Kundapura; ರೈಲಿನಿಂದ ಬಿದ್ದ ಯುವಕನ ರಕ್ಷಣೆ
Team Udayavani, Oct 18, 2024, 1:10 AM IST
ಕುಂದಾಪುರ: ಸೇನಾಪುರ ರೈಲು ನಿಲ್ದಾಣದ ಸಮೀಪ ಬುಧವಾರ ತಡರಾತ್ರಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ಯುವಕನನ್ನು ರಕ್ಷಿಸಿ, ಚಿಕಿತ್ಸೆ ಕೊಡಿಸಿದ ಘಟನೆ ನಡೆದಿದೆ.
ಮಧ್ಯಪ್ರದೇಶ ರಾಜ್ಯದ ಭೋಪಾಲ್ ಮೂಲದ ರಂಜಿತ್ ಅಗರವಾಲ್ (28) ಗಾಯಗೊಂಡ ಯುವಕ. ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.
ಬುಧವಾರ ತಡರಾತ್ರಿ 2.45 ಗಂಟೆ ವೇಳೆಗೆ ಸೇನಾಪುರ ರೈಲು ನಿಲ್ದಾಣ ಸಮೀಪ ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದ. ರಾತ್ರಿಯಲ್ಲೇ ರಕ್ತಸಿಕ್ತ ಬಟ್ಟೆಯೊಂದಿಗೆ, ಹತ್ತಿರದ ಮನೆಗಳ ಸಮೀಪ ತೆರಳಿ ಭಯದ ವಾತಾವರಣ ಸೃಷ್ಟಿಸಿದ್ದ. ತತ್ಕ್ಷಣ ಸ್ಥಳೀಯ ಅಂಬೇಡ್ಕರ್ ನಗರದ ನಿವಾಸಿಗಳು ಪೊಲೀಸರು ಹಾಗೂ ಗಂಗೊಳ್ಳಿಯ ಆ್ಯಂಬುಲೆನ್ಸ್ನ ಇಬ್ರಾಹಿಂ ಗಂಗೊಳ್ಳಿ ಅವರಿಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಇಬ್ರಾಹಿಂ ಗಂಗೊಳ್ಳಿ, ಅಬ್ರಾರ್ ಗಂಗೊಳ್ಳಿ, ಗಂಗೊಳ್ಳಿ ಪೊಲೀಸ್ ಮುಖ್ಯ ಪೇದೆ ಶಾಂತಾರಾಮ್ ಶೆಟ್ಟಿ, ಚಾಲಕ ದಿನೇಶ್ ಅವರು ಆತನನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
Mumbai: ಅರಬಿ ಸಮುದ್ರದಲ್ಲಿ ರತನ್ ಟಾಟಾ ಚಿತಾ ಭಸ್ಮ ವಿಸರ್ಜನೆ
Bollywood Actor: ಸಲ್ಮಾನ್ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್: ಪೊಲೀಸ್
By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ
Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.