ರಾಡಿಯೆದ್ದ ಕೆರಾಡಿ ಮುಖ್ಯ ರಸ್ತೆ; ಸಂಚಾರ ದುಸ್ತರ

400 ಮೀ.ನಷ್ಟು ದೂರದವರೆಗೆ ವಾಹನ ಸಂಚರಿಸಲು ಸಾಧ್ಯವಿಲ್ಲದಷ್ಟು ಹೊಂಡಮಯ

Team Udayavani, Aug 4, 2022, 2:58 PM IST

7

ನೇರಳಕಟ್ಟೆ: ಹೆಮ್ಮಕ್ಕಿ ಕ್ರಾಸ್‌ – ಚಿತ್ತೂರು ಮುಖ್ಯ ರಸ್ತೆಯ ಹಾಡಿಬಿರ್ಗಿ ಕ್ರಾಸ್‌ನಿಂದ ಕೆರಾಡಿಗೆ ಸಂಪರ್ಕಿಸುವ ಮುಖ್ಯ ರಸ್ತೆಯು ಮಳೆಗೆ ಅಲ್ಲಲ್ಲಿ ಹಲವೆಡೆ ರಾಡಿಯೆದ್ದು, ಸಂಚಾರವೇ ದುಸ್ತರಗೊಡಿದೆ. ಸುಮಾರು 1 ಕಿ.ಮೀ. ಉದ್ದದ ರಸ್ತೆಯಲ್ಲಿ 400 ಮೀ.ನಷ್ಟು ದೂರದವರಗೆ ವಾಹನ ಸಂಚರಿಸಲು ಸಾಧ್ಯವಿಲ್ಲದಷ್ಟು ಹೊಂಡಮಯಗೊಂಡಿದೆ.

ಹಾಡಿಬಿರ್ಗಿಯಿಂದ ಕೆರಾಡಿ ಗ್ರಾ.ಪಂ., ಪೇಟೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ. ಇದಲ್ಲದೆ ಶ್ರೀ ವರಸಿದ್ಧಿ ವಿನಾಯಕ ಕಾಲೇಜು, ಬ್ಯಾಂಕ್‌, ಉಪ ಆರೋಗ್ಯ ಕೇಂದ್ರ, ಕೆರಾಡಿ ಶಾಲೆ, ಮೂಡುಗಲ್ಲು ಕಡೆಗೂ ಸಂಪರ್ಕ ಕಲ್ಪಿಸುವ ರಸ್ತೆ ಇದೆ. ನಿತ್ಯ ನೂರಾರು ವಾಹನ, ಬಸ್‌ಗಳು, ಶಾಲಾ ವಾಹನಗಳು ಸಂಚರಿಸುವ ಮಾರ್ಗ ಇದಾಗಿದೆ. ಕೆರಾಡಿ ಭಾಗದ ಶೇ. 90ರಷ್ಟು ಮಂದಿ ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ.

ಕೇವಲ ಒಂದು ಕಿ.ಮೀ. ದೂರದ ರಸ್ತೆಯ 400 ಮೀ.ನಷ್ಟು ಈಗಲೇ ಹಲವೆಡೆ ಈ ರಸ್ತೆ ಹದಗೆಟ್ಟಿದ್ದು, ಇನ್ನು ಮಳೆ ಮುಂದುವರಿದಷ್ಟು ರಸ್ತೆ ಮಧ್ಯೆ ಇನ್ನಷ್ಟು ಕಡೆಗಳಲ್ಲಿ ಹೊಂಡ-ಗುಂಡಿ ಬೀಳುವ ಸಾಧ್ಯತೆಗಳಿವೆ.

ಕಾಂಕ್ರೀಟ್‌ ಕಾಮಗಾರಿಗೆ ಬೇಡಿಕೆ

ಹಾಡಿಬಿರ್ಗಿ ಕ್ರಾಸ್‌-ಕೆರಾಡಿ ರಸ್ತೆ ಹಾಳಾಗಲು ಮುಖ್ಯ ಕಾರಣ ರಸ್ತೆಯ ಎರಡೂ ಬದಿಗಳಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಆಗಿದೆ. ಒಂದೆರಡು ಕಡೆಗಳಲ್ಲಿ ಅಗತ್ಯವಿದ್ದರೂ ಮೋರಿ ಅಳವಡಿಸಿಲ್ಲ. ಅದಲ್ಲದೆ ಒಂದು ಕಡೆಯಿಂದ ಜೇಡಿಮಣ್ಣಿನ ಬರೆಯಿದ್ದು, ಅದು ವರ್ಷ- ವರ್ಷವೂ ಮಳೆಗಾಲದಲ್ಲಿ ಕುಸಿಯುತ್ತದೆ. ಹಾಗಾಗಿ ಈ 400 ಮೀ. ಉದ್ದದ ರಸ್ತೆಗೆ ಡಾಮರು ಹಾಕಿದರೂ ಒಂದೇ ಮಳೆಗಾಲದಲ್ಲಿ ಎದ್ದು ಹೋಗುತ್ತದೆ. ಕಾಂಕ್ರೀಟ್‌ಕಾಮಗಾರಿ ನಡೆಸಿದರೆ ಮಾತ್ರ ಅನುಕೂಲವಾಗಬಹುದು ಎನ್ನುವುದು ಜನಾಭಿಪ್ರಾಯ.

ಕಾಂಕ್ರೀಟ್‌ ಕಾಮಗಾರಿಗಾಗಿ ಶಾಸಕರಿಗೆ ಮನವಿ: ಕೆರಾಡಿ ಪಂ. ವ್ಯಾಪ್ತಿಯಲ್ಲಿ ಶಾಸಕರಿಂದ 18 ಕೋ.ರೂ. ಅನುದಾನವನ್ನು ನೀಡಿದ್ದಾರೆ. ಈ ಪಂಚಾಯತ್‌ ರಸ್ತೆಯು ಹದಗೆಟ್ಟು ಜನಸಾಮಾನ್ಯರಿಗೆ ತೊಂದರೆ ಆಗುತ್ತಿರುವ ಬಗ್ಗೆ ನಾವು ಶಾಸಕರ ಗಮನಕ್ಕೆ ತಂದಿದ್ದೇವೆ. ಕಾಂಕ್ರೀಟ್‌ ಕಾಮಗಾರಿಗಾಗಿ ಅನುದಾನಕ್ಕೆ ಮನವಿ ಸಲ್ಲಿಸಿದ್ದೇವೆ. ಮುಂದಿನ ಹಂತದಲ್ಲಿ ಆದ್ಯತೆ ನೆಲೆಯಲ್ಲಿ ಈ ರಸ್ತೆಗೆ ಅನುದಾನ ನೀಡುವ ಭರವಸೆ ನೀಡಿದ್ದಾರೆ. – ಸುದರ್ಶನ್‌ ಶೆಟ್ಟಿ, ಕೆರಾಡಿ ಗ್ರಾ.ಪಂ. ಉಪಾಧ್ಯಕ್ಷರು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.