Kundapura: ಲೈಂಗಿಕ ಕಿರುಕುಳ ಸಹಿತ ವಿವಿಧ ಕಿರುಕುಳ: ಡಾ| ರಾಬರ್ಟ್ ಅಮಾನತು
Team Udayavani, Jun 4, 2024, 10:00 PM IST
ಕುಂದಾಪುರ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಆಡಳಿತ ಶಸ್ತ್ರ ಚಿಕಿತ್ಸಕ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ರಾಬರ್ಟ್ ರೆಬೆಲ್ಲೊ ಅವರನ್ನು ಮಂಗಳವಾರ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಈ ಬಗ್ಗೆ ಆರೋಗ್ಯ ಇಲಾಖೆಯ ಆಯುಕ್ತ ಡಿ. ರಂದೀಪ್ ಆದೇಶ ಹೊರಡಿಸಿದ್ದು, ವೈದ್ಯಾಧಿಕಾರಿ ಮೇಲೆ ಸಾರ್ವಜನಿಕರು ಆರೋಗ್ಯ ಸಚಿವರಿಗೆ ಸಲ್ಲಿಸಿದ ರೋಗಿಗಳ ಜತೆಗಿನ ದುರ್ನಡತೆಯ ದೂರು ಅರ್ಜಿ, ಸಹ ವೈದ್ಯೆಯಿಂದ ಲೈಂಗಿಕ ಕಿರುಕುಳ ಕುರಿತು ದಾಖಲಾದ ಪ್ರಕರಣ, ಈ ಸಂಬಂಧ ಪೊಲೀಸ್ ನಿರೀಕ್ಷಕರಿಂದ ಬಂದ ಪತ್ರ, ಆಸ್ಪತ್ರೆ ಆವರಣದಲ್ಲಿ ಕೊಳಚೆ ನೀರು, ತ್ಯಾಜ್ಯ ಹರಿದು ರೋಗಬಾಧೆ ಬರಲು ಆಸ್ಪದವಿದ್ದರೂ ನಿರ್ಲಕ್ಷ್ಯ ಮಾಡಿದ ಆರೋಪಗಳಿಗಾಗಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಿದ್ದಾರೆ.
ಜೀವನ ನಿರ್ವಹಣೆ ಭತ್ತೆಗಾಗಿ ಮೂಡಿಗೆರೆ ಸಾರ್ವಜನಿಕ ಆಸ್ಪತ್ರೆಯ ಇಎನ್ಟಿ ವೈದ್ಯರ ಹುದ್ದೆಯ ಸ್ಥಳ ನಿಗದಿ ಮಾಡಲಾಗಿದೆ. ಆಯುಕ್ತರ ಅನುಮತಿ ವಿನಾ ಕೇಂದ್ರ ಸ್ಥಳ ಬಿಡದಂತೆ ಸೂಚಿಸಲಾಗಿದೆ. ಸದ್ಯ ಡಾ| ರಾಬರ್ಟ್ ತಲೆಮರೆಸಿಕೊಂಡಿದ್ದಾರೆ. ನಿರೀಕ್ಷಣ ಜಾಮೀನಿಗೆ ಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.