Kundapura: ತಲ್ಲೂರು ಪೇಟೆಗೆ ಶೌಚಾಲಯ ಬೇಕು

ಮಳಿಗೆಗಳಲ್ಲಿ ಕೆಲಸ ಮಾಡುವವರಿಗೆ, ರಿಕ್ಷಾ, ಅನ್ಯ ವಾಹನ ಚಾಲಕರಿಗೆ ತೊಂದರೆ; ಹತ್ತಿರದ ಮನೆ, ಹೊಟೇಲ್‌ ಆಶ್ರಯಿಸಬೇಕು; ಹೆಣ್ಮಕ್ಕಳಿಗೆ ಹೇಳಲಾಗದ ಸಂಕಟ

Team Udayavani, Oct 27, 2024, 4:34 PM IST

7

ಕುಂದಾಪುರ: ಬೈಂದೂರು – ಕುಂದಾಪುರ ಹೆದ್ದಾರಿ ಹಾದುಹೋಗುವ, ಹತ್ತಾರು ಊರುಗಳನ್ನು ಸಂಪರ್ಕಿಸುವ ಪ್ರಮುಖ ಜಂಕ್ಷನ್‌ಗಳಲ್ಲಿ ಒಂದಾದ ತಲ್ಲೂರು ಪೇಟೆಯಲ್ಲಿ ಸಾರ್ವಜನಿಕ ಶೌಚಾಲಯವೇ ಇಲ್ಲ. ಹೌದು, ನೂರಕ್ಕೂ ಮಿಕ್ಕಿ ಮಳಿಗೆಗಳು, ನೂರಾರು ವಾಹನಗಳಿರುವ ಪ್ರಮುಖ ಪೇಟೆಯಾಗಿದ್ದರೂ, ಇಲ್ಲಿ ಜನರ ಬಳಕೆಗೆ ಒಂದು ಸಾರ್ವಜನಿಕ ಶೌಚಾಲಯ ಇಲ್ಲದೆ ಅಲ್ಲಿ ಉದ್ಯೋಗ ಮಾಡುವ ಮಹಿಳೆಯರು ಸೇರಿ ನೂರಾರು ಮಂದಿ ಸಮಸ್ಯೆ ಅನುಭವಿಸುತ್ತಿದ್ದಾರೆ.

ಪೇಟೆ ಅಂದ ಮೇಲೆ ಅಲ್ಲಿ ಸಾರ್ವಜನಿಕ ಶೌಚಾಲಯಗಳು ಇರಬೇಕಾದುದು ಇಂದಿನ ಅತೀ ಅಗತ್ಯಗಳಲ್ಲಿ ಒಂದು. ಅಂತದ್ದರಲ್ಲಿ ಕುಂದಾಪುರ – ಬೈಂದೂರು ಭಾಗದ ಪ್ರಮುಖ ಜಂಕ್ಷನ್‌ ಎಂದು ಕರೆಸಿಕೊಳ್ಳುವ ತಲ್ಲೂರು ಪೇಟೆಯಲ್ಲಿ ಇನ್ನೂ ಒಂದು ಸಾರ್ವಜನಿಕ ಶೌಚಾಲಯವಿಲ್ಲ. ಸಾರ್ವಜನಿಕ ಶೌಚಾಲಯವಿಲ್ಲದೆ, ಆ ಕಷ್ಟ ಅನುಭವಿಸಿದವರಿಗೇ ಗೊತ್ತು.

ನೂರಾರು ಮಂದಿಯ ನಿತ್ಯದ ಗೋಳು
ತಲ್ಲೂರು ಪೇಟೆಯನ್ನು ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿಯು ಇಬ್ಭಾಗಿಸುತ್ತದೆ. ಇಲ್ಲಿ ಎರಡೂ ಬದಿಯಲ್ಲಿ ಬದಿಯಲ್ಲಿ ಸುಮಾರು ನೂರಕ್ಕೂ ಮಿಕ್ಕಿ ವಾಣಿಜ್ಯ ಮಳಿಗೆಗಳು, ದಿನಸಿ ಅಂಗಡಿಗಳು, ಹೊಟೇಲ್‌, ಜ್ಯೂಸ್‌ ಪಾರ್ಲರ್‌, ಬಟ್ಟೆ, ಫ್ಯಾನ್ಸಿ, ಜೆರಾಕ್ಸ್‌, ಮೆಡಿಕಲ್‌, ತರಕಾರಿ ಅಂಗಡಿ, ಮೀನು ಮಾರುಕಟ್ಟೆ ಎಲ್ಲವೂ ಇದೆ. ಇಲ್ಲಿ ನೂರಾರು ಮಂದಿ ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ ಮುಖ್ಯವಾಗಿ ಯುವತಿಯರು, ಮಹಿಳೆಯರೇ ಹೆಚ್ಚಿನವರು ಕೆಲಸ ಮಾಡುತ್ತಿದ್ದಾರೆ. ಇನ್ನು ರಿಕ್ಷಾ ಚಾಲಕರು, ಟೆಂಪೋ, ಕಾರು ಚಾಲಕರು ಸೇರಿದಂತೆ ಅನೇಕ ಮಂದಿ ಬೆಳಗ್ಗೆಯಿಂದ ಸಂಜೆಯವರೆಗೆ ಈ ತಲ್ಲೂರು ಪೇಟೆಯನ್ನೇ ಆಶ್ರಯಿಸಿದ್ದಾರೆ.

ಹತ್ತಿರದ ಮನೆಗಳೇ ಆಶ್ರಯ
ತಲ್ಲೂರು ಪೇಟೆಯಲ್ಲಿ ಸಾರ್ವಜನಿಕ ಶೌಚಾಲಯವಿಲ್ಲದ ಕಾರಣ ಇಲ್ಲಿ ಮಳಿಗೆಗಳಲ್ಲಿ ಕೆಲಸ ಮಾಡುವ ಕೆಲವು ಯುವತಿಯರು, ಮಹಿಳೆಯರು ಹತ್ತಿರದ ಮನೆಗಳು ಅಥವಾ ಹೊಟೇಲ್‌ಗ‌ಳನ್ನು ಆಶ್ರಯಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದು ಕೆಲವರಿಗೆ ಒಂದು ರೀತಿಯ ಮುಜುಗರದ ಸಂಗತಿಯೂ ಹೌದು. ಆದಷ್ಟು ಬೇಗ ತಲ್ಲೂರು ಪೇಟೆಯಲ್ಲೊಂದು ಸುಸಜ್ಜಿತವಾದ ಸಾರ್ವಜನಿಕ ಶೌಚಾಲಯ ಆಗಲಿ ಅನ್ನುವುದು ಇಲ್ಲಿನ ಜನರ ಆಗ್ರಹವಾಗಿದೆ.

ಅತೀ ಅಗತ್ಯವಾಗಿ ಬೇಕು
ತಲ್ಲೂರು ಪೇಟೆ ಬೆಳೆಯುತ್ತಿದ್ದು, ಪೇಟೆ ಬೆಳೆದಂತೆ ಜನರ ಸಂಖ್ಯೆಯೂ ಹೆಚ್ಚುತ್ತಿದೆ. ಅಂಗಡಿಗಳು ಹೆಚ್ಚಾಗುತ್ತಿದೆ. ಹಾಗಾಗಿ ಈ ಬೆಳೆಯುತ್ತಿರುವ ಪೇಟೆಗೆ ಸಾರ್ವಜನಿಕ ಶೌಚಾಲಯವೊಂದು ಅತೀ ಅಗತ್ಯವಾಗಿ ಬೇಕಾಗಿದೆ. ಸ್ಥಳೀಯ ಗ್ರಾ.ಪಂ. ಈ ನಿಟ್ಟಿನಲ್ಲಿ ಇಲ್ಲಿನ ಜನರ ಮುಖ್ಯವಾಗಿ ಮಹಿಳೆಯರ ಅನುಕೂಲಕ್ಕಾಗಿ ಮುತುವರ್ಜಿ ವಹಿಸಬೇಕಾಗಿದೆ.
– ಸಂದೀಪ್‌, ರಿಕ್ಷಾ ಚಾಲಕರು, ತಲ್ಲೂರು

ನಿರ್ಮಾಣಕ್ಕೆ ಪ್ರಯತ್ನ
ತಲ್ಲೂರಲ್ಲಿ ಪೇಟೆಯಲ್ಲಿ ಸಾರ್ವಜನಿಕ ಶೌಚಾಲಯ ಬೇಡಿಕೆ ಬಗ್ಗೆ ಗಮನದಲ್ಲಿದ್ದು, ಸದ್ಯ ನೀರಿನ ಸಮಸ್ಯೆ ಇದ್ದುದರಿಂದ ವಿಳಂಬ ಆಗಿದೆ. ಜೆಜೆಎಂನಡಿ ನೀರಿನ ಟ್ಯಾಂಕ್‌ ಆಗಲಿದ್ದು, ಆ ಬಳಿಕ ಶೌಚಾಲಯ ನಿರ್ಮಿಸಲಾಗುವುದು. ಮೀನಿನ ಮಾರುಕಟ್ಟೆಯಲ್ಲಿಯೂ ಶೌಚಾಲಯ ಅಗತ್ಯವಿರುವುದು ಗಮನದಲ್ಲಿದೆ.
– ಗಿರೀಶ್‌ ನಾಯ್ಕ, ಅಧ್ಯಕ್ಷ, ತಲ್ಲೂರು ಗ್ರಾ.ಪಂ..

ಟಾಪ್ ನ್ಯೂಸ್

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ

1-mp-lungi

Video Viral; ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!: ಮಹಿಳೆಯೊಂದಿಗೆ ಅಸಭ್ಯ ವರ್ತನೆ

BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

MB Patil 2

Waqf; ವಿಜಯಪುರದಲ್ಲಿ ಗೆಜೆಟ್ ದೋಷದಿಂದ ರೈತರ ಜಮೀನಿನಲ್ಲಿ ಗೊಂದಲ: ಎಂ.ಬಿ.ಪಾಟೀಲ

14

ಶೋಭಿತಾ ಜತೆ ಮದುವೆ ಹಿನ್ನೆಲೆ ಮಾಜಿ ಪತ್ನಿ ಜತೆಗಿನ ಕೊನೆಯ ಫೋಟೋ ಡಿಲೀಟ್‌ ಮಾಡಿದ ನಾಗಚೈತನ್ಯ

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

IPL 2025: Here is the list of players that Chennai Super Kings will retain

IPL 2025: ಇಲ್ಲಿದೆ ನೋಡಿ ಚೆನ್ನೈ ಸೂಪರ್‌ ಕಿಂಗ್ಸ್‌ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12(1)

Kota: ದುರಸ್ತಿಗಾಗಿ ಕಾಯುತ್ತಿವೆ ಹೆದ್ದಾರಿ ಗುಂಡಿಗಳು

11

Kaup ಕೊಳಚೆ ನೀರಿಗೆ ಇಲ್ಲಿದೆ ಪರಿಹಾರ!

10

Malpe: ಸಿದ್ಧಗೊಳ್ಳುತ್ತಿವೆ ಸಾಂಪ್ರದಾಯಿಕ ಗೂಡುದೀಪಗಳು

9(2)

Udupi: ಮೂಲೆಗುಂಪಾದ ಹೊಸ ಅಗ್ನಿಶಾಮಕ ಠಾಣೆ ಬೇಡಿಕೆ

8(1)

Udupi: ಅಳಿವಿನಂಚಿನಲ್ಲಿರುವ ಪ್ರಾಚೀನ ಸ್ಮಾರಕಗಳ ರಕ್ಷಣೆಗೆ ಟೀಮ್‌ ತೌಳವ

MUST WATCH

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

ಹೊಸ ಸೇರ್ಪಡೆ

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ

1-mp-lungi

Video Viral; ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!: ಮಹಿಳೆಯೊಂದಿಗೆ ಅಸಭ್ಯ ವರ್ತನೆ

BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

MB Patil 2

Waqf; ವಿಜಯಪುರದಲ್ಲಿ ಗೆಜೆಟ್ ದೋಷದಿಂದ ರೈತರ ಜಮೀನಿನಲ್ಲಿ ಗೊಂದಲ: ಎಂ.ಬಿ.ಪಾಟೀಲ

13

Dandeli: ಕುಡಿದ ನಶೆಯಲ್ಲಿ ಮಾತಿಗೆ ಮಾತು ಬೆಳೆದು ಹಲ್ಲೆ; ಓರ್ವನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.