Rain ಕೊರತೆ: ನೀರಿನ ಮಿತ ಬಳಕೆಗೆ ಸೂಚನೆ: ಜನವರಿ ತಿಂಗಳಿಗೂ ಮೊದಲೇ ಶಾಲೆಗಳಿಗೆ ಸುತ್ತೋಲೆ

ಅಂತರ್ಜಲ ಮತ್ತಷ್ಟು ಕುಸಿತ: ಎಚ್ಚೆತ್ತುಕೊಳ್ಳದಿದ್ದರೆ ಬೇಸಗೆಯಲ್ಲಿ ಸಂಕಷ್ಟ ; ನೀರಿನ ದುರ್ಬಳಕೆಗೆ ಬೇಕಿದೆ ಸ್ವಯಂ ಕಡಿವಾಣ

Team Udayavani, Dec 12, 2023, 6:45 AM IST

rRain ಕೊರತೆ: ನೀರಿನ ಮಿತ ಬಳಕೆಗೆ ಸೂಚನೆ: ಜನವರಿ ತಿಂಗಳಿಗೂ ಮೊದಲೇ ಶಾಲೆಗಳಿಗೆ ಸುತ್ತೋಲೆ

ಕುಂದಾಪುರ: ರಾಜ್ಯದೆಲ್ಲೆಡೆ ಈ ಬಾರಿ ಮಳೆ ಪ್ರಮಾಣ ಗಣನೀಯ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಶಾಲೆಗಳಿಗೆ ನೀರಿನ ಮಿತ ಬಳಕೆ ಮಾಡುವಂತೆ ಈಗಾಗಲೇ ಅಂತರ್ಜಲ ನಿರ್ದೇಶನಾಲಯವು ಶಿಕ್ಷಣ ಇಲಾಖೆಯ ಮೂಲಕ ಸುತ್ತೋಲೆ ಕಳುಹಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಗೂ ಸದ್ಯವೇ ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಕುಂದಾಪುರ, ಬೈಂದೂರು ತಾಲೂಕುಗಳಲ್ಲಿ ಈಗಾಗಲೇ ಕುಡಿಯುವ ನೀರಿಗೆ ಸಂಬಂಧಿಸಿದ ಟಾಸ್ಕ್ಫೋರ್ಸ್‌ ಸಮಿತಿ ಸಭೆ ನಡೆದಿದೆ.

ಉಡುಪಿ ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಶೇ. 25ರಷ್ಟು ಮಳೆ ಕಡಿಮೆಯಾಗಿದೆ. ಈ ವರ್ಷದ ನವೆಂಬರ್‌ ಅಂತ್ಯಕ್ಕೆ ಜಿಲ್ಲೆಯ ಅಂತರ್ಜಲ ಮಟ್ಟ 6.94 ಮೀ.ನಷ್ಟಿದ್ದರೆ, ಕಳೆದ ವರ್ಷ ಇದೇ ವೇಳೆಗೆ 6.71 ಮೀ. ಇತ್ತು. ಅಂದರೆ 0.23 ಮೀ.ನಷ್ಟು ಇಳಿದಿದೆ. ಆದರೆ ದ.ಕ. ಜಿಲ್ಲೆಯಲ್ಲಿ ಒಟ್ಟಾರೆ ಸರಾಸರಿಗಿಂತ ಶೇ. 20ರಷ್ಟು ಕಡಿಮೆ ಮಳೆಯಾಗಿದ್ದರೂ ಅಂತರ್ಜಲ ಮಟ್ಟ ಕಳೆದ ವರ್ಷಕ್ಕಿಂತ ಈ ಬಾರಿ ಸುಧಾರಣೆಯಾಗಿದೆ. ಕಳೆದ ವರ್ಷ ಈ ವೇಳೆಗೆ 12.83 ಮೀ.ನಷ್ಟಿದ್ದರೆ, ಈಗ 9.29 ಮೀ. ಇದ್ದು, 3.54 ಮೀ. ಏರಿಕೆಯಾಗಿದೆ.

ಸುತ್ತೋಲೆಯಲ್ಲಿ ಏನಿದೆ?
ಹೆಚ್ಚಿನ ಪ್ರಮಾಣದ ನೀರು ಬಳಕೆಯಾಗುವ ಶಾಲೆ, ಆಸ್ಪತ್ರೆ, ಸಭಾಭವನ, ಹೊಟೇಲ್‌ಗ‌ಳಿಗೆ ಮುಂಜಾಗ್ರತಾ ಕ್ರಮವಾಗಿ ನೀರನ್ನು ಮಿತವಾಗಿ ಬಳಸುವಂತೆ ಜಿಲ್ಲಾ ಅಂತರ್ಜಲ ನಿರ್ದೇಶನಾಲಯವು ಸಾಮಾನ್ಯವಾಗಿ ಜನವರಿಯ ಬಳಿಕ ಸುತ್ತೋಲೆ ಕಳುಹಿಸುತ್ತದೆ. ಆದರೆ ಈ ಬಾರಿ ಉಡುಪಿಯಲ್ಲಿ ಶೇ. 25ರಷ್ಟು ಮಳೆ ಕಡಿಮೆಯಾಗಿ ಅಂತರ್ಜಲ ಮಟ್ಟ ಶೇ. 25ರಷ್ಟು ಇಳಿದಿರುವ ಕಾರಣ ಈಗಲೇ ಸುತ್ತೋಲೆ ಕಳುಹಿಸಿದ್ದು, ಈಗಿನಿಂದಲೇ ಶಾಲೆಗಳಲ್ಲಿ ಮಕ್ಕಳು ಅವಶ್ಯ ಇರುವಷ್ಟೇ ನೀರನ್ನು ಬಳಸಬೇಕು, ಎಲ್ಲಿಯೂ ನೀರು ಮಲಿನ ಹಾಗೂ ಪೋಲಾಗದಂತೆ ಎಚ್ಚರ ವಹಿಸಬೇಕು. ಕೈ, ತಟ್ಟೆ ತೊಳೆದ ನೀರನ್ನು ಹೂದೋಟ, ತರಕಾರಿ ತೋಟಕ್ಕೆ ಬಳಸುವ ಮೂಲಕ ಸದ್ಬಳಕೆ ಮಾಡಿಬೇಕು ಎಂದು ತಿಳಿಸಿದೆ.

ಜನರು ಕೂಡ ಜಾಗೃತರಾಗಿ ಈಗಿನಿಂದಲೇ ನೀರಿನ ಹಿತ-ಮಿತ ಬಳಕೆಗೆ ಮುಂದಾಗುವಂತೆ ಅಂತರ್ಜಲ ಇಲಾಖೆ ಮನವಿ ಮಾಡಿದೆ.

ಕಳೆದ ವರ್ಷಕ್ಕಿಂತ ಈ ಬಾರಿ ಶೇ. 25ರಷ್ಟು ಮಳೆ ಕೊರತೆಯಾಗಿದೆ. ಸಾಮಾನ್ಯವಾಗಿ ಮುಂಗಾರಿನಲ್ಲಿ ಶೇ. 80-85ರಷ್ಟು ಹಾಗೂ ಹಿಂಗಾರಿನಲ್ಲಿ ಶೇ. 15ರಷ್ಟು ಮಳೆಯಾಗುತ್ತದೆ. ಆದರೆ ಈ ಬಾರಿ ಎರಡೂ ಹಂಗಾಮಿನಲ್ಲೂ ಮಳೆ ಕಡಿಮೆಯಾಗಿದೆ. ಇನ್ನು ಒಂದಷ್ಟು ಮಳೆ ಬಂದರೆ ಅನುಕೂಲವಾಗಲಿದೆ. ಇಲ್ಲವಾದರೆ ಸಮಸ್ಯೆಯಾಗಲಿದೆ. ಈಗಿನಿಂದಲೇ ಎಚ್ಚರ ವಹಿಸುವುದು ಅತ್ಯಂತ ಅವಶ್ಯ. ರೈತರು ಕೃಷಿಗೆ ಬೆಳಗ್ಗೆ ಹಾಗೂ ಸಂಜೆ ವೇಳೆ ನೀರುಣಿಸಿದರೆ ಉತ್ತಮ.
– ಡಾ| ಎಂ. ದಿನಕರ ಶೆಟ್ಟಿ,
ಹಿರಿಯ ಭೂ ವಿಜ್ಞಾನಿ, ಅಂತರ್ಜಲ ಮತ್ತು ಭೂ ವಿಜ್ಞಾನ ಇಲಾಖೆ, ಉಡುಪಿ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.