Kundapur: ಮಳೆಗೆ ಕುಸಿಯುವ ಆತಂಕದಲ್ಲಿ ಹಟ್ಟಿಯಂಗಡಿ ಶಾಲೆ-ತೆರವಿಗೆ ಮೀನ-ಮೇಷ


Team Udayavani, Jun 8, 2024, 2:25 PM IST

Kundapur: ಮಳೆಗೆ ಕುಸಿಯುವ ಆತಂಕದಲ್ಲಿ ಹಟ್ಟಿಯಂಗಡಿ ಶಾಲೆ-ತೆರವಿಗೆ ಮೀನ-ಮೇಷ

ಕುಂದಾಪುರ: ಶತಮಾನೋತ್ಸವ ಪೂರೈಸಿರುವ ಹಟ್ಟಿಯಂಗಡಿ ಸರಕಾರಿ ಹಿ.ಪ್ರಾ. ಶಾಲೆಯ ಹಳೆಯ ಕಟ್ಟಡವೊಂದು ಶಿಥಿಲಗೊಂಡಿದ್ದು, ಮಕ್ಕಳ ಹಿತದೃಷ್ಟಿಯಿಂದ ಆ ಕಟ್ಟಡದ ತೆರವಿಗೆ ಎಸ್‌ಡಿಎಂಸಿ, ಶಿಕ್ಷಕರು, ಪೋಷಕರು, ಹಳೆ ವಿದ್ಯಾರ್ಥಿ ಸಂಘದವರು ವರ್ಷದಿಂದ ಒತ್ತಾಯಿಸುತ್ತಿದ್ದರೂ, ಇನ್ನೂ ತೆರವಿಗೆ ಮುಂದಾಗಿಲ್ಲ. ಈ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ಮನವಿ ಕೊಟ್ಟರೂ, ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ.

ಸದ್ಯ ಅಲ್ಲಿ ತರಗತಿ ನಡೆಸದೇ, ಬೇರೆ ಕಡೆ ನಡೆಸಲಾಗುತ್ತಿದೆ. ಆದರೂ ಮಕ್ಕಳು ಆಚೀಚೆ ಓಡಾಡುವ ವೇಳೆ ಗಾಳಿ- ಮಳೆಗೆ
ಕುಸಿದು ಬಿದ್ದು, ಏನಾದರೂ ಅನಾಹುತ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.

ಹೊಸ ಕಟ್ಟಡಕ್ಕೆ ಎಸ್‌ಡಿಎಂಸಿ ಮನವಿ
ಈ ಶಿಥಿಲಗೊಂಡ ಕಟ್ಟಡ ಅಪಾಯಕಾರಿ ಯಾಗಿದ್ದು, ಇಲ್ಲಿ ತರಗತಿ ನಡೆಸಲು ಸಾಧ್ಯವಿಲ್ಲ. ಈ ಕಟ್ಟಡವನ್ನು ಆದಷ್ಟು ಬೇಗ ತೆರವು ಮಾಡಿ, ಆ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು ಎನ್ನುವುದಾಗಿ ಶಾಲಾಭಿವೃದ್ಧಿ ಮತ್ತು
ಮೇಲುಸ್ತುವಾರಿ ಸಮಿತಿ ವತಿಯಿಂದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಇದಕ್ಕೂ ಮುನ್ನ ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಮನವಿ ಸಲ್ಲಿಸಿದ್ದು, ಅವರು ಸ್ವತಹಃ ಇಲ್ಲಿಗೆ ಭೇಟಿ ನೀಡಿ, ವರದಿ ತಯಾರಿಸಿ, ಮೇಲಧಿಕಾರಿಗಳಿಗೆ ಸಲ್ಲಿಸಿದ್ದರು. ಪ್ರಸ್ತುತ 58 ಮಂದಿ ಮಕ್ಕಳಿದ್ದು, ಮೂವರು ಶಿಕ್ಷಕರಿದ್ದಾರೆ. ಶಿಕ್ಷಕರ ಕಚೇರಿಯನ್ನೇ ತರಗತಿ ಕೋಣೆ ಯಾಗಿ ಮಾಡಲಾಗಿದೆ. ಇರುವಂತಹ ಕೊಠಡಿಗಳಲ್ಲಿಯೇ ತರಗತಿ ನಡೆಸಲಾಗುತ್ತಿದ್ದು, ಈ ಕಟ್ಟಡ ನೆಲಸಮಗೊಳಿಸಿ, ಆ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣವಾದರೆ ಮಕ್ಕಳಿಗೆ ಅನುಕೂಲವಾಗಲಿದೆ.

50ವರ್ಷ ಹಳೆಯ ಕಟ್ಟಡ
ಬೈಂದೂರು ವಲಯದ ಹಟ್ಟಿಯಂಗಡಿ ಸರಕಾರಿ ಹಿ.ಪ್ರಾ. ಶಾಲೆಯ ಈ ಕಟ್ಟಡವೂ ಸುಮಾರು 50 ವರ್ಷಗಳಿಗೂ ಹಿಂದಿನದ್ದಾಗಿದೆ. ಈ ಶಾಲೆಯಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮ, ಸಭೆ, ಸಮಾರಂಭಗಳು ಇದೇ ಕಟ್ಟಡದಲ್ಲಿ ನಡೆಯುತ್ತಿದ್ದವು. ಪ್ರತೀ ಚುನಾವಣೆಯಲ್ಲೂ ಈ ಕಟ್ಟಡದಲ್ಲಿಯೇ ಮತಗಟ್ಟೆಯನ್ನು ತೆರೆಯಲಾಗುತ್ತಿತ್ತು. ಆದರೆ ಈ ಬಾರಿಯ ಲೋಕಸಭಾ ಚುನಾವಣೆ ವೇಳೆ ಇಲ್ಲಿ ಮತಗಟ್ಟೆ ತೆರೆದಿರಲಿಲ್ಲ. ಈ ಕಟ್ಟಡದಲ್ಲಿ 3 ಕೊಠಡಿಗಳಿದ್ದು, ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಸಿಮೆಂಟ್‌ ಹಾಕಿರುವುದು ಎದ್ದು ಹೋಗಿ, ಕೆಲವೆಡೆಗಳಲ್ಲಿ ಗೋಡೆ ಮಾತ್ರ ಕಾಣುತ್ತಿದೆ. ಶಿಥಿಲಗೊಂಡ ಈ ಕಟ್ಟಡದಲ್ಲಿ ಮುಂಜಾಗ್ರತ ಕ್ರಮವಾಗಿ ಕಳೆದ ವರ್ಷದ ಜುಲೈನಿಂದ ಮಕ್ಕಳಿಗೆ ತರಗತಿ ನಡೆಸಲಾಗುತ್ತಿಲ್ಲ. ಕಟ್ಟಡವೂ ರಸ್ತೆ ಬದಿಯೇ ಇರುವುದರಿಂದ ಗಾಳಿ – ಮಳೆ ಬಂದಾಗ ಕುಸಿದು, ಏನಾದರೂ ಅನಾಹುತ ಸಂಭವಿಸುವ ಸಾಧ್ಯತೆಗಳು ಇವೆ.

ತೆರವಿಗೆ ಸೂಚನೆ
ಎಸ್‌ಡಿಎಂಸಿಯವರ ಮನವಿಗೆ ಸ್ಪಂದಿಸಿರುವ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್‌ ಬಾಯಲ್‌ ಅವರು, ಶಿಥಿಲಗೊಂಡ ಈ ಕಟ್ಟಡವನ್ನು ತೆರವುಗೊಳಿಸುವ ಸಂಬಂಧ ಪರಿಶೀಲಿಸಿ, ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿಯ ಉಪನಿರ್ದೇಶಕರಿಗೆ ಪತ್ರದ ಮೂಲಕ ಸೂಚಿಸಿದ್ದಾರೆ.

ಶೀಘ್ರ ತೆರವಿಗೆ ಆದೇಶ
ಹಟ್ಟಿಯಂಗಡಿ ಶಾಲೆಯ ಶಿಥಿಲ ಕಟ್ಟಡ ತೆರವಿಗೆ ಸಂಬಂಧಿಸಿದಂತೆ ನಾವು ಪಂಚಾಯತ್‌ ರಾಜ್‌ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಅವರಿಗೆ ಅಂದಾಜು ಪಟ್ಟಿ ಹಾಗೂ ತಾಂತ್ರಿಕ ವರದಿ ಕೊಡುವಂತೆ ಮನವಿ
ಸಲ್ಲಿಸಲಾಗಿದೆ. ಅದರಂತೆ ಅಲ್ಲಿಗೆ ಸಂಬಂಧಪಟ್ಟ ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿ, ವರದಿ ತಯಾರಿಸಿದ್ದು, ಆದಷ್ಟು ಬೇಗ ಶಿಥಿಲ ಕಟ್ಟಡ ತೆರವಿಗೆ ಆದೇಶ ಆಗಲಿದೆ.
*ನಾಗೇಶ್‌ ನಾಯ್ಕ,
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ

ಅಪಾಯಕಾರಿ ಕಟ್ಟಡದ ತೆರವಿಗೆ ತತ್‌ಕ್ಷಣ ಕ್ರಮಕೈಗೊಳ್ಳಿ
ಶಿಥಿಲಗೊಂಡ ಕಟ್ಟಡದ ತೆರವಿಗೆ ಕಳೆದ ಜುಲೈನಲ್ಲಿ ಸಂಬಂಧಪಟ್ಟ ಎಲ್ಲ ಇಲಾಖೆಗಳ ಗಮನಕ್ಕೆ ತಂದರೂ ಇಲ್ಲಿಯವರೆಗೆ ತೆರವು ಕಾರ್ಯ ಕೈಗೊಂಡಿಲ್ಲ. ಕಟ್ಟಡ ರಸ್ತೆಗೆ ಹತ್ತಿರವಿರುವುದರಿಂದ ಮಳೆಗಾಲದಲ್ಲಿ ಮಕ್ಕಳಿಗೆ, ಸಾರ್ವಜನಿಕರಿಗೂ ಅಪಾಯಕಾರಿಯಾಗಿದೆ. ಶೀಘ್ರ ಈ ಕಟ್ಟಡ ತೆರವಿಗೆ ಸಂಬಂಧಪಟ್ಟ ಇಲಾಖೆ ಕ್ರಮಕೈಗೊಳ್ಳಬೇಕು.
*ಮಹೇಶ್‌ ದೇವಾಡಿಗ ಎಚ್‌., ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ

*ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-wwewe

Delhi Airport; ಮೋದಿ ಉದ್ಘಾಟಿಸಿದ್ದ ಟರ್ಮಿನಲ್‌: ಖರ್ಗೆ ಆರೋಪ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಬಸ್‌ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Kundapura ಬಸ್‌ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

ಶಾಲಾ ಬಸ್ಸಿಗೆ ಕಾರು ಢಿಕ್ಕಿ ; ತಪ್ಪಿದ ಭಾರೀ ಅನಾಹುತ

School ಬಸ್ಸಿಗೆ ಕಾರು ಢಿಕ್ಕಿ ; ತಪ್ಪಿದ ಭಾರೀ ಅನಾಹುತ

ಮರವಂತೆ ಹೊರಬಂದರು: ಕಡಲ ಒಡಲು ಸೇರುತ್ತಿರುವ ತಡೆಗೋಡೆ, ಕೊರೆತವೂ ಶುರು

ಮರವಂತೆ ಹೊರಬಂದರು: ಕಡಲ ಒಡಲು ಸೇರುತ್ತಿರುವ ತಡೆಗೋಡೆ, ಕೊರೆತವೂ ಶುರು

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

Missing Case: ಮನೆಬಿಟ್ಟು ಹೋದಾತ ನಾಪತ್ತೆ; ದೂರು ದಾಖಲು

Missing Case: ಮನೆಬಿಟ್ಟು ಹೋದಾತ ನಾಪತ್ತೆ; ದೂರು ದಾಖಲು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-wwewe

Delhi Airport; ಮೋದಿ ಉದ್ಘಾಟಿಸಿದ್ದ ಟರ್ಮಿನಲ್‌: ಖರ್ಗೆ ಆರೋಪ

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.