದಾಳಿಯಲ್ಲಿ 24 ಮಂದಿ ಪೊಲೀಸರ ಅತಿಥಿಯಾಗಿದ್ದಾರೆ. ಮೂರು ಕಾರು, ನಾಲ್ಕು ದ್ವಿಚಕ್ರ ವಾಹನಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಸ್ಪೀಟು ಜುಗಾರಿ ಆಟದಲ್ಲಿ ನಿರತರಾದ ಅಬ್ದುಲ್‌ ಮುನೀರ್‌, ಸಲ್ಮಾನ್‌, ಬಸವರಾಜ, ವಿಷ್ಣು ಕೆ.ವಿ., ದಿನೇಶ್‌, ಕೆ. ವಿನಾಯಕ, ಸಂದೀಪ, ಕೃಷ್ಣ, ಸುಧಾಕರ, ನಾಗರಾಜ, ಸುಬ್ರಹ್ಮಣ್ಯ, ಶ್ರೀಧರ, ಇ. ಆ್ಯಂಟನಿ ಮಸ್ಕರೇನಸ್‌, ಶೃತಿರಾಜ್‌, ರಘು, ಹುಸೇನ್‌, ಸಂದೇಶ್‌, ರಾಜು ಮೊಗೇರ, ಗೋಪಾಲ, ಗಣೇಶ್‌, ಮಿಥುನ್‌, ಸುಧರ್ಮ, ಕಮಲಾಕ್ಷ ಹಾಗೂ ಸುಧಾಕರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜುಗಾರಿ ಆಟಕ್ಕೆ ಬಳಸಿದ ಇಸ್ಪೀಟು ಎಲೆಗಳು 52, ಸ್ಟೀಲ್‌ ಟೇಬಲ್‌ಗ‌ಳು ಮೂರು, ಪ್ಲಾಸ್ಟಿಕ್‌ ಕುರ್ಚಿಗಳು 24, ನೀಲಿ, ಹಸುರು ಹಾಗೂ ಹಳದಿ ಬಣ್ಣಗಳ ಟೇಬಲ್‌ ಕ್ಲಾತ್‌ 1, ಒಟ್ಟು ನಗದು 1,49,680 ರೂ., ಟೊಯೊಟಾ ಈಟಿಯಾಸ್‌ ಕಾರು, ಆಮ್ನಿ ಕಾರು, ರಿಡ್ಜ್ ಕಾರು, ಟಿವಿಎಸ್‌ ಸ್ಟಾರ್‌ ಸಿಟಿ ಮೋಟಾರ್‌ ಸೈಕಲ್‌, ಫ್ಯಾಶನ್‌ ಪ್ರೋ ಮೋಟಾರ್‌ ಸೈಕಲ್‌, ಸುಜುಕಿ ಏಸಸ್‌ ಸ್ಕೂಟಿ, ಹೋಂಡಾ ಡಿಯೋ ಸ್ಕೂಟಿ ಸೇರಿದಂತೆ ಒಟ್ಟು 8,27,580 ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಕಲಂ 79, 80 ಕರ್ನಾಟಕ ಪೊಲೀಸ್‌ ಕಾಯ್ದೆಯ ಪ್ರಕಾರ ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಂತಹ ವಿಶೇಷ ಕಾರ್ಯಾಚರಣೆ ಅಗತ್ಯ
ಇತ್ತೀಚಿನ ದಿನಗಳಲ್ಲಿ ಕರಾವಳಿಯಲ್ಲಿ ಗಾಂಜಾ, ಮಟ್ಕಾ, ಇಸ್ಪೀಟು ಜುಗಾರಿ ಅಡ್ಡೆಗಳು ಮತ್ತಿತರ ಅಕ್ರಮ ದಂಧೆಗಳು ವಿಸ್ತರಿಸುತ್ತಲೇ ಹೋಗುತ್ತಲಿವೆ. ಅಲ್ಲಲ್ಲಿ ಕೆಲವು ದಾಳಿಗಳು, ಕೇಸಿಗಾಗಿ ಠಾಣೆಗಳಿಗೆ ದಂಧೆಕೋರರನ್ನು ಕರೆಯಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಪೊಲೀಸರೇ ಅಕ್ರಮ ಅಡ್ಡೆಗಳಿಗೆ ಸಾಥ್‌ ನೀಡುತ್ತಿದ್ದಾರೆ ಎನ್ನುವ ಮಾತುಗಳೂ ಸಾರ್ವಜನಿಕ ವಲಯದಿಂದ ಕೇಳಿಬರುತ್ತಲೇ ಇದೆ. ಮೊಳಹಳ್ಳಿ ಗ್ರಾಮದಲ್ಲಿ ಅಕ್ರಮ ಇಸ್ಪೀಟು ಜುಗಾರಿ ಅಡ್ಡೆಗೆ ಕೋಟ ಪೊಲೀಸರಿಂದ ನಡೆದ ಬೃಹತ್‌ ದಾಳಿಯಂತೆಯೇ ಹೆಚ್ಚಿನ ಪ್ರಮಾಣದ ದಾಳಿಗಳು ಕರಾವಳಿಯಾದ್ಯಂತ ನಡೆಯಬೇಕಿದೆ. ಮಂಗಳೂರು, ಉಡುಪಿ ಪೊಲೀಸರು ಗಾಂಜಾ ಪ್ರಕರಣಗಳ ಬೆನ್ನು ಬಿದ್ದು ವಿಶೇಷ ಕಾರ್ಯಾಚರಣೆ ನಡೆಸುತ್ತಿರುವಂತೆಯೇ ವೇಶ್ಯಾವಾಟಿಕೆ, ಮಟ್ಕಾ, ಇಸ್ಪೀಟು ಅಡ್ಡೆಗಳ ಮೇಲೂ ನಿರಂತರ ದಾಳಿಗಳಾಗಬೇಕಿದೆ. ಬೇರುಮಟ್ಟದಿಂದ ಈ ದಂಧೆಗಳನ್ನು ಮಟ್ಟ ಹಾಕಲು ಅಸಾಧ್ಯವಾದರೂ, ನಿರಂತರ ದಾಳಿಯಾದರೆ ಅಕ್ರಮ ಚಟುವಟಿಕೆಗಳು ರಾಜಾರೋಷವಾಗಿ ವಿಸ್ತರಣೆಯಾಗಿ ಸಮಾಜಕ್ಕೆ ಕಂಠಕವಾಗುವುದಂತು ತಪ್ಪುತ್ತದೆ. ಈ ಬಗ್ಗೆ ಸುದೀರ್ಘ‌ ವಿಶೇಷ ಕಾರ್ಯಾಚರಣೆ ನಡೆಸುವತ್ತ ಹಿರಿಯ ಪೊಲೀಸ್‌ ಅಧಿಕಾರಿಗಳು ಗಮನಹರಿಸಿದರೆ ಉತ್ತಮ ಎನ್ನುವುದು ಸಾರ್ವಜನಿಕ ವಲಯದ ಅಭಿಮತ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.