ಕುಂದಾಪುರ: ಮನೆ ಕೆಲಸ ಪೂರ್ಣಗೊಳಿಸಲು ಪಕ್ಕದ ಮನೆಯ ಚಿನ್ನ ಕದ್ದ! ; ಆರೋಪಿ ಅರೆಸ್ಟ್


Team Udayavani, Aug 11, 2022, 6:25 PM IST

ಕುಂದಾಪುರ: ಮನೆ ಕೆಲಸ ಪೂರ್ಣಗೊಳಿಸಲು ಪಕ್ಕದ ಮನೆಯ ಚಿನ್ನ ಕದ್ದ! ; ಆರೋಪಿ ಅರೆಸ್ಟ್

ಕುಂದಾಪುರ: ಮನೆ ಹಿಂಬಾಗಿಲು ಒಡೆದು ಚಿನ್ನಾಭರಣ ಹಾಗೂ ನಗದು ಕಳವುಗೈದ  ಆರೋಪಿಯನ್ನು  ಕುಂದಾಪುರ ನಗರ ಠಾಣೆ ಪೊಲೀಸರು ಆ.10 ರಂದು ಗೋಪಾಡಿ ಸಮೀಪ ಬಂಧಿಸಿದ್ದಾರೆ.

ಮೂಲತಃ ಮರವಂತೆಯ, ಪ್ರಸ್ತುತ ಕುಂಭಾಶಿ ವಿನಾಯಕ ನಗರಲ್ಲಿರುವ ಸುಭಾಶ್ಚಂದ್ರ ಆಚಾರ್ಯ (40) ಬಂಧಿತ. ಈತನಿಂದ 8 ಗ್ರಾಂನ ಚಿನ್ನದ ಬ್ರಾಸ್ಲೆಟ್‌, 12 ಗ್ರಾಂನ  ಪೆಂಡೆಂಟ್‌ ಸಹಿತ  ಚೈನ್‌, 4 ಗ್ರಾಂ, 3 ಗ್ರಾಂ ತೂಕದ ಚಿನ್ನದ ಉಂಗುರ,  1,610 ರೂ. ನಗದನ್ನು  ವಶಪಡಿಕೊಂಡಿದ್ದಾರೆ.

ಘಟನೆ ಹಿನ್ನೆಲೆ:

ಕುಂಭಾಶಿಯ ವಿನಾಯಕ ನಗರದ ಮಂಜುನಾಥ ಜೋಗಿ ಜು. 29 ರಂದು ಕುಟುಂಬ ಸಮೇತ ಫ‌ಂಡರಾಪುರ ಮತ್ತು ಶಿರ್ಡಿ ದೇವಸ್ಥಾನಕ್ಕೆ ತೀರ್ಥಯಾತ್ರೆ ತೆರಳಿದ್ದು  ಆ.5 ರಂದು ಮನೆಗೆ ಮರಳಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ಮನೆಯ ಹಿಂಬದಿಯ ಬಾಗಿಲು ಹಾಗೂ ಅಡುಗೆ ಮನೆಯ ಬಾಗಿಲನ್ನು ಒಡೆದು ಮನೆಯ ಕಪಾಟಿನಲ್ಲಿರಿಸಿದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ, ಕಪಾಟಿನಲ್ಲಿದ್ದ 1.20 ಲಕ್ಷ ರೂ. ಮೌಲ್ಯದ ಒಟ್ಟು  27 ಗ್ರಾಂ ಚಿನ್ನಾಭರಣಗಳು ಮತ್ತು 13,500 ರೂ. ನಗದನ್ನು ಕಳವು ಮಾಡಲಾಗಿತ್ತು.

ಇದನ್ನೂ ಓದಿ: ಕೊರ್ಗಿ: ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ-ಸುಲಿಗೆ; ಸಿಸಿ ಟಿವಿ ದೃಶ್ಯ ಆಧರಿಸಿ ಓರ್ವ ಬಂಧನ

ದಿಕ್ಕು ತಪ್ಪಿಸಲು ನೆರೆಮನೆ ಯವಕನ ಚಪ್ಪಲಿ ಕಳ್ಳತನ:

ಕಳ್ಳತನ ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ ಪೊಲೀಸರಿಗೆ ಆರಂಭದಲ್ಲಿ ಸ್ಥಳೀಯರೇ ಈ ಕೃತ್ಯ ನಡೆಸಿರುವುದು ದೃಢಪಟ್ಟಿತು. ಆದರೆ, ಪೊಲೀಸರ ದಿಕ್ಕು ತಪ್ಪಿಸಲು ಆರೋಪಿ ನೆರೆಮನೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಯುವಕನೋರ್ವನ ಚಪ್ಪಲಿಯನ್ನು ಕಳ್ಳತನ ನಡೆಸಿದ ಬಳಿಕ ಅಡುಗೆ ಮನೆಯಲ್ಲಿ ಇಟ್ಟು ಆ ಯುವಕನ ಮೇಲೆ ಸಂಶಯ ಬರುವಂತೆ ಮಾಡಿದ್ದ. ಚಪ್ಪಲಿ ಕಳ್ಳತನವಾದುದನ್ನು  ನೆರೆಮನೆಯ ಯುವಕ ಪೊಲೀಸರಲ್ಲಿ ಹೇಳಿದ ಬಳಿಕ ತನಿಖೆಯಲ್ಲಿ  ಆರೋಪಿ ಸೆರೆಯಾಗಿದ್ದಾನೆ.

ಸುಳಿವು:

ಸುಭಾಶ್ಚಂದ್ರ ಆಚಾರ್ಯ ಮನೆ ಕಟ್ಟುತ್ತಿದ್ದು ಹಣಕ್ಕಾಗಿ ಸಮೀಪದ ಮನೆಯಲ್ಲೇ ಕಳ್ಳತನ ನಡೆಸಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ. ಸೆಂಟ್ರಿಂಗ್‌ ಕೆಲಸ ಮಾಡಿಕೊಂಡಿದ್ದ ಈತ ಕಳವಿನ ಬಳಿಕ ಕೆಲಸಕ್ಕೆ ಹೋಗಿರಲಿಲ್ಲ. ಈತನ ಬ್ಯಾಂಕ್‌ ಖಾತೆಗೆ 20 ಸಾವಿರ ರೂ. ವರ್ಗಾವಣೆಯಾಗಿತ್ತು. ಪೊಲೀಸರಿಗೆ ಈತನ ಮೇಲೆ ಸಂಶಯ ಮೂಡಿ, ತಾಂತ್ರಿಕ ಸಹಾಯದ ಮೂಲಕ ನಿಖರಗೊಳಿಸಿ ಬಂಧಿಸಿದ್ದಾರೆ.

ತಂಡದಲ್ಲಿ ಎಸ್‌ಪಿ ವಿಷ್ಣುವರ್ಧನ್‌ ಎನ್‌., ಹೆಚ್ಚುವರಿ ಎಸ್‌ಪಿ ಎಸ್‌.ಟಿ. ಸಿದ್ದಲಿಂಗಪ್ಪ  ಮಾರ್ಗದರ್ಶನದಲ್ಲಿ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಶ್ರೀಕಾಂತ ಕೆ., ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ. ನಿರ್ದೇಶನದಲ್ಲಿ ಕುಂದಾಪುರ ಪೊಲೀಸ್‌ ಠಾಣೆಯ ತನಿಖಾ ವಿಭಾಗದ ಉಪನಿರೀಕ್ಷಕ ಪ್ರಸಾದ್‌ ಕುಮಾರ್‌ ಕೆ., ಕಾನೂನು ಸುವ್ಯವಸ್ಥೆ ಪಿಎಸ್‌ಐ ಸದಾಶಿವ ಆರ್‌. ಗವರೋಜಿ ನೇತೃತ್ವದಲ್ಲಿ ಅಪರಾಧ ಪತ್ತೆದಳ ತಂಡದ ಸಿಬಂದಿಗಳಾದ ಸಂತೋಷ ಕುಮಾರ್‌ ಕೆ.ಯು., ಸಂತೋಷ ಕುಮಾರ್‌, ರಾಘವೇಂದ್ರ ಬೈಂದೂರು, ಅವಿನಾಶ್‌, ರಾಮ ಪೂಜಾರಿ ತಂಡದಲ್ಲಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.