17 ವರ್ಷಗಳ ಗುಡಿಸಲು ವಾಸಕ್ಕೆ ಇನ್ನೂ ಸಿಕ್ಕಿಲ್ಲ ಮುಕ್ತಿ

ಆಶ್ರಯ ಯೋಜನೆಯಡಿ ಮನೆಗೆ ಅರ್ಜಿ ಸಲ್ಲಿಸಿದರೂ ಸಿಕ್ಕಿಲ್ಲ  ವರ್ಷದಿಂದ ಸಿಕ್ಕಿಲ್ಲ ಅಂಗವಿಕಲ ಮಾಸಾಶನ

Team Udayavani, Feb 10, 2021, 12:26 PM IST

17 ವರ್ಷಗಳ ಗುಡಿಸಲು ವಾಸಕ್ಕೆ ಇನ್ನೂ ಸಿಕ್ಕಿಲ್ಲ  ಮುಕ್ತಿ

ಹೆಮ್ಮಾಡಿ: ಬೈಂದೂರು ವಿಧಾನಸಭಾ ಕ್ಷೇತ್ರದ ಹೆಮ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಕಟ್ಟುವಿನಲ್ಲಿ ಸುಬ್ರಾಯ ಆಚಾರ್‌ ಅವರ ಕುಟುಂಬ ಕಳೆದ 17 ವರ್ಷಗಳಿಂದ ಗುಡಿಸಲಲ್ಲಿಯೇ ವಾಸಿಸುತ್ತಿದೆ. ಆಶ್ರಯ ಯೋಜನೆಯಡಿ ಮನೆಗಾಗಿ ಅರ್ಜಿ ಸಲ್ಲಿಸಿದರೂ ಇನ್ನೂ ಮಂಜೂರಾಗಿಲ್ಲ. 5 ಜನರಿರುವ ಈ ಕುಟುಂಬ ಗುಡಿಸಲಲ್ಲಿ ಸಂಕಷ್ಟದ ಬದುಕು ಸಾಗಿಸುತ್ತಿದೆ.

ಈ ಕುಟುಂಬದ ಯಜಮಾನ ಸುಬ್ರಾಯ ಆಚಾರ್‌ ಅವರು ಹುಟ್ಟಿನಿಂದಲೇ ದೈಹಿಕ ನ್ಯೂನತೆ ಹೊಂದಿದ್ದು, ಪತ್ನಿ ಸತ್ಯವತಿ ಸುಬ್ರಾಯ ಆಚಾರ್‌ ಅವರು ಕೂಲಿ ಕೆಲಸ ಮಾಡಿಕೊಂಡು ಕುಟುಂಬದ ನಿರ್ವಹಣೆ ಮಾಡುತ್ತಿದ್ದಾರೆ. ಇವರಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ.

ಸೌಕರ್ಯ ವಂಚಿತ :

ಕೇಂದ್ರ ಸರಕಾರ ಬಡವರಿಗಾಗಿಯೇ ಉಜ್ವಲ ಯೋಜನೆಯಲ್ಲಿ ಗ್ಯಾಸ್‌ ಸಂಪರ್ಕ ಜಾರಿಗೆ ತಂದಿದ್ದರೂ ಇವರಿಗೆ ಮಾತ್ರ ಆ ಸೌಲಭ್ಯವೂ ಸಿಕ್ಕಿಲ್ಲ. ಪಂಚಾಯತ್‌ನಿಂದ ನಳ್ಳಿ ಸಂಪರ್ಕವಿದ್ದರೂ, ಸರಿಯಾಗಿ ಸರಬರಾಜು ಆಗದ ಕಾರಣ, ಬೆಳಗ್ಗೆ ಬೇರೆಯವರ ಮನೆಯಿಂದ ನೀರು ತರಬೇಕಾದ ಸ್ಥಿತಿ ಇವರದು. ಬಡವರಿಗಾಗಿಯೇ ಆಶ್ರಯ ಮನೆ ಯೋಜನೆ ಜಾರಿಗೆ ತಂದಿದ್ದರೂ ಇವರಿಗೆ ಮಾತ್ರ ಇನ್ನೂ ಸಿಕ್ಕಿಲ್ಲ. ಅಕ್ರಮ ಸಕ್ರಮ, ಕುಮ್ಕಿ ಭೂಮಿ ಹಕ್ಕು, 94ಸಿ, 94 ಸಿಸಿ ಎಲ್ಲ ಯೋಜನೆಗಳಿದ್ದರೂ, ಈ ಕುಟುಂಬ ಅರ್ಹವಾಗಿದ್ದರೂ ಇನ್ನೂ ಹಕ್ಕುಪತ್ರ ಸಿಕ್ಕಿಲ್ಲ.

ಕಳೆದ 17 ವರ್ಷದಿಂದ ನಮ್ಮ ಕುಟುಂಬ ಗುಡಿಸಲಲ್ಲ ವಾಸವಿದ್ದು, ಆಶ್ರಯ ಯೋಜನೆಯಡಿ ಮನೆಗೆ ಅರ್ಜಿ ಸಲ್ಲಿಸಿದ್ದರೂ, ಸಿಕ್ಕಿಲ್ಲ. ನನಗೆ ಕೆಲಸ ಮಾಡಲು ಆಗೋದಿಲ್ಲ. ಪತ್ನಿ ಕೂಲಿ ಮಾಡಿ ನಮ್ಮ ಸಾಕುವ ಜತೆ ನನ್ನ ಆರೋಗ್ಯ ನೋಡಿಕೊಳ್ಳುತ್ತಿದ್ದಾಳೆ. ಪ್ರತಿ ತಿಂಗಳು ಸಿಗುತ್ತಿದ್ದ ಅಂಗವಿಕಲ ಮಾಸಿಕ ವೇತನವೂ ಕಳೆದೊಂದು ವರ್ಷದಿಂದ ಸಿಕ್ಕಿಲ್ಲ. ಮನೆಯೊಂದು ಮಂಜೂರಾದರೆ ಅಷ್ಟೇ ಸಾಕು. – ಸುಬ್ರಾಯ ಆಚಾರ್‌, ಹೆಮ್ಮಾಡಿ ಕಟ್ಟು ನಿವಾಸಿ

ಸುಬ್ರಾಯ ಆಚಾರ್‌ ಅವರ ಕುಟುಂಬ ಆಶ್ರಯ ಯೋಜನೆಯಡಿ ಅರ್ಜಿ ಕೊಟ್ಟ ಬಗ್ಗೆ ಮಾಹಿತಿಯಿಲ್ಲ. ಅರ್ಜಿ ಕೊಟ್ಟಲ್ಲಿ ಕೂಡಲೇ ಪರಿಶೀಲನೆ ನಡೆಸಿ, ಅನುದಾನ ಮಂಜೂರಾತಿಗೆ ಪ್ರಯತ್ನಿಸಲಾಗುವುದು. – ಮಂಜು ಬಿಲ್ಲವ, ಹೆಮ್ಮಾಡಿ ಗ್ರಾ.ಪಂ. ಪಿಡಿಒ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.