Kundapura: ವೈದ್ಯರ ವಿರುದ್ಧದ ಪ್ರತಿಭಟನೆ ತಾತ್ಕಾಲಿಕ ಸ್ಥಗಿತ

ಹೆರಿಗೆ ವೇಳೆ ಮಗು ಮೃತಪಟ್ಟ ಪ್ರಕರಣ

Team Udayavani, Nov 21, 2023, 11:48 PM IST

Kundapura: ವೈದ್ಯರ ವಿರುದ್ಧದ ಪ್ರತಿಭಟನೆ ತಾತ್ಕಾಲಿಕ ಸ್ಥಗಿತ

ಕುಂದಾಪುರ: ಹೆರಿಗೆ ವೇಳೆ ಮಗು ಮೃತಪಟ್ಟ ಪ್ರಕರಣದಲ್ಲಿ ವೈದ್ಯರಿಬ್ಬರ ವಿರುದ್ಧ ಇಲ್ಲಿನ ಸರಕಾರಿ ಆಸ್ಪತ್ರೆ ಎದುರು ಅಹೋರಾತ್ರಿ ನಡೆದ ಪ್ರತಿಭಟನೆ ಮಂಗಳವಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿತು.

ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ, ಎಸ್‌ಪಿ ಡಾ| ಅರುಣ್‌, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್‌., ಆರೋಗ್ಯ ಇಲಾಖೆ ಮೈಸೂರು ವಿಭಾಗ ಜಂಟಿ ನಿರ್ದೇಶಕಿ ಡಾ| ರಾಜೇಶ್ವರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಪ್ರತಿಭಟನಕಾರರ ಜತೆ ಮಾತುಕತೆ ನಡೆಸಿದರು.

ತಪ್ಪಿತಸ್ಥ ವೈದ್ಯರನ್ನು ತತ್‌ಕ್ಷಣ ಸೇವೆಯಿಂದ ಅಮಾನತು ನಡೆಸಬೇಕು, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಕೊಲೆ ಪ್ರಕರಣ ದಾಖಲಿಸಬೇಕು, ಇನ್ನು ಮುಂದೆ ಇಂತಹ ದುರ್ಘ‌ಟನೆಗಳು ನಡೆಯಬಾರದು, ಕಳೆದ 1 ವರ್ಷದಲ್ಲಿ ನಡೆದ ಇಂತಹ ಪ್ರಕರಣಗಳ ತನಿಖೆ ನಡೆಸಬೇಕು, ಕಳೆದ ಕೆಲವು ವರ್ಷಗಳಿಂದ ಆಸ್ಪತ್ರೆಯಲ್ಲೇ ಠಿಕಾಣಿ ಹೂಡಿದವರನ್ನು ವರ್ಗ ಮಾಡಬೇಕು, ಸರಕಾರಿ ಕರ್ತವ್ಯದ ವೇಳೆ ಖಾಸಗಿ ಕ್ಲಿನಿಕ್‌ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವವರನ್ನು ಕೆಲಸ ದಿಂದ ತೆಗೆಯಬೇಕು ಮೊದಲಾದ ಬೇಡಿಕೆ ಗಳನ್ನು ಪ್ರತಿಭಟನಕಾರರು ಇಟ್ಟರು.

ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣದಲ್ಲಿ ತತ್‌ಕ್ಷಣ ಅಮಾನತು ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಇಲ್ಲಿಂದ ಬೇರೆ ಕಡೆಗೆ ವರ್ಗ ಮಾಡಲಾಗುವುದು. ಪರಿಣತ ವೈದ್ಯರ ಸಮಿತಿ ರಚಿಸಿ ಆ ಸಮಿತಿ ತನಿಖೆ ನಡೆಸಿ ನೀಡಿದ ವರದಿ ಆಧಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಘಟನೆ ಕುರಿತು ವಿಷಾದವಿದೆ ಎಂದು ಅಧಿಕಾರಿಗಳು ಭರವಸೆ ನೀಡಿದರು.

1 ವಾರ ತನಕ ಕಾದು ಮುಂದಿನ ಹೋರಾಟ ಮುಂದುವರಿಸಲಾಗು ವುದು. ಅದಕ್ಕಾಗಿ ಪ್ರತ್ಯೇಕ ಹೋರಾಟ ಸಮಿತಿ ರಚಿಸಲಾಗುವುದು. ಆ ಸಮಿತಿಯ ತೀರ್ಮಾನದಂತೆ ಅವಶ್ಯ ವಿದ್ದರೆ ಕುಂದಾಪುರ, ಗಂಗೊಳ್ಳಿ ಬಂದ್‌ ಕೂಡ ಮಾಡಲಾಗು ವುದು ಎಂದು ನಿರ್ಧರಿಸಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಗಂಗೊಳ್ಳಿ, ಕುಂದಾಪುರ ಅಲ್ಲದೇ ತಾಲೂಕಿನ ವಿವಿಧೆಡೆಯಿಂದ ಪ್ರತಿಭಟನೆಗಾಗಿ ಜನ ಆಗಮಿಸಿದ್ದರು. 8 ತಿಂಗಳು ತುಂಬಿದಾಗ ಮಾಡ ಬೇಕಾದ ಸ್ಕ್ಯಾನಿಂಗ್‌ ಮಾಡಿರಲಿಲ್ಲ. ಈಗ ಮಾಡಿ ಎಂದಾಗ ವೈದ್ಯರು ಮಾಡಲಿಲ್ಲ. ಶುಕ್ರವಾರ ದಾಖಲಿಸಿ ದರೂ ಸೋಮವಾರ ಹೆರಿಗೆ ಮಾಡಿಸಿದರು. ಉಡಾಫೆಯಿಂದ ಮಾತನಾಡಿದರು.

ಇಂತಹ ಪ್ರಕರಣಗಳು ನಡೆಯುತ್ತಿರುತ್ತವೆ ಎಂದು ಬೇಜವಾಬ್ದಾರಿ ಯಿಂದ ಹೇಳಿದರು ಎಂದು ವೈದ್ಯರ ಮೇಲೆ ಸಂತ್ರಸ್ತ ಶ್ರೀನಿವಾಸ ಖಾರ್ವಿ ಆರೋಪಿಸಿದ್ದರು. ಇಬ್ಬರು ವೈದ್ಯರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ಆಸ್ಪತ್ರೆ ಮೂಲಗಳ ಪ್ರಕಾರ ಸಂತ್ರಸ್ತರು, ಪ್ರತಿಭಟನಕಾರರು ಆರೋಪಿಸುತ್ತಿರುವವರ ಪೈಕಿ ಒಬ್ಬ ವೈದ್ಯರು ಮೂರು ದಿನಗಳ ಕಾಲದ ರಜೆಯಲ್ಲಿದ್ದರು. ಹೆರಿಗೆ ವೇಳೆ ಮಗುವಿನ ಕುತ್ತಿಗೆಗೆ ಕರುಳಿನ ಬಳ್ಳಿ 6 ಸುತ್ತು ಸುತ್ತಿರುವುದು ಕರ್ತವ್ಯದಲ್ಲಿದ್ದ ವೈದ್ಯರಿಗೆ ಗೊತ್ತಾದಾಗ ಚಿಕಿತ್ಸೆ ಸಂದರ್ಭ ಮಾರ್ಗದರ್ಶನಕ್ಕಾಗಿ ಹಿರಿಯ ವೈದ್ಯರನ್ನು ವಿನಂತಿಸಿದ್ದರು. ಅದರಂತೆ ಅವರು ಮಾನವೀಯ ನೆಲೆಯಲ್ಲಿ ರಜೆಯಲ್ಲಿದ್ದರೂ ಸಹ ವೈದ್ಯರಿಗೆ ಮಾರ್ಗದರ್ಶನ ಮಾಡಲು ಆಸ್ಪತ್ರೆಗೆ ಆಗಮಿಸಿದ್ದರು. ಹಾಗಿದ್ದರೂ ಮಗುವನ್ನು ಉಳಿಸಲಾಗಲಿಲ್ಲ. ತಾಯಿ ಆರೋಗ್ಯ ವಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಹೆರಿಗೆ ದಿನಗಳು ಭರ್ತಿ ಯಾಗಿರಲಿಲ್ಲ, ಕೊನೆ ಕ್ಷಣದಲ್ಲಿ ಸ್ಕ್ಯಾನಿಂಗ್‌ ಮಾಡಿದರೆ ಮಗುವಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಮಾಡಿರಲಿಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.