‌ಕುಂದಾಪುರ: ಅತಂತ್ರವಾಗಿಯೇ ಉಳಿದ ಸೇನಾಪುರ ಗ್ರಾಮ

ಸೇನಾಪುರ ಗ್ರಾಮವನ್ನು ಸ್ವತಂತ್ರ ಗ್ರಾ.ಪಂ. ಆಗಿ ಘೋಷಿಸಬೇಕು

Team Udayavani, Feb 24, 2023, 11:43 AM IST

‌ಕುಂದಾಪುರ: ಅತಂತ್ರವಾಗಿಯೇ ಉಳಿದ ಸೇನಾಪುರ ಗ್ರಾಮ

ಕುಂದಾಪುರ: ಸರಿ ಸುಮಾರು 3 ವರ್ಷಗಳ ಹಿಂದೆ ನಾಡ ಗ್ರಾ.ಪಂ.ನಿಂದ ಬೇರ್ಪಟ್ಟು, ಹೊಸಾಡು ಗ್ರಾ.ಪಂ.ಗೆ ಸೇರಿಸಿದಾಗ ಪ್ರತ್ಯೇಕ ಗ್ರಾ.ಪಂ.ಗೆ ಬೇಡಿಕೆಯಿಟ್ಟ ಸೇನಾಪುರ ಗ್ರಾಮದ ಬಗ್ಗೆ ಸರಕಾರ ಯಾವುದೇ ನಿರ್ಧಾರಕ್ಕೆ ಬಾರದ ಕಾರಣ, ಇನ್ನೂ ಅತಂತ್ರವಾಗಿಯೇ ಉಳಿದಿದೆ.

ಅತ್ತ ಸ್ವತಂತ್ರವೂ ಇಲ್ಲದೇ, ಗ್ರಾಮದ ಅಭಿವೃದ್ಧಿಗೂ ಮನ್ನಣೆ ಸಿಗದೇ, ಅತಂತ್ರ ಗ್ರಾಮವಾಗಿಯೇ ಉಳಿದಿದೆ. ಗ್ರಾಮಸ್ಥರ ಬೇಡಿಕೆಯನ್ನು ಯಾರೂ ಕೇಳುವವರೇ ಇಲ್ಲವಾಗಿದೆ. ಕುಡಿಯುವ ನೀರಿನ ಸಮಸ್ಯೆ ತಲೆದೋರಿದರೆ ಬಗೆಹರಿಸುವವರೇ ಇಲ್ಲವಾಗಿದೆ. ಇನ್ನೂ ಸರಕಾರದಿಂದ ಸಿಗಬೇಕಿರುವ ಕೆಲವೊಂದು ಸವಲತ್ತುಗಳು ಗ್ರಾಮಸ್ಥರಿಗೆ ಸಿಗುತ್ತಿಲ್ಲ ಎನ್ನುವ ಆರೋಪ ಗ್ರಾಮಸ್ಥರದ್ದಾಗಿದೆ.

ನಾಡ ಗ್ರಾ.ಪಂ. ಬೈಂದೂರು ತಾಲೂಕಿಗೆ ಸೇರಿದ್ದರಿಂದ ಸೇನಾಪುರವನ್ನು ಬೇರ್ಪಡಿಸಿ ಕುಂದಾಪುರ ತಾಲೂಕಿನ ಹೊಸಾಡು ಗ್ರಾ.ಪಂ.ಗೆ ಸೇರಿಸಲಾಗಿತ್ತು. ಆದರೆ ಹೊಸಾಡು ಪಂಚಾಯತ್‌ ಕಚೇರಿ ಸೇನಾಪುರದಿಂದ 8-10 ಕಿ.ಮೀ. ದೂರ ಇರುವುದರಿಂದ ಅಲ್ಲಿನ ಗ್ರಾಮಸ್ಥರು ವಿರೋಧಿಸಿದ್ದರು.

ಇದಲ್ಲದೆ 7 ಗ್ರಾ.ಪಂ. ಸದಸ್ಯರಿದ್ದು, 2011ರ ಗಣತಿ ಪ್ರಕಾರ 2,572 ಮತದಾರರಿದ್ದು, 1,651.44 ಎಕರೆ ವಿಸ್ತೀರ್ಣ ಹೊಂದಿರುವ ಸೇನಾಪುರ ಗ್ರಾಮವನ್ನು ಸ್ವತಂತ್ರ ಗ್ರಾ.ಪಂ. ಆಗಿ ಘೋಷಿಸಬೇಕು ಎನ್ನುವುದಾಗಿ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಇದಲ್ಲದೆ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಗೂ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಇನ್ನೂ ಇತ್ಯರ್ಥಗೊಂಡಿಲ್ಲ.

ಸರಕಾರದ ಗಮನಕ್ಕೆ
ಸೇನಾಪುರ ಗ್ರಾಮಸ್ಥರ ಬೇಡಿಕೆಯಂತೆ ಪ್ರತ್ಯೇಕ ಗ್ರಾ.ಪಂ. ರಚಿಸಬೇಕು ಎನ್ನುವುದಾಗಿ ಸ್ವತಃ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಆದರೆ ಸರಕಾರದ ಮುಂದೆ ಸದ್ಯಕ್ಕೆ ಹೊಸ ಗ್ರಾ.ಪಂ. ರಚನೆ ಪ್ರಸ್ತಾವನೆ ಇಲ್ಲದಿರುವುದರಿಂದ ವಿಳಂಬವಾಗುತ್ತಿದೆ. ಇದಲ್ಲದೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರ. ಕಾರ್ಯದರ್ಶಿಯೊಂದಿಗೂ ನಿರಂತರವಾಗಿ ಮಾತುಕತೆ ನಡೆಸಲಾಗುತ್ತಿದೆ.
– ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

Fake Document  ಸೃಷ್ಟಿಸಿ ವಾಹನ ನೋಂದಣಿ: ದೂರು ದಾಖಲು

Fake Document ಸೃಷ್ಟಿಸಿ ವಾಹನ ನೋಂದಣಿ: ದೂರು ದಾಖಲು

Kundapura ವಂಚನೆ: ಫೈನಾನ್ಸ್‌ ಸಿಬಂದಿ ವಿರುದ್ಧ ದೂರು

Kundapura ವಂಚನೆ: ಫೈನಾನ್ಸ್‌ ಸಿಬಂದಿ ವಿರುದ್ಧ ದೂರು

kuKundapura ಪ್ರತ್ಯೇಕ ಪ್ರಕರಣ: ಮೂವರು ದಿಢೀರ್‌ ಸಾವು

Kundapura ಪ್ರತ್ಯೇಕ ಪ್ರಕರಣ: ಮೂವರು ದಿಢೀರ್‌ ಸಾವು

Kundapura: ಊರಿಗೆ ಹೆಮ್ಮೆ: ಶಾಸಕ ಗಂಟಿಹೊಳೆ

Kundapura: ಊರಿಗೆ ಹೆಮ್ಮೆ: ಶಾಸಕ ಗಂಟಿಹೊಳೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.