Kundapura ಆಸ್ಪತ್ರೆಗಿಲ್ಲ ಕ್ಯಾಂಟೀನ್‌; ರೋಗಿಗಳು, ಸಹಾಯಕರ ಪರದಾಟ

6 ವರ್ಷಗಳ ಹಿಂದೆ ತೆರವಾದದ್ದು ಮತ್ತೆ ತೆರೆದಿಲ್ಲ

Team Udayavani, Aug 22, 2024, 5:41 PM IST

7

ಕುಂದಾಪುರ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 6 ವರ್ಷಗಳಿಂದ ಕ್ಯಾಂಟಿನ್‌ ಸೌಲಭ್ಯ ಇಲ್ಲ. ಇದರಿಂದ  ಒಳರೋಗಿಗಳು, ಅವರ ಸಹಾಯಕರು ಮತ್ತು ಹೊರರೋಗಿಗಳಾಗಿ ಬರುವವರಿಗೆ ಸಮಸ್ಯೆ ಆಗುತ್ತಿದೆ.

ಭಟ್ಕಳ, ಬ್ರಹ್ಮಾವರ, ಬೈಂದೂರು, ಹೆಬ್ರಿ ಸೇರಿದಂತೆ ಸುತ್ತಲ ಅನೇಕ ಊರುಗಳಿಂದ ಇಲ್ಲಿಗೆ ರೋಗಿಗಳು ಆಗಮಿಸುತ್ತಾರೆ. ಈ ಉಪವಿಭಾಗ ಸರಕಾರಿ ಆಸ್ಪತ್ರೆಯಲ್ಲಿ ದಿನದ 24 ಗಂಟೆಗಳ ಕಾಲವೂ ಚಿಕಿತ್ಸೆ ಲಭ್ಯವಿದೆ. ನಿತ್ಯ ಈ ಆಸ್ಪತ್ರೆಗೆ 450ಕ್ಕೂ ಹೆಚ್ಚು ಹೊರ ಮತ್ತು 110ರಷ್ಟು ಒಳ ರೋಗಿಗಳು ಬಂದು ಚಿಕಿತ್ಸೆ ಪಡೆಯುತ್ತಾರೆ. ಹೆರಿಗೆಯಲ್ಲೂ ರಾಜ್ಯಮಟ್ಟದಲ್ಲಿ ಅತ್ಯಧಿಕ ಹೆರಿಗೆಯಾದ ಆಸ್ಪತ್ರೆ ಎಂದು ಗುರುತಿಸಲ್ಪಟ್ಟಿದೆ.

2018ರವರೆಗೆ ಈ ಆಸ್ಪತ್ರೆ ವಠಾರದಲ್ಲಿ  ಇದ್ದ ಕ್ಯಾಂಟೀನನ್ನು ಯಾವುದೋ ಕಾರಣಕ್ಕೆ ತೆರವು ಮಾಡಿದ್ದು, ಬಳಿಕ ಪುನರಾರಂಭ ಆಗಲಿಲ್ಲ. ತಾಯಿ ಮಕ್ಕಳ ಆಸ್ಪತ್ರೆಗೆ ಜಿ.ಶಂಕರ್‌ ಅವರಿಂದ 5 ಕೋ.ರೂ. ವೆಚ್ಚದಲ್ಲಿ ಉಚಿತವಾಗಿ ಕಟ್ಟಡ ನಿರ್ಮಾಣವಾಗಿದೆ. ಈ ಕಟ್ಟಡದಲ್ಲಿ ಕೂಡಾ ಕ್ಯಾಂಟಿನ್‌ ಸೌಲಭ್ಯವನ್ನು ಆಸ್ಪತ್ರೆ ಆಡಳಿತ ಮಾಡಲೇ ಇಲ್ಲ. ಈಗಲೂ ಆಸ್ಪತ್ರೆಯ ಆಹಾರ ವಿಭಾಗ ಹೊರತಾದರೆ ಹಣ ಪಾವತಿಸಿ ಆಹಾರ ಖರೀದಿಗೆ ಆಸ್ಪತ್ರೆ ವಠಾರದಲ್ಲಿ ವ್ಯವಸ್ಥೆ ಇಲ್ಲ.

ಕ್ಯಾಂಟೀನ್‌ಗೆ ಜಾಗ ಇದೆ
ಹಳೆ ಕ್ಯಾಂಟೀನ್‌ ಇದ್ದ ಜಾಗದಲ್ಲಿ ಈಗ ಹಾಲಿನ ಅಂಗಡಿ ಇದೆ. ಆದರೆ ಪಾರ್ಕಿಂಗ್‌ ತಾಣ ಸೇರಿದಂತೆ ಆಸ್ಪತ್ರೆಯ ಒಳಗೆ ಹಾಗೂ ಹೊರಗೆ ಪ್ರತ್ಯೇಕವಾದ ವಿಶಾಲ ಜಾಗವಿದೆ. ಈ ಹಿಂದೆ ಆಸ್ಪತ್ರೆಯೊಳಗೆ ಕ್ಯಾಂಟೀನ್‌ ರಚನೆ ಪ್ರಸ್ತಾವ‌ ಬಂದಾಗ ಆರೋಗ್ಯದ ಹಿತದೃಷ್ಟಿ, ಸ್ವತ್ಛತೆಯ ದೃಷ್ಟಿಯಿಂದ ಒಳಗೆ ಅವಕಾಶ ನೀಡಿರಲಿಲ್ಲ.

ಪ್ರಯತ್ನ ಇದೆ
ಆಸ್ಪತ್ರೆ ವಠಾರದಲ್ಲಿ ಕ್ಯಾಂಟೀನ್‌ ಬೇಕೆಂಬ ಬೇಡಿಕೆ ಇದೆ. ಪ್ರಸ್ತುತ ನಾನು ಅಧಿಕಾರ ವಹಿಸಿ ಹೆಚ್ಚು ಸಮಯ ಆಗಿಲ್ಲ. ಒಂದೊಂದೇ ಕೆಲಸ ಕಾರ್ಯಗಳ ಕುರಿತು ಗಮನ ಹರಿಸಿ ಕ್ಯಾಂಟೀನ್‌ ಸೌಕರ್ಯ ಮಾಡುವ ಪ್ರಯತ್ನ ನಡೆಯಲಿದೆ.
ಡಾ| ಚಂದ್ರ ಮರಕಾಲ, ಆಡಳಿತ ಶಸ್ತ್ರಚಿಕಿತ್ಸಕ ವೈದ್ಯಾಧಿಕಾರಿ, ಕುಂದಾಪುರ

ಯಾಕೆ ಬೇಕು ಕ್ಯಾಂಟೀನ್‌?
ರೋಗಿಗಳಿಗೆ ಇಲ್ಲಿ ಉಚಿತ ಆಹಾರ ನೀಡುತ್ತಾರಾದರೂ  ಅವರ ಜತೆಗೆ ಇರುವವರಿಗೆ ಆಹಾರ ಬೇಕು. ಅನೇಕರಿಗೆ ಆಸ್ಪತ್ರೆ ಆಹಾರ ಹೊರತಾದ ಆಹಾರದ ಅಗತ್ಯವಿರುತ್ತದೆ.

ಜ ಬೆಳಗ್ಗೆ 4 ಗಂಟೆಯಿಂದ ನಗರದಲ್ಲಿ ರೋಗಿಗಳ ಜತೆ ಬಂದವರು ಬಿಸಿನೀರು, ಚಹಾಗಾಗಿ ಅಲೆಯುತ್ತಾರೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.